AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ನಕಲಿ ವೈದ್ಯರ ಹಾವಳಿಗೆ ಹೋಯ್ತು 8 ವರ್ಷದ ಬಾಲಕಿಯ ಜೀವ!

ಕೋಲಾರದಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದ್ದು, ರೋಗಿಗಳ ಜೀವದ ಜೊತೆ ಆಟವಾಡುತ್ತಿದ್ದಾರೆ. ಕೋಲಾರದ ಮಾಲೂರು ತಾಲ್ಲೂಕು ದೊಡ್ಡಿಗ್ಗಲೂರು ಗ್ರಾಮದಲ್ಲೊಂದು 8 ವರ್ಷದ ಬಾಲಕಿ ಈ ನಕಲಿ ವೈದ್ಯರ ಕಾಟಕ್ಕೆ ಬಲಿಯಾಗಿದ್ದಾಳೆ. ಜ್ವರ ಎಂದು ಆಸ್ಪತ್ರೆಗೆ ಹೋದ ಮಗುವಿಗೆ ನೀಡಿದ ಇಂಜೆಕ್ಷನ್​ನಿಂದಲೇ ಮಗು ಸಾವನ್ನಪ್ಪಿದೆ ಎಂದು ಶಂಕೆ ವ್ಯಕ್ತವಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರದಲ್ಲಿ ನಕಲಿ ವೈದ್ಯರ ಹಾವಳಿಗೆ ಹೋಯ್ತು 8 ವರ್ಷದ ಬಾಲಕಿಯ ಜೀವ!
Kolar Girl Death
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Oct 03, 2025 | 11:34 AM

Share

ಕೋಲಾರ, ಅಕ್ಟೋಬರ್ 3: ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನಕಲಿ ವೈದ್ಯರ ಕಾಟ ಹೆಚ್ಚುತ್ತಿದೆ. ಯಾವುದೇ ವೈದ್ಯಕೀಯ ಪದವಿಯಿಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದರಿಂದ ಜನರ ಜೀವಕ್ಕೇ ಕುತ್ತು ಬಂದಿದೆ  ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ದೊಡ್ಡಿಗ್ಗಲೂರು ಗ್ರಾಮದಲ್ಲೊಂದು ದುರ್ಘಟನೆ ನಡೆದಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ಹೋದ ಬಾಕಿಯೊಬ್ಬಳು ವೈದ್ಯರ ಚಿಕಿತ್ಸೆಯಿಂದಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಆಕೆಗೆ ಚಿಕಿತ್ಸೆ ನೀಡಿದವರು ನಕಲಿ ವೈದ್ಯರೆಂದು ಹೇಳಲಾಗುತ್ತಿದೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

8 ವರ್ಷದ ಬಾಲಕಿಯ ಸಾವಿಗೆ ಕಾರಣವೇನು?

ದೊಡ್ಡಿಗಲ್ಲೂರು ಗ್ರಾಮದ 8 ವರ್ಷದ ಬಾಲಕಿಯೊಬ್ಬಳು ಜ್ವರದಿಂದ ಬಳಲುತ್ತಿದ್ದಾಗ ಪೋಷಕರು ಸಂತೆಹಳ್ಳಿ ಗ್ರಾಮದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕ್ಲಿನಿಕ್​ನಲ್ಲಿ ಮಗುವಿಗೆ ನೀಡಿದ ಇಂಜೆಕ್ಷನ್​ನಿಂದ ಬಾಲಕಿ ತೀವ್ರ ಅಸ್ವಸ್ಥಳಾಗಿದ್ದಾಳೆ. ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿಗೆ ಚಿಕತ್ಸೆ ಮಾಡಿದವರು ನಕಲಿ ವೈದ್ಯರೆಂದು ತಿಳಿದುಬಂದಿದ್ದು, ಅವರು ಕೊಟ್ಟ ಇಂಜೆಕ್ಷನ್ ಪರಿಣಾಮವಾಗಿಯೇ ಬಾಲಕಿ ಸಾವನ್ನಪ್ಪಿದ್ದಾಳೆಂದು ಆರೋಪ ಕೇಳಿಬಂದಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ರಿಯಲ್ಲಿ ಪ್ರಕರಣ ದಾಖಲಾಗಿದೆ.

ಹಲವಾರು ಜಿಲ್ಲೆಗಳಲ್ಲಿ ನಕಲಿ ವೈದ್ಯರ ಕ್ಲಿನಿಕ್​ಗೆ ಬೀಗ

ಸುಮಾರು 3 ವರ್ಷಗಳ ಹಿಂದೆ ಇದೇ ಕೋಲಾರ ಜಿಲ್ಲೆಯಲ್ಲಿ 3 ಕ್ಲಿನಿಕ್​ಗಳ ಮೇಲೆ ತಹಶೀಲ್ದಾರರು ದಾಳಿ ಮಾಡಿದ್ದರು. ಸೂಕ್ತ ದಾಖಲೆಗಳಿಲ್ಲದ ಕಾರಣ ನಕಲಿ ವೈದ್ಯರ 3 ಕ್ಲಿನಿಕ್​ಗಳನ್ನೂ ಮುಚ್ಚಲಾಗಿತ್ತು. ಬೆಂಗಳೂರಿನಲ್ಲಿಯೂ ಕೋರಮಂಗಲದಲ್ಲಿ ಆಯುರ್ವೇದ ಓದಿಕೊಂಡಿದ್ದ ವೈದ್ಯರೊಬ್ಬರು ಕಳೆದ 10 ವರ್ಷಗಳಿಂದಲೂ ಅಲೋಪತಿ ಚಿಕಿತ್ಸೆ ಕೊಡುತ್ತಿರುವುದು ಬಯಲಾಗಿತ್ತು. ಅದರೊಂದಿಗೆ ಚರ್ಮ ಶಾಸ್ತ್ರದ ಬಗ್ಗೆ ಓದದೇ ಇರುವವರೂ ಬ್ಯೂಟಿ ಟ್ರೀಟ್ಮೆಂಟ್ ನೀಡುತ್ತಿದ್ದರು.

ಇದನ್ನೂ ಓದಿ ಬೆಂಗಳೂರಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿರುವ ನಕಲಿ ವೈದ್ಯರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯ ಪ್ಲ್ಯಾನ್ ಇದು

ಹೀಗೆ ಬೆಂಗಳೂರು, ಕಲಬುರಗಿ, ಬೆಳಗಾವಿ ಸೇರಿದಂತೆ 100 ಕ್ಕೂ ಹೆಚ್ಚು ನಕಲಿ ವೈದ್ಯರ ಹೆಸರು ಬೆಳಕಿಗೆ ಬಂದಿತ್ತು. ಇವರೆಲ್ಲರ ವಿರುದ್ಧ ಕ್ರಮ ಕೈಗೊಂಡು,ದಂಡ ವಿಧಿಸಿದ್ದರು.ಅಷ್ಟೇ ಅಲ್ಲದೇ ಕೆಲವು ಕ್ಲಿನಿಕ್​ಗಳಿಗೆ ಬೀಗ ಹಾಕಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!