AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ನಲ್ಲಿ ಹಣ ಕಳೆದುಕೊಂಡ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ, ಪೋಷಕರು ಬೈದಿದ್ದಕ್ಕೆ ಮನನೊಂದು ಬಾಲಕ ನೇಣಿಗೆ ಶರಣು

Suicide: ಬೀದರದಲ್ಲಿ ಉಪನ್ಯಾಸಕಿಯೊಬ್ಬರು ಆನ್​ಲೈನ್​ನಲ್ಲಿ ಹಣ ಕಳೆದುಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನ ಪೋಷಕರು ಬೈದಿದ್ದಕ್ಕೆ ಮನನೊಂದು ಬಾಲಕ ನೇಣಿಗೆ ಶರಣಾಗಿರುವ ದಾರುಣ ಘಟನೆಗಳು ನಡೆದಿವೆ.

ಆನ್​ಲೈನ್​ನಲ್ಲಿ ಹಣ ಕಳೆದುಕೊಂಡ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ, ಪೋಷಕರು ಬೈದಿದ್ದಕ್ಕೆ ಮನನೊಂದು ಬಾಲಕ ನೇಣಿಗೆ ಶರಣು
ಆನ್​ಲೈನ್​ನಲ್ಲಿ ಹಣ ಕಳೆದುಕೊಂಡ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ, ಪೋಷಕರು ಬೈದಿದ್ದಕ್ಕೆ ಮನನೊಂದು ಬಾಲಕ ನೇಣಿಗೆ ಶರಣು
TV9 Web
| Edited By: |

Updated on: Nov 12, 2022 | 11:18 AM

Share

ಬೀದರ್/ಬೆಂಗಳೂರು: ಬೀದರದಲ್ಲಿ ಉಪನ್ಯಾಸಕಿಯೊಬ್ಬರು ಆನ್​ಲೈನ್​ನಲ್ಲಿ ಹಣ ಕಳೆದುಕೊಂಡು (online fraud) ಬಾವಿಗೆ ಹಾರಿ ಆತ್ಮಹತ್ಯೆ (suicide) ಮಾಡಿಕೊಂಡಿದ್ದಾರೆ. ಇನ್ನು ಬೆಂಗಳೂರಿನ (Bangalore) ಪೋಷಕರು ಬೈದಿದ್ದಕ್ಕೆ ಮನನೊಂದು ಬಾಲಕ ನೇಣಿಗೆ ಶರಣಾಗಿರುವ ದಾರುಣ ಘಟನೆಗಳು ನಡೆದಿವೆ. ಆನ್​ಲೈನ್​ನಲ್ಲಿ ಹಣ ಕಳೆದುಕೊಂಡ ಉಪನ್ಯಾಸಕಿ ಆರತಿ ಕನಾಟೆ (28) ಬೀದರ್ (bidar) ಜಿಲ್ಲೆ ಬಸವಕಲ್ಯಾಣ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಬಾವಿಗೆ ಹಾರಿ ಅಸುನೀಗಿದ್ದಾರೆ.

ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದ ಆರತಿ ಕನಾಟೆ ಅವರು ಆನ್​ಲೈನ್​ನಲ್ಲಿ ಪರಿಚಯವಾದ ವ್ಯಕ್ತಿಗೆ 2.5 ಲಕ್ಷ ರೂ ಹಣ ನೀಡಿದ್ದರು. ಉಪನ್ಯಾಸಕಿ ಆರತಿ ಹಂತ ಹಂತವಾಗಿ ಒಟ್ಟು 2.5 ಲಕ್ಷ ಹಣ ನೀಡಿದ್ದರು. ಆದರೆ ಮುಂದೆ, ಮೋಸ ಹೋಗಿರುವುದು ಗೊತ್ತಾಗಿ ಬೇಸರದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೀವನದಲ್ಲಿ ಜಿಗುಪ್ಸೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವೆ ಎಂದು ಕಳೆದ ನಾಲ್ಕು ದಿನಗಳ ಹಿಂದೆ ಡೆತ್​ನೋಟ್ ಬರೆದಿಟ್ಟು ಆರತಿ ಸಾವನ್ನಪ್ಪಿದ್ದಾರೆ. ಬಸವಕಲ್ಯಾಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪೋಷಕರು ಬೈದಿದ್ದಕ್ಕೆ ಮನನೊಂದು ಬಾಲಕ ನೇಣಿಗೆ ಶರಣು:

ಪೋಷಕರು ಬೈದಿದ್ದಕ್ಕೆ ಮನನೊಂದು ಬಾಲಕ ನೇಣಿಗೆ ಶರಣಾಗಿದ್ದಾನೆ. ಬೆಂಗಳೂರಿನ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 7ನೇ ತರಗತಿ ವಿದ್ಯಾರ್ಥಿ ಸಾಯಿಕುಮಾರ್ (13) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಮನೆಯಲ್ಲಿ ಕೆಲಸ ಮಾಡದಿದ್ದಕ್ಕೆ ಪೋಷಕರು ಬೈದಿದ್ದರು. ಸಾಯಿಕುಮಾರ್, ಮನೆಯ ಟೆರಸ್ ಮೇಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಿನ್ನೆ ಸಂಜೆ 7 ಗಂಟೆಗೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹ ಈಗ ಅಂಬೇಡ್ಕರ್ ಆಸ್ಪತ್ರೆಯಲ್ಲಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತ ಮಾಡಲಾಗುವುದು.

Also Read: ದೇವೇಗೌಡರನ್ನ ಹಿಂದಿನ ರಾತ್ರಿ ಕಾಟಾಚಾರಕ್ಕೆ ಕರೆದರು -ಬಿಜೆಪಿ ಸಂಸ್ಕಾರ, ಶಿಷ್ಟಾಚಾರ ಇದೇನಾ? ಜೆಡಿಎಸ್ ಮತ್ತೆ ಟ್ವೀಟ್​

ಹೆಚ್ಚಿನ ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು