ಆಸ್ತಿ ಕಲಹ: ಹಾಡಹಗಲೇ ಕತ್ತು ಸೀಳಿ ವೃದ್ಧನ ಭೀಕರ ಹತ್ಯೆ

ಬೆಂಗಳೂರು: ಆಸ್ತಿ ವಿಚಾರಕ್ಕೆ ಹಾಡಹಗಲೇ ನಡುರಸ್ತೆಯಲ್ಲಿ ವೃದ್ಧನನ್ನು ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತಲಘಟ್ಟಪುರದ ಗುಬ್ಬಲಾಳ ರಸ್ತೆಯಲ್ಲಿ ನಡೆದಿದೆ. 70 ವರ್ಷದ ಮಾಧವ್ ಕೊಲೆಯಾದ ವೃದ್ಧ. ಕೆಲಸ ನಿಮಿತ್ತ ವೃದ್ಧ ಮಾಧವ್ ಮನೆಯಿಂದ ಹೊರಹೋಗಿದ್ದ. ಕೆಲಸ ಮುಗಿಸಿ ಮನೆಗೆ ವಾಪಸ್ ಆಗುವಾಗ ಅಪರಿಚಿತ ವ್ಯಕ್ತಿ ಹಿಂಬದಿಯಿಂದ ಬಂದು ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆಸ್ತಿ ವಿಚಾರಕ್ಕೆ ಸಂಬಂಧಿಕರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ […]

ಆಸ್ತಿ ಕಲಹ: ಹಾಡಹಗಲೇ ಕತ್ತು ಸೀಳಿ ವೃದ್ಧನ ಭೀಕರ ಹತ್ಯೆ
ಸಾಧು ಶ್ರೀನಾಥ್​

Updated on: Feb 14, 2020 | 4:34 PM

ಬೆಂಗಳೂರು: ಆಸ್ತಿ ವಿಚಾರಕ್ಕೆ ಹಾಡಹಗಲೇ ನಡುರಸ್ತೆಯಲ್ಲಿ ವೃದ್ಧನನ್ನು ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತಲಘಟ್ಟಪುರದ ಗುಬ್ಬಲಾಳ ರಸ್ತೆಯಲ್ಲಿ ನಡೆದಿದೆ. 70 ವರ್ಷದ ಮಾಧವ್ ಕೊಲೆಯಾದ ವೃದ್ಧ.

ಕೆಲಸ ನಿಮಿತ್ತ ವೃದ್ಧ ಮಾಧವ್ ಮನೆಯಿಂದ ಹೊರಹೋಗಿದ್ದ. ಕೆಲಸ ಮುಗಿಸಿ ಮನೆಗೆ ವಾಪಸ್ ಆಗುವಾಗ ಅಪರಿಚಿತ ವ್ಯಕ್ತಿ ಹಿಂಬದಿಯಿಂದ ಬಂದು ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಆಸ್ತಿ ವಿಚಾರಕ್ಕೆ ಸಂಬಂಧಿಕರೇ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ತಲಘಟ್ಟಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us