AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ವಿದ್ಯುತ್ ಪ್ರವಹಿಸಿ ಸಹೋದರರಿಬ್ಬರ ಸಾವು

ವಿದ್ಯುತ್ ಸ್ಪರ್ಶದಿಂದ ಸಹೋದರರಿಬ್ಬರು ಸಾವನ್ನಪ್ಪಿರುವ ಘಟನೆ ಕೆಜಿಎಫ್​ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ.

ಕೋಲಾರ:  ವಿದ್ಯುತ್ ಪ್ರವಹಿಸಿ ಸಹೋದರರಿಬ್ಬರ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Nov 04, 2022 | 3:50 PM

Share

ಕೋಲಾರ: ವಿದ್ಯುತ್ ಸ್ಪರ್ಶದಿಂದ ಸಹೋದರರಿಬ್ಬರು ಸಾವನ್ನಪ್ಪಿರುವ ಘಟನೆ ಕೆಜಿಎಫ್​ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀಸಾಗರ ಗ್ರಾಮದ ರಮೇಶ್(30), ಮುರಳಿ(28) ಮೃತ ಸಹೋದರರು. ತೋಟವೊಂದಕ್ಕೆ ಅಳವಡಿಸಿದ್ದ ಸೌರ ಬೇಲಿ ಮೇಲೆ ವಿದ್ಯುತ್ ತಂತಿ ಬಿದ್ದಿತ್ತು. ಇದನ್ನು ತಿಳಿಯದೆ ಅಣ್ಣ ಸೌರ ಬೇಲಿ ಮುಟ್ಟಿದ್ದಾರೆ. ಆಗ ತಮ್ಮ, ಅಣ್ಣನನ್ನು ರಕ್ಷಣೆ ಮಾಡಲು ಹೋಗಿದ್ದು, ಅಣ್ಣ ಮತ್ತು ತಮ್ಮ ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ಇಬ್ಬರನ್ನು ಕಳೆದುಕೊಂಡು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕ್ರೇನ್ ಹರಿದು ವಿದ್ಯಾರ್ಥಿನಿ ಸಾವು: ರಸ್ತೆ ತಡೆದು ಪ್ರತಿಭಟನೆ

ಬೆಂಗಳೂರು: ಕ್ರೇನ್ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಪೂರ್ವ ತಾಲೂಕಿನ ಕನ್ನಮಂಗಲ ಗೇಟ್ ಬಳಿ ನಡೆದಿದೆ. ನೂರ್ ಫಿಜ ಮೃತ ವಿದ್ಯಾರ್ಥಿನಿ. (ನ. 2) ರಂದು ವಿದ್ಯಾರ್ಥಿನಿ ನೂರ್ ಫಿಜ ಕಾಲೇಜಿನಿಂದ ಮನೆಗೆ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದಳು. ಈ ವೇಳೆ ಹಿಂಬದಿಯಿಂದ ಬಂದ ಕ್ರೇನ್ ವಿದ್ಯಾರ್ಥಿನಿ ಮೇಲೆ ಹರಿದಿದೆ.

ಇದರಿಂದ ತೀರ್ವ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ವೈಟ್ ಫೀಲ್ಡ್ ಖಾಸಗಿ ಅಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ನಿನ್ನೆ (ನ. 3) ರಂದು ಸಾವನ್ನಪ್ಪಿದ್ದಾಳೆ.

ಈ ಸಂಬಂಧ ವೈಟ್ ಫೀಲ್ಡ್ ಹೊಸಕೋಟೆ ರಸ್ತೆಯ ಕನ್ನಮಂಗಲ ಬಳಿ ಸ್ಥಳಿಯರು ಪ್ರತಿಭಟನೆ ಮಾಡುತ್ತಿದ್ದಾರೆ. ಕನ್ನಮಂಗಲ ರಸ್ತೆಯಲ್ಲಿದ್ದ ಸ್ಪೀಡ್ ಬ್ರೇಕರ್​ನ್ನು ಅಧಿಕಾರಿಗಳು ಈ ಹಿಂದೆ ತೆರವುಗೊಳಿಸಿದ್ದರು. ಇದರಿಂದಲೇ ಅಪಘಾತ ಸಂಭವಿಸಿದೆ ಎಂದು ಸ್ಥಳಿಯರು ಆರೋಪಿಸುತ್ತಿದ್ದಾರೆ. ಈಗ ರಸ್ತೆಯ ಪುಟ್ ಪಾತ್ ಒತ್ತುವರಿ ತೆರವುಗೊಳಿಸಿ ಸ್ಪೀಡ್ ಬ್ರೇಕರ್ ಹಾಕುವಂತೆ ಸ್ಥಳಿಯರು ಆಗ್ರಹಿಸುತ್ತಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:50 pm, Fri, 4 November 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ