AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗ್ರಾಹಕರ ರೀತಿ ಎಂಟ್ರಿಕೊಟ್ಟು ಲಕ್ಷಾಂತರ ಮೌಲ್ಯದ ಸೀರೆ ಕಳುವು ಮಾಡುತ್ತಿದ್ದ ಆರೋಪಿಗಳ ಬಂಧನ

ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಬಂದು ದೊಡ್ಡ ದೊಡ್ಡ ಸೀರೆ ಶೋರೂಂಗಳನ್ನು ಟಾರ್ಗೆಟ್​ ಮಾಡಿ ಲಕ್ಷಾಂತರ ಮೌಲ್ಯದ ಸೀರೆಗಳನ್ನು ಕಳುವು ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಕೈ ಚಳಕದಿಂದ ಸೀರೆ ಕಳೆದುಕೊಂಡು ಶೋರಂ ಮಾಲಿಕರು ಕಂಗಾಲ ಆಗಿದ್ದಾರೆ.

ಬೆಂಗಳೂರು: ಗ್ರಾಹಕರ ರೀತಿ ಎಂಟ್ರಿಕೊಟ್ಟು ಲಕ್ಷಾಂತರ ಮೌಲ್ಯದ ಸೀರೆ ಕಳುವು ಮಾಡುತ್ತಿದ್ದ ಆರೋಪಿಗಳ ಬಂಧನ
ಹೈಗ್ರೌಂಡ್ಸ್​​ ಪೊಲೀಸ್​ ಠಾಣೆ
Shivaprasad B
| Edited By: |

Updated on:Aug 23, 2023 | 12:57 PM

Share

ಬೆಂಗಳೂರು: ಲಕ್ಷಾಂತರ ಮೌಲ್ಯದ ಸೀರೆಗಳನ್ನೇ (Saree) ಕಳವು ಮಾಡುತ್ತಿದ್ದ ಗ್ಯಾಂಗ್ ಅನ್ನು ಹೈಗ್ರೌಂಡ್ಸ್ ಪೊಲೀಸರು (Police) ಬಂಧಿಸಿದ್ದಾರೆ. ಸುನೀತಾ, ಮಟ್ಟಪತಿ ರಾಣಿ, ರತ್ನವೇಲು, ತಣ್ಣೀರ್ ಶಿವಕುಮಾರ್, ಶಿವರಾಮ್ ಪ್ರಸಾದ್, ವೆಂಕಟೇಶ್ ಮತ್ತು ಭರತ್ ಬಂಧಿತ ಆರೋಪಿಗಳು. ಪೊಲೀಸರು ಆರೋಪಿಗಳ ಬಳಿ ಇದ್ದ ಲಕ್ಷಾಂತರ ಮೌಲ್ಯದ ಸಿಲ್ಕ್ ಸೀರೆಗಳನ್ನು ಜಪ್ತಿ ಮಾಡಿದ್ದಾರೆ. ಈ ಗ್ಯಾಂಗ್​​ನಲ್ಲಿ 11 ಜನರಿದ್ದು, ಸದ್ಯ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ. ಇನ್ನು ನಾಲ್ವರಿಗಾಗಿ ಬಲೆ ಬೀಸಿದ್ದಾರೆ.

ಈ ಗ್ಯಾಂಗ್​ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಬಂದು ಕಳ್ಳತನ ಮಾಡುತ್ತಿತ್ತು. ಈ ಬಗ್ಗೆ ನಗರದ ಆಶೋಕನಗರ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು.

ಆರೋಪಿಗಳು ಮದುವೆ ಇದೆ ಅಂತ ಹೇಳಿ, ಸೀರೆ ಕೊಳ್ಳುವ ನೆಪದಲ್ಲಿ ನಗರದ ಪ್ರತಿಷ್ಠಿತ ಸೀರೆ ಶೋರೂಂಗಳಿಗೆ ಹೋಗುತ್ತಿದ್ದರು. ಮೊದಲಿಗೆ ಮೂವರು ಮಹಿಳೆಯರು ಸೀರೆ ಶೋರೂಂ ಒಳಗೆ ಹೋಗುತ್ತಿದ್ದರು. ನಂತರ ಮೂವರು ಪುರುಷರು ಶೋರಂ ಒಳಗೆ ಎಂಟ್ರಿ ಕೊಡುತ್ತಿದ್ದರು. ಇವರು ಅಲ್ಲಿಯ ಸಿಬ್ಬಂದಿಗೆ ಅಧಿಕ ಬೆಲೆ ಬಾಳುವು ಸೀರೆ ತೋರಿಸಿ ಎಂದು ಹೇಳುತ್ತಿದ್ದರು. ಈ ಆರು ಜನರು ಒಟ್ಟಿಗೆ 50-60 ಸೀರೆಗಳನ್ನು ಒಮ್ಮೆಲೆ ತೆಗೆಸಿ ನೋಡಲು ಆರಂಭಿಸುತ್ತಿದ್ದರು.

ಇದನ್ನೂ ಓದಿ: ಬೆಂಗಳೂರು: ಗಗನಸಖಿ ಮೇಲೆ ಕೈ ಹಾಕಿ, ನಿನ್ನ ರೇಟ್ ಎಷ್ಟು, ಎಷ್ಟಕ್ಕೆ ಬರುತ್ತೀಯಾ? ಎಂದಿದ್ದ ವಿದೇಶಿ ಪ್ರಜೆಯ ಬಂಧನ 

ನಂತರ ಸೀರೆ ನೋಡುತ್ತಿರುವಾಗ ಮಾಲೀಕರು, ಸಿಬ್ಬಂದಿಯ ಗಮನ ಬೇರೆಡೆ ಸೆಳೆಯುತ್ತಿದ್ದರು. ಈ ವೇಳೆ ಒಂದು- ಒಂದೂವರೆ ಲಕ್ಷ ಬೆಲೆಬಾಳುವ ಸೀರೆಗಳನ್ನು ಕಳವು ಮಾಡುತ್ತಿದ್ದರು. ಹೀಗೆ ನಗರದ ವಿವಿಧ ಪೊಲೀಸ್​​ ಠಾಣಾ ವ್ಯಾಪ್ತಿಯ ಐದಕ್ಕೂ ಹೆಚ್ಚು ಶೋರೂಂಗಳಲ್ಲಿ ಸೀರೆಗಳನ್ನು ಕಳವು ಮಾಡಿದ್ದಾರೆ. ಇವರ ಖತರ್ನಾಕ್ ಕಳ್ಳತನದ ದೃಶ್ಯ ಶೋರೂಂಗಳ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಇದನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​​ ಮಾಡಿ

Published On - 7:56 am, Wed, 23 August 23

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?