AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಪ್ರಿಯಕರನಿಂದಲೇ ದರೋಡೆಗೆ ಸ್ಕೆಚ್ ಹಾಕಿಸಿದ್ಲು

ಬೆಂಗಳೂರು: ಕೊರಿಯರ್ ಕೊಡವ ನೆಪದಲ್ಲಿ ಮನೆಗೆ ಬಂದು ವೃದ್ಧೆಯ ಮೇಲೆ ಹಲ್ಲೆ ಮಾಡಿ ಕಳ್ಳತನ ಮಾಡಿದ್ದ ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನವೀನ್ ಕುಮಾರ್, ಮಂಜುನಾಥ್ ಬಂಧಿತ ಆರೋಪಿಗಳು. ಬಂಧಿತರಿಂದ 2ಲಕ್ಷ ಮೌಲ್ಯದ 620ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಕೊರಿಯರ್ ಕೊಡುವ ನೆಪದಲ್ಲಿ ದರೋಡೆ: ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 6 ತಿಂಗಳ ಹಿಂದೆ ವೃದ್ಧೆ ಉಷಾ ಬಾಲಕೃಷ್ಣನ್ ಎಂಬುವರು ಮನೆಯಲ್ಲಿ ಒಬ್ಬರೇ ಇದ್ದಾಗ ರಾಬರಿ ಮಾಡಲಾಗಿತ್ತು. ಆರೋಪಿ ನವೀನ್ ಕುಮಾರ್ […]

ವೃದ್ಧೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಪ್ರಿಯಕರನಿಂದಲೇ ದರೋಡೆಗೆ ಸ್ಕೆಚ್ ಹಾಕಿಸಿದ್ಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 19, 2019 | 12:44 PM

Share

ಬೆಂಗಳೂರು: ಕೊರಿಯರ್ ಕೊಡವ ನೆಪದಲ್ಲಿ ಮನೆಗೆ ಬಂದು ವೃದ್ಧೆಯ ಮೇಲೆ ಹಲ್ಲೆ ಮಾಡಿ ಕಳ್ಳತನ ಮಾಡಿದ್ದ ಆರೋಪಿಗಳನ್ನು ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನವೀನ್ ಕುಮಾರ್, ಮಂಜುನಾಥ್ ಬಂಧಿತ ಆರೋಪಿಗಳು. ಬಂಧಿತರಿಂದ 2ಲಕ್ಷ ಮೌಲ್ಯದ 620ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ಕೊರಿಯರ್ ಕೊಡುವ ನೆಪದಲ್ಲಿ ದರೋಡೆ: ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ 6 ತಿಂಗಳ ಹಿಂದೆ ವೃದ್ಧೆ ಉಷಾ ಬಾಲಕೃಷ್ಣನ್ ಎಂಬುವರು ಮನೆಯಲ್ಲಿ ಒಬ್ಬರೇ ಇದ್ದಾಗ ರಾಬರಿ ಮಾಡಲಾಗಿತ್ತು. ಆರೋಪಿ ನವೀನ್ ಕುಮಾರ್ ಕೊರಿಯರ್ ಕೊಡುವ ನೆಪದಲ್ಲಿ ಮನೆಗೆ ಬಂದು ವೃದ್ಧೆಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ಕದ್ದಿದ್ದ. ಆರೋಪಿಗಳ‌ ಬಂಧನಕ್ಕಾಗಿ ಪೊಲೀಸರು ಹಲವೆಡೆ ತನಿಖೆ ನಡೆಸಿ ಸಾಕಷ್ಟು ತಲೆ‌ಕೆಡಿಸಿಕೊಂಡಿದ್ದರು.

ಕೊನೆಗೆ ವೃದ್ಧೆಯ ಮನೆಯಲ್ಲಿ ಕೆಲಸ‌ಮಾಡುತ್ತಿದ್ದ ಯುವತಿಯ ಪ್ರಿಯಕರನಿಂದ ದರೋಡೆಗೆ ಸ್ಕೆಚ್ ನಡೆದಿರುವುದು ಬೆಳಕಿಗೆ ಬಂದಿದೆ. ಯುವತಿಯ ಪ್ರಿಯಕರ ಮಂಜುನಾಥ್​ ರಾಬರಿಗೆ ಸ್ಕೆಚ್ ಹಾಕಿದ್ದ. ಮನೆಗೆಲಸ ಮಾಡುತ್ತಿದ್ದ ಯುವತಿ ತನ್ನ ಲವ್ವರ್ ಮಂಜುನಾಥ್​ನನ್ನ ಗಾರ್ಡನ್ ಕೆಲಸಕ್ಕೆ ಸೇರಿಸಿದ್ದಳು. ಗಾರ್ಡನ್​ನಲ್ಲೇ ಕೆಲಸ‌ ಮಾಡುತ್ತಾ ವೃದ್ಧೆಯ ಮನೆಯಲ್ಲಿ ದರೋಡೆ ಮಾಡುವ ಸ್ಕೆಚ್ ಹಾಕಿದ್ದ.

ಚಿನ್ನಾಭರಣ ಹಂಚಿಕೊಂಡಿದ್ದ ಆರೋಪಿಗಳು:  ಮೊದಲಿಗೆ ಆರೋಪಿ ಮಂಜುನಾಥ್ ವೃದ್ಧೆಯ ಮನೆಯ ಸಂಪೂರ್ಣ ಮಾಹಿತಿ ಕಲೆ ಹಾಕಿದ್ದ. ಬಳಿಕ ತನ್ನ ಸ್ನೇಹಿತ ನವೀನ್ ಕುಮಾರ್​ಗೆ ವಿಚಾರ ತಿಳಿಸಿದ್ದಾನೆ. ಮನೆಯಲ್ಲಿ ಯಾರು ಇಲ್ಲದೆ ಇರುವ‌ ಸಮಯದಲ್ಲಿ ನವೀನ್ ದರೋಡೆ ಮಾಡಿದ್ದಾನೆ. ಬಳಿಕ ಸಿಕ್ಕ ಚಿನ್ನಾಭರಣಗಳನ್ನ ಆರೋಪಿಗಳಿಬ್ಬರೂ ಹಂಚಿಕೊಂಡಿದ್ದರು. ಆದ್ರೆ ಆರೋಪಿಗಳ ಸುಳಿವು ಪೊಲೀಸರಿಗೆ ಸಿಕ್ಕಿರಲಿಲ್ಲ. ಲೊಕೇಷನ್​ನಲ್ಲಿ ಆಕ್ಟೀವ್ ಆಗಿದ್ದ ನಂಬರ್ ಆಧಾರದ‌‌ ಮೇಲೆ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

Follow Us
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ