AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ; ಇದ್ದೊಬ್ಬ ಮಗನನ್ನು ಕಳೆದುಕೊಂಡು ಕಂಗಾಲಾದ ಕುಟುಂಬ

ಅವರಿಬ್ಬರೂ ಸ್ನೇಹಿತರು, ಇಬ್ಬರು ಜೀವಕ್ಕೆ ಜೀವ ಕೊಡುವಂತೆ ಇದ್ದರು. ಆದ್ರೆ, ಹಣದ ವಿಚಾರ ಬಂದಾಗ ಸ್ವೇಹಿತ ದುಷ್ಮನ್ ಆಗಿದ್ದ. ಹಣ ಕೊಡುತ್ತೇನೆ ಎಂದು ಹೇಳಿ ಕರೆದುಕೊಂಡು ಬಂದು ಬೆಟ್ಟದ ಮೇಲೆ ದೂಡಿ ಕೊಲೆ ಮಾಡಿದ್ದಾನೆ. ಮನೆಗೆ ಆಧಾರವಾಗಿದ್ದ ಇದ್ದೊಬ್ಬ ಮಗನನ್ನು ಕಳೆದುಕೊಂಡ ಕುಟುಂಬ ಕಂಗಾಲಾಗಿದೆ.

ಕೊಪ್ಪಳ: ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ; ಇದ್ದೊಬ್ಬ ಮಗನನ್ನು ಕಳೆದುಕೊಂಡು ಕಂಗಾಲಾದ ಕುಟುಂಬ
ಕೊಪ್ಪಳ ಯುವಕ ಕೊಲೆ ಪ್ರಕರಣ
ಸಂಜಯ್ಯಾ ಚಿಕ್ಕಮಠ
| Edited By: |

Updated on:Dec 19, 2023 | 4:53 PM

Share

ಕೊಪ್ಪಳ, ಡಿ.19: ನಗರದ ಹೊರವಲಯದ ಮಳೆ ಮಹದೇಶ್ವರ ಬೆಟ್ಟದಲ್ಲಿ ಯುವಕನ ಶವವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಕೊಪ್ಪಳ(Koppala) ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.‌ ನಂತರ ಮೃತ ಯುವಕನ ಹೆಸರು ಬಸವರಾಜ್ ಹೊಸಮನಿ ಎಂದು ಗೊತ್ತಾಗಿದೆ. ಇಪ್ಪತ್ತೆರಡು ವರ್ಷದ ಬಸವರಾಜ್, ಕೊಪ್ಪಳ ತಾಲೂಕಿನ ಮೋರನಾಳ್ ಗ್ರಾಮದ ನಿವಾಸಿ. ಗ್ರಾಮದಲ್ಲಿಯೇ ಸಣ್ಣ ಪುಟ್ಟ ಕೆಲಸ ಮಾಡಿಕೊಂಡಿದ್ದ. ಕಳೆದ ಶುಕ್ರವಾರ(ಡಿ.15) ಸ್ನೇಹಿತನ ಜೊತೆ ಕುರಿ ಸಂತೆಗೆ ಹೋಗಿ ಬರುತ್ತೇನೆಂದು ಬೈಕ್ ಮೇಲೆ ಹೋಗಿದ್ದ ಬಸವರಾಜ್, ಮರಳಿ ಮನೆಗೆ ಬಾರದೆ ಇದ್ದಾಗ ಕುಟುಂಬ ಕಂಗಾಲಾಗಿತ್ತು. ಅನೇಕ ಕಡೆ ಕುಟುಂಬದವರು ಹುಡುಕಾಟ ನಡೆಸಿದ್ದರು. ಆದ್ರೆ, ಬಸವರಾಜ್ ಬದುಕಿಲ್ಲ, ಬಾರದ ಲೋಕಕ್ಕೆ ಹೋಗಿದ್ದಾನೆ ಎಂದು ನಿನ್ನೆ(ಡಿ.18) ಸಂಜೆ ಕುಟುಂಬದವರಿಗೆ ಗೊತ್ತಾಗಿದೆ. ಆದ್ರೆ, ತಮ್ಮ ಮಗನದ್ದು ಸಹಜ ಸಾವಲ್ಲ,  ಬದಲಾಗಿ ಕೊಲೆ ಅಂತ ಕುಟುಂಬದವರು ಆರೋಪಿಸಿದ್ದಾರೆ.

ಮೃತ ಬಸವರಾಜ್, ಅದೇ ಗ್ರಾಮದ ಮತ್ತೋರ್ವ ಯುವಕ ಬಸಪ್ಪನ ಜೊತೆ ಆತ್ಮೀಯ ಸ್ನೇಹ ಹೊಂದಿದ್ದನಂತೆ. ತನ್ನ ಬಳಿಯಿದ್ದ ಕುರಿಗಳನ್ನು ಮೇಯಿಸಲು ಸ್ನೇಹಿತ ಬಸಪ್ಪಗೆ ನೀಡಿದ್ದನಂತೆ. ಆದರೆ, ಸ್ನೇಹಿತ ಬಸಪ್ಪ ಕುರಿಗಳನ್ನು 42 ಸಾವಿರಕ್ಕೆ ಮಾರಾಟ ಮಾಡಿಕೊಂಡು, ಈ ಪೈಕಿ ಹನ್ನೆರಡು ಸಾವಿರ ನೀಡಿದ್ದನಂತೆ. ಉಳಿದ ಹಣವನ್ನು ನೀಡದೆ ಸ್ನೇಹಿತ ಬಸಪ್ಪ ಸತಾಯಿಸಿದ್ದನಂತೆ. ಹೀಗಾಗಿ ಕಳೆದ ಶುಕ್ರವಾರ ಕುಕನಪಳ್ಳಿಗೆ ಹೋಗೋಣಾ,‌ ಅಲ್ಲಿ ನಿನ್ನ ದುಡ್ಡು ಕೊಡುತ್ತೇನೆ. ನಂತರ ಸಂತೆ ಮಾಡಿಕೊಂಡು ಬರೋಣಾ ಎಂದು ಬಸವರಾಜ್​ನನ್ನು ಸ್ನೇಹಿತ ಕರೆದುಕೊಂಡು ಬಂದಿದ್ದನಂತೆ.

ಇದನ್ನೂ ಓದಿ:ಮಂಡ್ಯ: ಮೊಬೈಲ್ ರಿಚಾರ್ಜ್ ವಿಚಾರಕ್ಕೆ ಗಲಾಟೆ; ರಾಡ್​​ನಿಂದ ಹೊಡೆದು ಪತ್ನಿಯ ಕೊಲೆ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಆದರೆ, ಬಸಪ್ಪ ಒಬ್ಬನೇ ಮರಳಿ ಮನೆಗೆ ಹೋಗಿದ್ದ. ಹೀಗಾಗಿ ಅನುಮಾನಗೊಂಡ ಕುಟುಂಬದವರು ಕೇಳಿದಾಗ ಆತ ಕೊಪ್ಪಳದಿಂದ ಎಲ್ಲಿ ಹೋಗಿದ್ದಾನೆ ಎಂದು ಗೊತ್ತಿಲ್ಲವೆಂದು ಹೇಳಿದ್ದನಂತೆ. ಹೀಗಾಗಿ ಕಳೆದ ಮೂರು ದಿನಗಳಿಂದ ಹುಡುಕಾಟ ನಡೆಸಿದಾಗ ಬಸವರಾಜ್ ಎಲ್ಲಿದ್ದಾನೆ ಎಂದು ಗೊತ್ತಾಗಿರಲಿಲ್ಲ. ಆದ್ರೆ, ನಿನ್ನೆ ಸಂಜೆ ಬಸವರಾಜ್​ನ ಶವ, ಕೊಳೆತು ವಾಸನೆ ಬಂದಾಗ ಗೊತ್ತಾಗಿದೆ. ಸದ್ಯ ಬಸವರಾಜ್ ಕೊಲೆಗೆ ಸಂಬಂಧಿಸಿದಂತೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಬಸಪ್ಪ ನಾಪತ್ತೆಯಾಗಿದ್ದು, ಆತನಿಗಾಗಿ ಹುಡುಕಾಟ ನಡೆದಿದೆ. ಆದ್ರೆ, ಆರೋಪಿ ಸಿಕ್ಕ ಮೇಲೆ ಕೊಲೆಗೆ ಕಾರಣ ಗೊತ್ತಾಗಲಿದೆ. ಮನೆಗೆ ಆಧಾರವಾಗಿದ್ದ ವ್ಯಕ್ತಿ ಬಾರದ ಲೋಕಕ್ಕೆ ಹೋಗಿದ್ದು ಮಾತ್ರ ದುರ್ದೈವದ ಸಂಗತಿಯಾಗಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:14 pm, Tue, 19 December 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ