AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Udaipur Tailor Murder ಜೈಪುರ ನ್ಯಾಯಾಲಯದ ಹೊರಗಡೆ ಸೇರಿದ್ದ ಜನರಿಂದ ಉದಯಪುರ ಟೈಲರ್ ಹಂತಕರ ಮೇಲೆ ಹಲ್ಲೆ

ನ್ಯಾಯಾಲಯ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಜುಲೈ 12ರವರೆಗೆ ಹಂತಕರ ಕಸ್ಟಡಿಯನ್ನು ನೀಡಿದೆ. 

Udaipur Tailor Murder ಜೈಪುರ ನ್ಯಾಯಾಲಯದ ಹೊರಗಡೆ ಸೇರಿದ್ದ ಜನರಿಂದ ಉದಯಪುರ ಟೈಲರ್ ಹಂತಕರ ಮೇಲೆ ಹಲ್ಲೆ
ಹಂತಕರ ಮೇಲೆ ಹಲ್ಲೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 02, 2022 | 6:04 PM

Share

ದೆಹಲಿ: ಟೈಲರ್ ಕನ್ಹಯ್ಯಾ ಲಾಲ್ (Kanhaiya Lal) ಅವರ ಹಂತಕರ ಮೇಲೆ ಜೈಪುರ ನ್ಯಾಯಾಲಯದ (Jaipur court) ಹೊರಗೆ ಸೇರಿದ್ದ ಜನರ ಗುಂಪೊಂದು ಶನಿವಾರ ಹಲ್ಲೆ ನಡೆಸಿದೆ.  ಜನರ ಗುಂಪು ಆರೋಪಿಗಳ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದು ಹಾಕಿತು. ಪೊಲೀಸರು ಕೂಡಲೇ ಅವರನ್ನು ವ್ಯಾನ್​​​ನೊಳಗೆ ಹಾಕಿದ್ದು, ಹೆಚ್ಚಿನ ಹಲ್ಲೆಯಾಗದಂತೆ ಕಾಪಾಡಿದರು. ನ್ಯಾಯಾಲಯ ಇಂದು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಜುಲೈ 12ರವರೆಗೆ ಹಂತಕರ ಕಸ್ಟಡಿಯನ್ನು ನೀಡಿದೆ. ಕನ್ಹಯ್ಯಾ ಲಾಲ್ (48) ಅವರನ್ನು ಮಂಗಳವಾರ ರಿಯಾಜ್ ಅಖ್ತರಿ ಮತ್ತು ಘೌಸ್ ಮೊಹಮ್ಮದ್ ಕತ್ತು ಸೀಳಿ ಕೊಲೆಗೈದಿದ್ದು ಕೊಲೆ ಕೃತ್ಯದ ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದರು. ಕನ್ಹಯ್ಯಾ ಹತ್ಯೆಯಾದ ಕೆಲವೇ ಗಂಟೆಗಳ ನಂತರ ಅಖ್ತರಿ ಮತ್ತು ಮೊಹಮ್ಮದ್ ಅವರನ್ನು ಬಂಧಿಸಲಾಯಿತು. ಕನ್ಹಯ್ಯಾ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಮತ್ತಿಬ್ಬರನ್ನೂ ಬಂಧಿಸಲಾಗಿತ್ತು. ನಾಲ್ವರು ಆರೋಪಿಗಳನ್ನು ಇಂದು ಜೈಪುರದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಈ ವೇಳೆ ಹಲವಾರು ವಕೀಲರು “ಪಾಕಿಸ್ತಾನ್ ಮುರ್ದಾಬಾದ್” ಮತ್ತು “ಕನ್ಹಯ್ಯಾ ಕೆ ಹತ್ಯಾರೋನ್ ಕೋ ಫಾಸಿ ದೋ” (ಕನ್ಹಯ್ಯಾ ಹಂತಕರಿಗೆ ಮರಣದಂಡನೆ ವಿಧಿಸಿ) ಎಂಬ ಘೋಷಣೆಗಳನ್ನು ಕೂಗಿದರು.

ನ್ಯಾಯಾಲಯವು ಜುಲೈ 12 ರವರೆಗೆ ಹಂತಕರ ಕಸ್ಟಡಿಯನ್ನು ಎನ್‌ಐಎಗೆ ನೀಡಿದೆ.

ಹತ್ಯೆಗಿಂತ ಮೊದಲು ಕನ್ಹಯ್ಯಾ ಲಾಲ್ ಅವರು ತಮ್ಮ ಖಾತೆಯಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಪೋಸ್ಟ್‌ನಿಂದ ಬೆದರಿಕೆಗಳು ಬಂದಿವೆ ಎಂದು ಸ್ಥಳೀಯ ಪೊಲೀಸರಿಗೆ ತಿಳಿಸಿದ್ದರು.ಆದರೆ ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ.

Published On - 5:17 pm, Sat, 2 July 22

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!