AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPTCL ನೇಮಕಾರಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

KPTCL ಕಿರಿಯ ಸಹಾಯಕ ಹುದ್ದೆ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

KPTCL ನೇಮಕಾರಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್
ಕೆಪಿಟಿಸಿಎಲ್
TV9 Web
| Edited By: |

Updated on:Dec 15, 2022 | 8:39 AM

Share

ಬೆಳಗಾವಿ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಕಿರಿಯ ಸಹಾಯಕ ಹುದ್ದೆ ಪರೀಕ್ಷೆ (KPTCL Junior Assistant Post Exam)ಯಲ್ಲಿ ನಡೆದ ಅಕ್ರಮ ಪ್ರಕರಣ (Illegal Case)ದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಗೋಕಾಕ್​ ಶಹರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಬಾಗ ತಾಲೂಕಿನ ಕೋಳಿಗುಡ್ಡ ನಿವಾಸಿ ಸೋಮನಗೌಡ ಪಾಟೀಲ್ (36) ಬಂಧಿತ ಆರೋಪಿಯಾಗಿದ್ದಾನೆ. ಗದಗ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆ (Question paper leak) ಮಾಡಿ ಅಭ್ಯರ್ಥಿಗಳಿಗೆ ರವಾನಿಸಿದ್ದ ಆರೋಪ ಸೋಮನಗೌಡನ ಮೇಲಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅಕ್ರಮ ಪ್ರಕರಣ ಸಂಬಂಧ ಈವರೆಗೆ ಪೊಲೀಸರು 35 ಮಂದಿಯನ್ನು ಬಂಧಿಸಿದ್ದಾರೆ.

ಗದಗ ಮುನ್ಸಿಪಾಲ್ ಪಿಯು ಕಾಲೇಜಿನ ಉಪಪ್ರಾಚಾರ್ಯ ಮಾರುತಿ ಸೋಣಾವನೆ ಪುತ್ರನ ಜೊತೆಗೆ ಆರೋಪಿ ಸೋಮನಗೌಡ ಡೀಲ್ ಕುದುರಿಸಿದ್ದನು. ಅಭ್ಯರ್ಥಿಗಳಿಂದ 7.10 ಲಕ್ಷ ಪಡೆದು ಅದರಲ್ಲಿ 4.50 ಲಕ್ಷ ರೂ. ಸೋಣಾವನೆ ಪುತ್ರ ಸುಮಿತ್‌ಕುಮಾರ್‌ಗೆ ನೀಡಿದ್ದನು. ಅದರಂತೆ ಆ.7 ರಂದು ಸೋಮನಗೌಡನ ವಾಟ್ಸ್​​ಆ್ಯಪ್​ಗೆ ಸುಮಿತ್ ಕುಮಾರ್ ಪ್ರಶ್ನೆ ಪತ್ರಿಕೆ ಕಳುಹಿಸಿದ್ದನು. ಈ ಆರೋಪದ ಮೇಲೆ ಕಾಲೇಜಿನ ಉಪಪ್ರಾಚಾರ್ಯ ಮಾರುತಿ ಸೋನವಣೆ ಮಗ ಸುಮಿತ್‌ಕುಮಾರ್‌‌ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಮಿಸ್ಸೌರಿಯಲ್ಲಿನ ಮನೆಯೊಂದರಿಂದ 30 ವರ್ಷಗಳ ಹಿಂದೆ ರಾತ್ರೋರಾತ್ರಿ ಕಣ್ಮರೆಯಾದ ಮೂವರು ಮಹಿಳೆಯರು ಇನ್ನೂ ಪತ್ತೆಯಾಗಿಲ್ಲ!

ಏನಿದು ಪ್ರಕರಣ?

ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯ ಪರೀಕ್ಷೆ ಆ.7ರಂದು ಗೋಕಾಕ್​ನಲ್ಲಿ ನಡೆದಿತ್ತು. ಈ ಪರೀಕ್ಷೆಯಲ್ಲಿ ಸಿದ್ದಪ್ಪ ಎಂಬ ವ್ಯಕ್ತಿ ಸ್ಮಾರ್ಟ್ ವಾಚ್ ಬಳಸಿ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಹೊರಗೆ ಕಳುಹಿಸಿದ್ದನು. ಈ ವಿಚಾರ ತಿಳಿದ ಅಭ್ಯರ್ಥಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅಕ್ರಮ ಎಸಗಿರುವುದು ಖಚಿತವಾಗಿತ್ತು. ಅದರಂತೆ ಆರಂಭದಲ್ಲಿ ಒಂಬತ್ತು ಮಂದಿಯನ್ನು ಬಂಧಿಸಿದ್ದ ಪೊಲೀಸರು ಇದೀಗ ಒಟ್ಟು 35 ಮಂದಿಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:38 am, Thu, 15 December 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು