AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಪ್ರಿಯಕರನಿಂದಲೇ ದರೋಡೆಗೆ ಸ್ಕೆಚ್ ಹಾಕಿಸಿದ್ಲು

ಬೆಂಗಳೂರು: ಕೊರಿಯರ್ ಕೊಡವ ನೆಪದಲ್ಲಿ ಮನೆಗೆ ಬಂದು ವೃದ್ಧೆಯ ಮೇಲೆ ಹಲ್ಲೆ ಮಾಡಿ ಕಳ್ಳತನ ಮಾಡಿದ್ದ ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನವೀನ್ ಕುಮಾರ್, ಮಂಜುನಾಥ್ ಬಂಧಿತ ಆರೋಪಿಗಳು. ಬಂಧಿತರಿಂದ 2ಲಕ್ಷ ಮೌಲ್ಯದ 620ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಕೊರಿಯರ್ ಕೊಡುವ ನೆಪದಲ್ಲಿ ದರೋಡೆ: ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 6 ತಿಂಗಳ ಹಿಂದೆ ವೃದ್ಧೆ ಉಷಾ ಬಾಲಕೃಷ್ಣನ್ ಎಂಬುವರು ಮನೆಯಲ್ಲಿ ಒಬ್ಬರೇ ಇದ್ದಾಗ ರಾಬರಿ ಮಾಡಲಾಗಿತ್ತು. ಆರೋಪಿ ನವೀನ್ ಕುಮಾರ್ […]

ವೃದ್ಧೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಪ್ರಿಯಕರನಿಂದಲೇ ದರೋಡೆಗೆ ಸ್ಕೆಚ್ ಹಾಕಿಸಿದ್ಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 19, 2019 | 12:44 PM

Share

ಬೆಂಗಳೂರು: ಕೊರಿಯರ್ ಕೊಡವ ನೆಪದಲ್ಲಿ ಮನೆಗೆ ಬಂದು ವೃದ್ಧೆಯ ಮೇಲೆ ಹಲ್ಲೆ ಮಾಡಿ ಕಳ್ಳತನ ಮಾಡಿದ್ದ ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನವೀನ್ ಕುಮಾರ್, ಮಂಜುನಾಥ್ ಬಂಧಿತ ಆರೋಪಿಗಳು. ಬಂಧಿತರಿಂದ 2ಲಕ್ಷ ಮೌಲ್ಯದ 620ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಕೊರಿಯರ್ ಕೊಡುವ ನೆಪದಲ್ಲಿ ದರೋಡೆ: ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 6 ತಿಂಗಳ ಹಿಂದೆ ವೃದ್ಧೆ ಉಷಾ ಬಾಲಕೃಷ್ಣನ್ ಎಂಬುವರು ಮನೆಯಲ್ಲಿ ಒಬ್ಬರೇ ಇದ್ದಾಗ ರಾಬರಿ ಮಾಡಲಾಗಿತ್ತು. ಆರೋಪಿ ನವೀನ್ ಕುಮಾರ್ ಕೊರಿಯರ್ ಕೊಡುವ ನೆಪದಲ್ಲಿ ಮನೆಗೆ ಬಂದು ವೃದ್ಧೆಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ಕದ್ದಿದ್ದ. ಆರೋಪಿಗಳ‌ ಬಂಧನಕ್ಕಾಗಿ ಪೊಲೀಸರು ಹಲವೆಡೆ ತನಿಖೆ ನಡೆಸಿ ಸಾಕಷ್ಟು ತಲೆ‌ಕೆಡಿಸಿಕೊಂಡಿದ್ದರು.

ಕೊನೆಗೆ ವೃದ್ಧೆಯ ಮನೆಯಲ್ಲಿ ಕೆಲಸ‌ಮಾಡುತ್ತಿದ್ದ ಯುವತಿಯ ಪ್ರಿಯಕರನಿಂದ ದರೋಡೆಗೆ ಸ್ಕೆಚ್ ನಡೆದಿರುವುದು ಬೆಳಕಿಗೆ ಬಂದಿದೆ. ಯುವತಿಯ ಪ್ರಿಯಕರ ಮಂಜುನಾಥ್​ ರಾಬರಿಗೆ ಸ್ಕೆಚ್ ಹಾಕಿದ್ದ. ಮನೆಗೆಲಸ ಮಾಡುತ್ತಿದ್ದ ಯುವತಿ ತನ್ನ ಲವ್ವರ್ ಮಂಜುನಾಥ್​ನನ್ನ ಗಾರ್ಡನ್ ಕೆಲಸಕ್ಕೆ ಸೇರಿಸಿದ್ದಳು. ಗಾರ್ಡನ್​ನಲ್ಲೇ ಕೆಲಸ‌ ಮಾಡುತ್ತಾ ವೃದ್ಧೆಯ ಮನೆಯಲ್ಲಿ ದರೋಡೆ ಮಾಡುವ ಸ್ಕೆಚ್ ಹಾಕಿದ್ದ.

ಚಿನ್ನಾಭರಣ ಹಂಚಿಕೊಂಡಿದ್ದ ಆರೋಪಿಗಳು:  ಮೊದಲಿಗೆ ಆರೋಪಿ ಮಂಜುನಾಥ್ ವೃದ್ಧೆಯ ಮನೆಯ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದ. ಬಳಿಕ ತನ್ನ ಸ್ನೇಹಿತ ನವೀನ್ ಕುಮಾರ್​ಗೆ ವಿಚಾರ ತಿಳಿಸಿದ್ದಾನೆ. ಮನೆಯಲ್ಲಿ ಯಾರು ಇಲ್ಲದೆ ಇರುವ‌ ಸಮಯದಲ್ಲಿ ನವೀನ್ ದರೋಡೆ ಮಾಡಿದ್ದಾನೆ. ಬಳಿಕ ಸಿಕ್ಕ ಚಿನ್ನಾಭರಣಗಳನ್ನ ಆರೋಪಿಗಳಿಬ್ಬರೂ ಹಂಚಿಕೊಂಡಿದ್ದರು. ಆದ್ರೆ ಆರೋಪಿಗಳ ಸುಳಿವು ಪೊಲೀಸರಿಗೆ ಸಿಕ್ಕಿರಲಿಲ್ಲ. ಲೊಕೇಷನ್​ನಲ್ಲಿ ಆಕ್ಟೀವ್ ಆಗಿದ್ದ ನಂಬರ್ ಆಧಾರದ‌‌ ಮೇಲೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು