AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗುವುದಾಗಿ ನಂಬಿಸಿ ಪ್ರೇಯಸಿ ಮೇಲೆ ಅತ್ಯಾಚಾರ: ಪೊಲೀಸ್ ಠಾಣೆ​ ಎದುರು ಯುವತಿ ಧರಣಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ದ್ವೀತಿಯ ಪಿಯುಸಿ ಓದುತ್ತಿದ್ದ ಯುವತಿಯನ್ನು ಪರಿಚಯಿಸಿಕೊಂಡು ಬಳಿಕ ಆಕೆಯನ್ನು ತನ್ನ ಪ್ರೇಮದ ಬಲೆಯಲ್ಲಿ ಬೀಳಿಸಿಕೊಂಡಿದ್ದಾನೆ. ನಂತರ, ನಿನ್ನೇ ಮದುವೆ ಆಗುತ್ತೇನೆ ಅಂತ ಪ್ರೇಯಸಿಯ ಮತ್ತು ತನ್ನ ಪೋಷಕರ ಬಳಿ ಮಾತನಾಡಿ ವಿವಾಹಕ್ಕೆ ಒಪ್ಪಿಸಿದ್ದಾನೆ. ವಿವಾಹ ನಿಶ್ಚಯವಾದ ಮೇಲೆ ಒಂದು ದಿನ ಪ್ರೇಯಸಿ ಮನೆಗೆ ಬಂದ ಪ್ರಿಯಕರ ರವಿರಾಜ್​ ಎಸಗಿದ ನೀಚ ಕೃತ್ಯ.

ಮದುವೆಯಾಗುವುದಾಗಿ ನಂಬಿಸಿ ಪ್ರೇಯಸಿ ಮೇಲೆ ಅತ್ಯಾಚಾರ: ಪೊಲೀಸ್ ಠಾಣೆ​ ಎದುರು ಯುವತಿ ಧರಣಿ
ಆರೋಪಿ ರವಿರಾಜ್​
ಸಂಜಯ್ಯಾ ಚಿಕ್ಕಮಠ
| Edited By: ವಿವೇಕ ಬಿರಾದಾರ|

Updated on:Jun 07, 2024 | 9:48 AM

Share

ಕೊಪ್ಪಳ, ಜೂನ್​ 07: ಮದುವೆಯಾಗುವುದಾಗಿ (Marriage) ನಂಬಿಸಿ ಪ್ರಿಯತಮೆ (Lover) ಮೇಲೆ ಅತ್ಯಾಚಾರವೆಸಗಿ ಪರಾರಿಯಾದ ಪ್ರಿಯಕರನ ವಿರುದ್ಧ ಕಾರಟಗಿ ಪೊಲೀಸ್​ ಠಾಣೆಯಲ್ಲಿ (Kartagi Police Station) ಪ್ರಕರಣ ದಾಖಲಾಗಿದೆ. ಗಂಗಾವತಿ (Gangavati) ತಾಲೂಕು ನಿವಾಸಿ ರವಿರಾಜ್ ಅತ್ಯಾಚಾರ ಎಸಗಿದ ಆರೋಪಿ. ಆರೋಪಿ ರವಿರಾಜ್​​ನನ್ನು ಬಂಧಿಸಿ, ನನ್ನ ಜೊತೆ ಮದುವೆ ಮಾಡಿಸಿ ಎಂದು ಸಂತ್ರಸ್ತೆ ಪೊಲೀಸ್ ಠಾಣೆ ಎದುರು ಧರಣಿ ಕುಳಿತಿದ್ದಾಳೆ. 2020ರಲ್ಲಿ ಸಂತ್ರಸ್ತೆ ದ್ವೀತಿಯ ಪಿಯುಸಿ ಓದುವಾಗ ರವಿರಾಜ್​ ಪರಿಚಯವಾಗಿದ್ದಾನೆ. ಪರಿಚಹ ಸ್ನೇಹ, ಸ್ನೇಹ ಪ್ರೀತಿಯಾಗಿ ಬದಾಲಗಿದೆ. ಇಬ್ಬರೂ 2021ರಿಂದ ಪರಸ್ಪರ ಪ್ರೀತಿಸಲು ಆರಂಭಿಸಿದ್ದಾರೆ.

ಈ ವಿಚಾರ ಪ್ರೇಮಿಗಳ ಮನೆಯಲ್ಲಿ ಗೊತ್ತಾಗಿದ್ದು, ಇಬ್ಬರ ಮನೆಯಲ್ಲೂ ವಿರೋಧ ವ್ಯಕ್ತಪಡಿಸಿದ್ದಾರೆ. ಇದಾದ ಬಳಿಕ ಸಂತ್ರಸ್ತೆ ಪ್ರೀತಿ ಬೇಡ ಅಂತ ರವಿರಾಜ್​ನಿಂದ ದೂರು ಉಳಿಯಲು ಆರಂಭಿಸಿದ್ದಾಳೆ. ಆದರೆ ರವಿರಾಜ್​ ಸಂತ್ರಸ್ತೆ ಮೆನೆಯವರ ಮತ್ತು ತನ್ನ ಪೋಷಕರ ಜೊತೆ ಮಾತನಾಡಿ ಮದುವೆಗೆ ಒಪ್ಪಿಸಿದ್ದಾನೆ.

ಬಳಿಕ ರವಿರಾಜ್​ 2021ರ ಮಾರ್ಚ್​​ 17 ರಂದು ರಾತ್ರಿ 8 ಗಂಟೆ ಸುಮಾರಿಗೆ ಸಂತ್ರಸ್ತೆ ಮನೆಗೆ ಹೋಗಿ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ತಾವು ಇಬ್ಬರೇ ಇರುವ ಖಾಸಗಿ ವಿಡಿಯೋವನ್ನು ಇಟ್ಟುಕೊಂಡು, ರವಿವಾರಜ್​ ಬ್ಲ್ಯಾಕ್​ಮೇಲ್​ ಮಾಡಲು ಆರಂಭಿಸಿದ್ದಾರೆ. ನಂತರ ಅನೇಕ ಸಲ ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದರಿಂದ ಸಂತ್ರಸ್ತೆ ಗರ್ಭಿಣಿಯಾಗಿದ್ದಾಳೆ. ಆಗ, ರವಿರಾಜ್​ ಗರ್ಭಪಾತ ಮಾಡಿಸಿದ್ದಾನೆ. ಬಳಿಕ ಸಂತ್ರಸ್ತೆ ಮದುವೆ ಮಾಡಿಕೊ ಎಂದು ದುಂಬಾಲು ಬಿದ್ದಿದ್ದಾಳೆ.

ಇದನ್ನೂ ಓದಿ: ಲವರ್​​ ಜೊತೆ ಸೇರಿ ತಂದೆ, ತಮ್ಮನನ್ನು ಕೊಚ್ಚಿ ಕೊಂದು ಫ್ರೀಜರ್‌ನಲ್ಲಿಟ್ಟಿದ್ದ 16 ರ ಬಾಲಕಿಯ ಬಂಧನ

ಆದರೆ, ರವಿವಾರ್​ ಮದುವೆ ಮಾಡಿಕೊಳ್ಳಲು ಒಪ್ಪಲಿಲ್ಲ. ಆಗ, ಸಂತ್ರಸ್ತೆ ಈ ವಿಚಾರವನ್ನು ಸಂತ್ರಸ್ತೆ ತನ್ನ ಮನೆಯವರಿಗೆ ಮತ್ತು ರವಿರಾಜ್​ ಮನೆಯವರಿಗೆ ತಿಳಿಸಿದ್ದಾಳೆ. ಆಗ, ಎರಡೂ ಮನೆಯವರು ಸೇರಿ ಪಂಚಾಯಿತಿ ಮಾಡಿ, ರವಿರಾಜ್​ಗೆ ಮದುವೆಯಾಗುವಂತೆ ಹೇಳಿದ್ದಾರೆ. ಆದರೂ ಕೂಡ ರವಿರಾಜ್​ ಮದುವೆಯಾಗಲು ಒಪ್ಪಲಿಲ್ಲ. ಇದರಿಂದ ಸಂತ್ರಸ್ತೆ ಮಾನಸಿಕವಾಗಿ ನೊಂದು, ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ​

ಪ್ರಕರಣ ಸಂಬಂಧ ಸಂತ್ರಸ್ತೆ ಮಾತನಾಡಿ ” ನಾವಿಬ್ಬರು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದೇವು. ನಮ್ಮ ಮನೆಗೆ ಬಂದು ಮದುವೆ ಆಗುತ್ತೇನೆ ಅಂತ ನಮ್ಮ ಹೆತ್ತವರಿಗೆ ಹೇಳಿ ಒಪ್ಪಿಸಿದ್ದನು. ಇಬ್ಬರ ಮದುವೆ ಕೂಡ ನಿಶ್ಚಯವಾಗಿತ್ತು. ಒಂದು ದಿನ ಮನೆಗೆ ಬಂದು ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮದುವೆ ಆಗುತ್ತೇನೆ ಅಂತ ನಂಬಿಸಿ ಸತತ ಎರಡು ವರ್ಷದಿಂದ ನನ್ನ ಅತ್ಯಾಚಾರವೆಸಗಿದ್ದಾನೆ. ಈ ಸಮಯದಲ್ಲಿ ವಿಡಿಯೋ ಮಾಡಿಕೊಂಡಿದ್ದಾನೆ. ನನ್ನ ವಿಡಿಯೋ ಇಟ್ಕೊಂಡು ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಕೊಪ್ಪಳ ನಗರದಲ್ಲಿ ಅವರ ಸಂಬಂಧಿಯ ಪೊಲೀಸ್ ಕ್ವಾಟರ್ಸ್​ನಲ್ಲಿ ಕೂಡಾ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ನಂತರ 3-4 ಸಲ ಗರ್ಭಪಾತ ಮಾಡಿಸಿದ್ದಾನೆ. ಇದೀಗ ದೂರು ದಾಖಲಿಸಿದರೂ ಆತನನ್ನು ಬಂಧಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ” ಎಂದು ಸಂತ್ರಸ್ತೆ ಆರೋಪ ಮಾಡಿದ್ದಾಳೆ.

ಇದೀಗ, ಆರೋಪಿ ರವಿರಾಜ್​​ನನ್ನು ಬಂಧಿಸಿ, ನನ್ನ ಜೊತೆ ಮದುವೆ ಮಾಡಿಸಿ ಎಂದು ಸಂತ್ರಸ್ತೆ ಮತ್ತು ಆಕೆಯ ಪೋಷಕರು ಪೊಲೀಸ್ ಠಾಣೆ ಎದುರು ಧರಣಿ ಕೂತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:45 am, Fri, 7 June 24

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್