AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಸರ್ಕಾರಿ ಕೆಲಸ ಬಿಟ್ಟು ಥೈಲ್ಯಾಂಡ್​​ ಸುಂದ್ರಿ ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದವ ಅಂದರ್

ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಸರಸ್ವತಿಪುರಂ ಪೊಲೀಸರು ಪತ್ತೆಹಚ್ಚಿದ್ದಾರೆ. ಕೆಎಸ್ಆರ್ಟಿಸಿ ನೌಕರನಾಗಿದ್ದ ರತನ್ ಎಂಬಾತ ಥೈಲ್ಯಾಂಡ್​ನಿಂದ ಯುವತಿಯನ್ನು ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದನು. ಪೊಲೀಸರು ದಾಳಿ ಮಾಡಿ ಏಳು ಜನರನ್ನು ಬಂಧಿಸಿ, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ. ಪ್ರತಿ ಗ್ರಾಹಕರಿಂದ 8-10 ಸಾವಿರ ರೂಪಾಯಿ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ. ಪ್ರಕರಣ ದಾಖಲಾಗಿದೆ.

ದಿಲೀಪ್​, ಚೌಡಹಳ್ಳಿ
| Edited By: ವಿವೇಕ ಬಿರಾದಾರ|

Updated on:Jan 26, 2025 | 1:59 PM

Share

ಮೈಸೂರು, ಜನವರಿ 26: ಮೈಸೂರಿನಲ್ಲಿ (Mysore) ಹೈಟೆಕ್ ವೇಶ್ಯಾವಾಟಿಕೆ (Prostitution) ಜಾಲ ಪತ್ತೆಯಾಗಿದೆ. ಸರ್ಕಾರಿ ಕೆಲಸ ಬಿಟ್ಟು ಥೈಲ್ಯಾಂಡ್​ನಿಂದ ಯುವತಿಯನ್ನು ಕರೆತಂದು ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿನ ಹೋಟೆಲ್​ನಲ್ಲಿ​ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದವನನ್ನು ಸರಸ್ವತಿಪುರಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ರತನ್ ಬಂಧಿತ ಆರೋಪಿ.

ಆರೋಪಿ ರತನ್​ ಕೆಎಸ್​​ಆರ್​​ಟಿಸಿ ನೌಕರಿ ಬಿಟ್ಟು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದನು. ವೈಶ್ಯಾವಾಟಿಕೆಗಾಗಿ ಥೈಲ್ಯಾಂಡ್​ನಿಂದ​​ ಯುವತಿಯನ್ನು ಕರೆಸಿದ್ದನು. ರತನ್ ನಡೆಸುತ್ತಿದ್ದ ವೇಶ್ಯಾವಾಟಿಕೆಗೆ ರೇವಣ್ಣ ಎಂಬಾತ ಸಾಥ್ ನೀಡಿದ್ದನು. ಆರೋಪಿ ರತನ್​ ​ಪ್ರತಿ ಗಿರಾಕಿಯಿಂದ 8-10 ಸಾವಿರ ರೂ. ವಸೂಲಿ ಮಾಡುತ್ತಿದ್ದನು. ಈ ಮಾಹಿತಿ ತಿಳಿದ ಸರಸ್ವತಿಪುರಂ ಠಾಣೆ ಪೊಲೀಸರು, ಶನಿವಾರ ಹೊಟೇಲ್​ ಮೇಲೆ ದಾಳಿ ಮಾಡಿ, ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ. ಆರೋಪಿ ರತನ್​ ಸೇರಿದಂತೆ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಕೆಆರ್ ಮಾರ್ಕೆಟ್ ಬಳಿ ಮಹಿಳೆಯ ರೇಪ್, ಚಿನ್ನಾಭರಣ, ಹಣ ದೋಚಿದ ದುಷ್ಕರ್ಮಿಗಳು

ಇನ್ನು, ಥೈಲ್ಯಾಂಡ್​ನಿಂದ​​ ಬಂದ ಯುವತಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಬ್ಯುಸಿನೆಸ್ ಪರ್ಪಸ್​ಗೆ ಬಂದಿದ್ದಾಗಿ ಹೇಳಿದ್ದಳು. ಒಂದು ದಿನದ ಹಿಂದೆಯಷ್ಟೇ ಮೈಸೂರಿಗೆ ಬಂದಿದ್ದೇನೆ ಎಂದು ಹೇಳಿದ್ದಾಳೆ. ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:27 pm, Sun, 26 January 25

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ