ಸಿಲಿಕಾನ್ ಸಿಟಿಯಲ್ಲಿ ವೃದ್ಧ ದಂಪತಿಯನ್ನ ಹತ್ಯೆ ಮಾಡಿದ್ದ ಆರೋಪಿ ಅಂದರ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ವೃದ್ಧ ದಂಪತಿಯ ಡಬಲ್ ಮರ್ಡರ್ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತಡರಾತ್ರಿ ಜೆ.ಪಿ.ನಗರದ ವೃದ್ಧ ದಂಪತಿ ಗೋವಿಂದಯ್ಯ ಹಾಗೂ ಶಾಂತಮ್ಮ ಕೊಲೆಯಾಗಿತ್ತು. ಪ್ರಕರಣ ಸಂಬಂಧ ದಂಪತಿಯ ಮೊದಲ ಪುತ್ರ ನವೀನ್ ಬಾಮೈದ ರಾಕೇಶ್ ಅಲಿಯಾಸ್ ರಾಕ್ಸ್​ನನ್ನು ಪೊಲೀಸರು ಬಂಧಿಸಿದ್ದಾರೆ. 2008 ರಲ್ಲಿ ಪವಿತ್ರ ಎಂಬುವರನ್ನ ವೃದ್ಧ ದಂಪತಿಯ ಪುತ್ರ ನವೀನ್ ಮದುವೆಯಾಗಿದ್ದ. ಆ ಬಳಿಕ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನವೀನ್ ಪತ್ನಿ ಪವಿತ್ರ ಮನೆ ಬಿಟ್ಟು […]

ಸಿಲಿಕಾನ್ ಸಿಟಿಯಲ್ಲಿ ವೃದ್ಧ ದಂಪತಿಯನ್ನ ಹತ್ಯೆ ಮಾಡಿದ್ದ ಆರೋಪಿ ಅಂದರ್
ಸಾಧು ಶ್ರೀನಾಥ್​

Updated on: May 11, 2020 | 2:25 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ವೃದ್ಧ ದಂಪತಿಯ ಡಬಲ್ ಮರ್ಡರ್ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ತಡರಾತ್ರಿ ಜೆ.ಪಿ.ನಗರದ ವೃದ್ಧ ದಂಪತಿ ಗೋವಿಂದಯ್ಯ ಹಾಗೂ ಶಾಂತಮ್ಮ ಕೊಲೆಯಾಗಿತ್ತು. ಪ್ರಕರಣ ಸಂಬಂಧ ದಂಪತಿಯ ಮೊದಲ ಪುತ್ರ ನವೀನ್ ಬಾಮೈದ ರಾಕೇಶ್ ಅಲಿಯಾಸ್ ರಾಕ್ಸ್​ನನ್ನು ಪೊಲೀಸರು ಬಂಧಿಸಿದ್ದಾರೆ.

2008 ರಲ್ಲಿ ಪವಿತ್ರ ಎಂಬುವರನ್ನ ವೃದ್ಧ ದಂಪತಿಯ ಪುತ್ರ ನವೀನ್ ಮದುವೆಯಾಗಿದ್ದ. ಆ ಬಳಿಕ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನವೀನ್ ಪತ್ನಿ ಪವಿತ್ರ ಮನೆ ಬಿಟ್ಟು ತೆರಳಿದ್ದರು. ತವರಿಗೆ ಮರಳಿದ್ದ ಪವಿತ್ರರನ್ನ ಕರೆತರುವಂತೆ ರಾಕೇಶ್​ಗೆ ನವೀನ್ ಕರೆ ಮಾಡಿದ್ದ. ಕೌಟುಂಬಿಕ ನ್ಯಾಯಾಲಯದ ಕೌನ್ಸೆಲಿಂಗ್ ಬಳಿಕ ಪವಿತ್ರ ಮನೆಗೆ ವಾಪಸ್ ಬಂದಿದ್ದರು.

ಇದೇ ವಿಚಾರವಾಗಿ ನವೀನ್ ಹಾಗೂ ರಾಕೇಶ್ ಮಧ್ಯೆ ಮಾತಿಗೆ ಮಾತು ಬೆಳೆದಿತ್ತು. ಇದೇ ದ್ವೇಷದಿಂದ ನವೀನ್ ಬಾಮೈದ ಜೆ.ಪಿ.ನಗರದ ಮನೆಗೆ ಬಂದು ದಂಪತಿಯನ್ನು ಹತ್ಯೆ ಮಾಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿದ್ದ ಕೋಣನಕುಂಟೆ ಪೊಲೀಸರು ಆರೋಪಿ ರಾಕೇಶ್​ನನ್ನು ಬಂಧಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us