AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಸರ್ಕಾರಿ ಕೆಲಸ ಬಿಟ್ಟು ಥೈಲ್ಯಾಂಡ್​​ ಸುಂದ್ರಿ ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದವ ಅಂದರ್

ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಸರಸ್ವತಿಪುರಂ ಪೊಲೀಸರು ಪತ್ತೆಹಚ್ಚಿದ್ದಾರೆ. ಕೆಎಸ್ಆರ್ಟಿಸಿ ನೌಕರನಾಗಿದ್ದ ರತನ್ ಎಂಬಾತ ಥೈಲ್ಯಾಂಡ್​ನಿಂದ ಯುವತಿಯನ್ನು ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದನು. ಪೊಲೀಸರು ದಾಳಿ ಮಾಡಿ ಏಳು ಜನರನ್ನು ಬಂಧಿಸಿ, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ. ಪ್ರತಿ ಗ್ರಾಹಕರಿಂದ 8-10 ಸಾವಿರ ರೂಪಾಯಿ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ. ಪ್ರಕರಣ ದಾಖಲಾಗಿದೆ.

ದಿಲೀಪ್​, ಚೌಡಹಳ್ಳಿ
| Edited By: ವಿವೇಕ ಬಿರಾದಾರ|

Updated on:Jan 26, 2025 | 1:59 PM

Share

ಮೈಸೂರು, ಜನವರಿ 26: ಮೈಸೂರಿನಲ್ಲಿ (Mysore) ಹೈಟೆಕ್ ವೇಶ್ಯಾವಾಟಿಕೆ (Prostitution) ಜಾಲ ಪತ್ತೆಯಾಗಿದೆ. ಸರ್ಕಾರಿ ಕೆಲಸ ಬಿಟ್ಟು ಥೈಲ್ಯಾಂಡ್​ನಿಂದ ಯುವತಿಯನ್ನು ಕರೆತಂದು ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿನ ಹೋಟೆಲ್​ನಲ್ಲಿ​ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದವನನ್ನು ಸರಸ್ವತಿಪುರಂ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ರತನ್ ಬಂಧಿತ ಆರೋಪಿ.

ಆರೋಪಿ ರತನ್​ ಕೆಎಸ್​​ಆರ್​​ಟಿಸಿ ನೌಕರಿ ಬಿಟ್ಟು ವೈಶ್ಯಾವಾಟಿಕೆ ದಂಧೆ ನಡೆಸುತ್ತಿದ್ದನು. ವೈಶ್ಯಾವಾಟಿಕೆಗಾಗಿ ಥೈಲ್ಯಾಂಡ್​ನಿಂದ​​ ಯುವತಿಯನ್ನು ಕರೆಸಿದ್ದನು. ರತನ್ ನಡೆಸುತ್ತಿದ್ದ ವೇಶ್ಯಾವಾಟಿಕೆಗೆ ರೇವಣ್ಣ ಎಂಬಾತ ಸಾಥ್ ನೀಡಿದ್ದನು. ಆರೋಪಿ ರತನ್​ ​ಪ್ರತಿ ಗಿರಾಕಿಯಿಂದ 8-10 ಸಾವಿರ ರೂ. ವಸೂಲಿ ಮಾಡುತ್ತಿದ್ದನು. ಈ ಮಾಹಿತಿ ತಿಳಿದ ಸರಸ್ವತಿಪುರಂ ಠಾಣೆ ಪೊಲೀಸರು, ಶನಿವಾರ ಹೊಟೇಲ್​ ಮೇಲೆ ದಾಳಿ ಮಾಡಿ, ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ. ಆರೋಪಿ ರತನ್​ ಸೇರಿದಂತೆ ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಕೆಆರ್ ಮಾರ್ಕೆಟ್ ಬಳಿ ಮಹಿಳೆಯ ರೇಪ್, ಚಿನ್ನಾಭರಣ, ಹಣ ದೋಚಿದ ದುಷ್ಕರ್ಮಿಗಳು

ಇನ್ನು, ಥೈಲ್ಯಾಂಡ್​ನಿಂದ​​ ಬಂದ ಯುವತಿಯನ್ನು ವಿಚಾರಣೆಗೆ ಒಳಪಡಿಸಿದಾಗ, ಬ್ಯುಸಿನೆಸ್ ಪರ್ಪಸ್​ಗೆ ಬಂದಿದ್ದಾಗಿ ಹೇಳಿದ್ದಳು. ಒಂದು ದಿನದ ಹಿಂದೆಯಷ್ಟೇ ಮೈಸೂರಿಗೆ ಬಂದಿದ್ದೇನೆ ಎಂದು ಹೇಳಿದ್ದಾಳೆ. ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:27 pm, Sun, 26 January 25

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು