ಪತ್ನಿ, ಮಕ್ಕಳ ಎದುರೇ ತಾ.ಪಂ. ಮಾಜಿ ಸದಸ್ಯನ ಎದೆಗೆ ಗುಂಡಿಕ್ಕಿ ಹತ್ಯೆ

ಬೆಳಗಾವಿ: ಜಮೀನು ವಿವಾದ ಹಿನ್ನೆಲೆಯಲ್ಲಿ ಹಾಡಹಗಲೇ ಗುಂಡುಹಾರಿಸಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯನ ಹತ್ಯೆ ಮಾಡಿರುವ ಘಟನೆ ಗೋಕಾಕ್ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆದಿದೆ. 55 ವರ್ಷದ ಚಿಂತಪ್ಪ ರಾಮಪ್ಪ ಮೇಟಿಯನ್ನು ಸೋದರ ಸಂಬಂಧಿ ಗೋಪಯ್ಯ ಮೇಟಿ ಹತ್ಯೆ ಮಾಡಿದ್ದಾನೆ. ಹಲವು ದಿನಗಳಿಂದ ಜಮೀನು ವಿಚಾರವಾಗಿ ಸಹೋದರ ಸಂಬಂಧಿಗಳ ನಡುವೆ ‌ಗಲಾಟೆ ನಡೆಯುತ್ತಿತ್ತು. ಜಮೀನು ವಿವಾದ ಸಂಬಂಧ ಮನೆಯಲ್ಲಿ ಚರ್ಚೆ ನಡೆಯುತ್ತಿತ್ತು. ಈ ವೇಳೆ ಜಗಳ ತಾರಕಕ್ಕೇರಿ ಹೆಂಡತಿ, ಮಕ್ಕಳ ಎದುರೇ ಚಿಂತಪ್ಪನ ಎದೆಗೆ ಗುಂಡಿಕ್ಕಿ ಕೊಂದು […]

ಪತ್ನಿ, ಮಕ್ಕಳ ಎದುರೇ ತಾ.ಪಂ. ಮಾಜಿ ಸದಸ್ಯನ ಎದೆಗೆ ಗುಂಡಿಕ್ಕಿ ಹತ್ಯೆ
ಸಾಧು ಶ್ರೀನಾಥ್​

Updated on: May 01, 2020 | 6:06 PM

ಬೆಳಗಾವಿ: ಜಮೀನು ವಿವಾದ ಹಿನ್ನೆಲೆಯಲ್ಲಿ ಹಾಡಹಗಲೇ ಗುಂಡುಹಾರಿಸಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯನ ಹತ್ಯೆ ಮಾಡಿರುವ ಘಟನೆ ಗೋಕಾಕ್ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆದಿದೆ. 55 ವರ್ಷದ ಚಿಂತಪ್ಪ ರಾಮಪ್ಪ ಮೇಟಿಯನ್ನು ಸೋದರ ಸಂಬಂಧಿ ಗೋಪಯ್ಯ ಮೇಟಿ ಹತ್ಯೆ ಮಾಡಿದ್ದಾನೆ.

ಹಲವು ದಿನಗಳಿಂದ ಜಮೀನು ವಿಚಾರವಾಗಿ ಸಹೋದರ ಸಂಬಂಧಿಗಳ ನಡುವೆ ‌ಗಲಾಟೆ ನಡೆಯುತ್ತಿತ್ತು. ಜಮೀನು ವಿವಾದ ಸಂಬಂಧ ಮನೆಯಲ್ಲಿ ಚರ್ಚೆ ನಡೆಯುತ್ತಿತ್ತು. ಈ ವೇಳೆ ಜಗಳ ತಾರಕಕ್ಕೇರಿ ಹೆಂಡತಿ, ಮಕ್ಕಳ ಎದುರೇ ಚಿಂತಪ್ಪನ ಎದೆಗೆ ಗುಂಡಿಕ್ಕಿ ಕೊಂದು ಆರೋಪಿ ಗೋಪಯ್ಯ ಭೀಮಪ್ಪ ಮೇಟಿ ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಘಟಪ್ರಭಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪರಾರಿಯಾದ ಆರೋಪಿ ಗೋಪಯ್ಯ ಭೀಮಪ್ಪ ಮೇಟಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Published On - 5:34 pm, Fri, 1 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us