AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮೂವರು ಮನೆಗಳ್ಳರ ಬಂಧನ

Kolar News: ಮೂವರು ಮನೆಗಳ್ಳರನ್ನು ಪೊಲೀಸರು ಬಂಧಿಸುವ ಮೂಲಕ 254 ಗ್ರಾಂ ಚಿನ್ನಾಭರಣ, 500 ಗ್ರಾಂ ಬೆಳ್ಳಿ ವಸ್ತುಗಳು, 2 ಕಾರು ಜಪ್ತಿ ಮಾಡಿದ್ದಾರೆ. ಆ ಮೂಲಕ ಶ್ರೀನಿವಾಸಪುರದಲ್ಲಿ 2 ಕಳವು ಪ್ರಕರಣವನ್ನು ಕೋಲಾರ ಪೊಲೀಸರು ಭೇದಿಸಿದ್ದಾರೆ.  

ಕೋಲಾರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮೂವರು ಮನೆಗಳ್ಳರ ಬಂಧನ
ಬಂಧಿತರಿಂದ ಜಪ್ತಿ ಮಾಡಿದ ವಸ್ತುಗಳು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Aug 06, 2023 | 3:23 PM

Share

ಕೋಲಾರ, ಆಗಸ್ಟ್​ 06: ಮೂವರು ಮನೆಗಳ್ಳರನ್ನು (thieves) ಪೊಲೀಸರು ಬಂಧಿಸುವ ಮೂಲಕ 254 ಗ್ರಾಂ ಚಿನ್ನಾಭರಣ, 500 ಗ್ರಾಂ ಬೆಳ್ಳಿ ವಸ್ತುಗಳು, 2 ಕಾರು ಜಪ್ತಿ ಮಾಡಿದ್ದಾರೆ. ತುಮಕೂರು ಮೂಲದ ಜಗನ್ನಾಥ್, ಚಿಕ್ಕಬಳ್ಳಾಪುರ ಮೂಲದ ಶ್ರೀನಾಥ್, ಉಮಾಶಂಕರ್​ ಬಂಧಿತರು. ಜು.16ರಂದು ಕೋಲಾರದ ಕೀಲುಕೋಟೆ ಬಡಾವಣೆ ಮನೆಯಲ್ಲಿ ಕಳವು ಮಾಡಿದ್ದರು. ಸದ್ಯ ಆ ಕಳ್ಳರನ್ನು ಬಂಧಿಸುವ ಮುಲಕ ಶ್ರೀನಿವಾಸಪುರದಲ್ಲಿ 2 ಕಳವು ಪ್ರಕರಣವನ್ನು ಕೋಲಾರ ಪೊಲೀಸರು ಭೇದಿಸಿದ್ದಾರೆ.

ಮನೆಯ ಮುಂದೆ ನಿಲ್ಲಿಸಿದ್ದ ಕಾರು ಕಳ್ಳತನ

ಹಾಸನ: ಮನೆಯ ಮುಂದೆ ನಿಲ್ಲಿಸಿದ್ದ ಕಾರು ಕಳ್ಳತನ ಮಾಡಿದ ಖದೀಮರು ಬೈಕ್ ಬಿಟ್ಟು ಹೋಗಿರುವಂತಹ ಘಟನೆ ನಗರದ ವಾರ್ಡ್‌ ನಂಬರ್‌ 35 ಕೆ.ಹೊಸಕೊಪ್ಪಲಿನಲ್ಲಿ ನಡೆದಿದೆ. ಅಭಿಷೇಕ್‌ ಎಂಬುವವರಿಗೆ ಸೇರಿದ ಮಾರುತಿ 800 ಕಾರು ಸೇರಿತ್ತು. ಕಳ್ಳರು ಕಾರಿನ ಡೋರ್ ತೆಗೆದು ಸ್ವಲ್ಪ ದೂರು ಕಾರನ್ನು ತಳ್ಳಿಕೊಂಡು ಹೋಗಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಅಪಾರ್ಟ್​ಮೆಂಟ್​ನಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

ಆನಂತರ ಕಾರು ಸ್ಟಾರ್ಟ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಕಾರು ಕದಿಯಲು ಕಳ್ಳತನ ಮಾಡಿಕೊಂಡು ಬೈಕ್‌ನಲ್ಲಿ ಬಂದಿದ್ದರು. ಬೈಕ್‌ನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಕಾರು ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಕೆ.ಆರ್.ಪುರಂ ಪೊಲೀಸ್‌ ಠಾಣೆ ಪ್ರಕರಣ ದಾಖಲಿಸಲಾಗಿದೆ.

ಟೊಮ್ಯಾಟೊ ಆಯಿತು ಈಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ

ಚಿಕ್ಕಬಳ್ಳಾಫುರ: ತೋಟದಲ್ಲಿ ಬೆಳೆದು ನಿಂತಿದ್ದ ದಾಳಿಂಬೆ ಹಣ್ಣುಗಳನ್ನು ಕಳ್ಳರು ಕದ್ದು ಪರಾರಿಯಾಗಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್ ಬಳಿ ನಡೆದಿದೆ. ದಾಳಿಂಬೆಗೆ ಚಿನ್ನದ ಬೆಲೆ ಹಿನ್ನಲೆ ರಾತ್ರೋ ರಾತ್ರಿ ಕಳ್ಳತನ ಮಾಡಲಾಗಿದೆ. ರೈತ ಜಗದೀಶ ಎನ್ನುವವರಿಗೆ ಸೇದಿದ್ದ ದಾಳಿಂಬೆ ತೋಟದಲ್ಲಿ ಕಳ್ಳತನ ಮಾಡಲಾಗಿದೆ.

ಇದನ್ನೂ ಓದಿ: ಮಚ್ಚು ಹಿಡಿದು ಮೆರೆದವನು ಮಚ್ಚಿನಿಂದಲೇ ಅಂತ್ಯ, ತನ್ನ ಭವಿಷ್ಯವನ್ನು ತಾನೇ ನುಡಿದಿದ್ದ ಹತ್ಯೆಯಾದ ರೌಡಿಶೀಟರ್

ನಾಲ್ಕು ಜನ ದುಷ್ಕರ್ಮಿಗಳಿಂದ ದಾಳಿಂಬೆ ಕಳ್ಳತನ ಮಾಡಿದ್ದು, ಲಕ್ಷಾಂತರ ರೂಪಾಯಿ ಮೌಲ್ಯ ನಷ್ಟವಾಗಿದೆ ಎನ್ನಲಾಗುತ್ತಿದೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಮರದಿಂದ ಕೆಳಗೆ ಬಿದ್ದು ಗನ್​ಮ್ಯಾನ್ ಸಾವು

ಮಡಿಕೇರಿ: ಕುಶಾಲನಗರ ತಾಲೂಕಿನ ಕಾನ್​ಬೈಲು ಗ್ರಾಮದಲ್ಲಿ ಮರದಿಂದ ಕೆಳಗೆ ಬಿದ್ದು ಗನ್​ಮ್ಯಾನ್ ಲೋಕೇಶ್(40) ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮಾಜಿ ಶಾಸಕ ಅಪ್ಪಚ್ಚು ರಂಜನ್​ಗೆ ಮೃತ ಲೋಕೇಶ್ ಗನ್​ಮ್ಯಾನ್ ಆಗಿದ್ದ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:20 pm, Sun, 6 August 23

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು