AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: ಪತಿಯನ್ನು ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರ, ಐವರು ಆರೋಪಿಗಳು ಅರೆಸ್ಟ್​

ಪತಿಯನ್ನು ಹುಡುಕಿಕೊಂಡು ಬೆಂಗಳೂರಿನಿಂದ ಗಂಗಾವತಿಗೆ ಹೋಗಿದ್ದ 21 ವರ್ಷದ ಮಹಿಳೆ ಮೇಲೆ ಗಂಗಾವತಿ ಬಸ್​ ನಿಲ್ದಾಣ ಬಳಿಯ ಪಾರ್ಕ್​​​ವೊಂದರಲ್ಲಿ ದುಷ್ಕರ್ಮಿ ಅತ್ಯಾಚಾರವೆಸಗಿದ್ದಾನೆ. ಅತ್ಯಾಚರವೆಸಗಿದ ಆರೋಪಿ ಲಿಂಗರಾಜ್​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನು ಕೃತ್ಯಕ್ಕೆ ಸಹಕಾರ ನೀಡಿದ ಐವರನ್ನು ಗಂಗಾವತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳ: ಪತಿಯನ್ನು ಥಳಿಸಿ ಮಹಿಳೆಯ ಮೇಲೆ ಅತ್ಯಾಚಾರ, ಐವರು ಆರೋಪಿಗಳು ಅರೆಸ್ಟ್​
ಗಂಗಾವತಿ ಪೊಲೀಸ್​ ಠಾಣೆ
ಸಂಜಯ್ಯಾ ಚಿಕ್ಕಮಠ
| Edited By: |

Updated on: Feb 12, 2024 | 11:11 AM

Share

ಕೊಪ್ಪಳ, ಫೆಬ್ರವರಿ 12: ಗಂಗಾವತಿ (Gangavathi) ಬಸ್​ ನಿಲ್ದಾಣ ಬಳಿಯ ಪಾರ್ಕ್​​​ವೊಂದಕ್ಕೆ 21 ವರ್ಷದ ಮಹಿಳೆಯನ್ನು (Woman) ಎಳೆದೊಯ್ದು ಅತ್ಯಾಚಾರವೆಸಗಲಾಗಿದೆ. ಅತ್ಯಾಚಾರವೆಸಗಿದ ಆರೋಪಿ ಲಿಂಗರಾಜ್​ಗಾಗಿ ಪೊಲೀಸರು (Police) ಬಲೆ ಬೀಸಿದ್ದಾರೆ. ಇನ್ನು ಕೃತ್ಯಕ್ಕೆ ಸಹಕಾರ ನೀಡಿದ ಐವರನ್ನು ಗಂಗಾವತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೌಲಾಹುಸೇನ್, ಶಿವಕುಮಾರ್, ಪ್ರಶಾಂತ್, ಮಹೇಶ್, ಮಾದೇಶ್ ಬಂಧಿತ ಆರೋಪಿಗಳು.

ಸಂತ್ರಸ್ತೆ ಬೆಂಗಳೂರಿನ ಗೊರಗುಂಟೆಪಾಳ್ಯದವರಾಗಿದ್ದು, ಆಕೆಯ ಪತಿ ಗಂಗಾವತಿಯವರು. ಸಂತ್ರಸ್ತೆ ಮತ್ತು ಆಕೆಯ ಪತಿ ಪ್ರೇಮ ವಿವಾಹವಾಗಿದ್ದಾರೆ. ಗಂಡನನ್ನು ಭೇಟಿಯಾಗಲು ಸಂತ್ರಸ್ತೆ ಗಂಗಾವತಿಗೆ ಬಂದಿದ್ದಳು. ಫೆಬ್ರವರಿ 9 ರಂದು ರಾತ್ರಿ 9:30 ರ ಸುಮಾರಿಗೆ ಸಂತ್ರಸ್ತೆ ಮತ್ತು ಆಕೆಯ ಪತಿ ಗಂಗಾವತಿ ಬಸ್ ನಿಲ್ದಾಣದಲ್ಲಿ ಕೌಟುಂಬಿಕ ವಿಚಾರವಾಗಿ ಜಗಳವಾಡುತ್ತಿದ್ದರು.

ಇದನ್ನು ಗಮನಿಸಿದ ಆರು ಮಂದಿಯ ಗ್ಯಾಂಗ್ ದಂಪತಿ ಮೇಲೆ ಕಣ್ಣಿಟ್ಟಿದೆ. ಜಗಳ ತೀವ್ರವಾಗುತ್ತಿದ್ದಂತೆ ಮಧ್ಯಪ್ರವೇಶಿಸಿದ ತಂಡ ಸಂತ್ರಸ್ತೆಯ ಪತಿಗೆ ಥಳಿಸಿದೆ. ಅಲ್ಲದೆ ಮಹಿಳೆಗೆ ಸಹಾಯ ಮಾಡಿದಂತೆ ವರ್ತಿಸಿದ್ದಾರೆ. ಸಂತ್ರಸ್ತೆಯ ಗಂಡನನ್ನು ಸಾರ್ವಜನಿಕರ ಕಣ್ಣಿಗೆ ಬೀಳದಂತೆ ಕರೆದೊಯ್ದಿದ್ದಾರೆ. ದುಷ್ಕರ್ಮಿಗಳು ನಂತರ ಮಹಿಳೆಯ ಮೇಲೆ ಹಲ್ಲೆ ನಡೆಸಿ ಬಸ್ ನಿಲ್ದಾಣದ ಬಳಿಯ ಉದ್ಯಾನವನಕ್ಕೆ ಎಳೆದೊಯ್ದಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಯುವತಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್​​

ಆರು ಆರೋಪಿಗಳಲ್ಲಿ ಒಬ್ಬನಾದ ಲಿಂಗರಾಜ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಉಳಿದ ಐವರು ಆರೋಪಿಗಳು ಕೃತ್ಯಕ್ಕೆ ಸಹಕಾರ ನೀಡಿದ್ದಾರೆ. ಘಟನೆಯ ನಂತರ ಆರೋಪಿಗಳು ಸಂತ್ರಸ್ತೆಯನ್ನು ಪಾರ್ಕ್‌ನಲ್ಲಿ ಬಿಟ್ಟು ಪರಾರಿಯಾಗಿದ್ದಾರೆ.

ಸಂತ್ರಸ್ತೆ ಗಂಗಾವತಿ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ ಐವರನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಲಿಂಗರಾಜ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸಂತ್ರಸ್ತೆಯನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಲಾಯಿತು.

ಬಂಧಿತರನ್ನು ಮೌಲಾ ಹುಸೇನ್, ಶಿವಕುಮಾರ್, ಪ್ರಶಾಂತ್, ಮಹೇಶ್ ಮತ್ತು ಮಾದೇಶ್ ಎಂದು ಗುರುತಿಸಲಾಗಿದೆ. ಪೊಲೀಸರು ಲಿಂಗರಾಜ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ