ಆಸ್ತಿ ವಿವಾದ: ಕೋರ್ಟ್ ಆವರಣದಲ್ಲೇ ಸಂಬಂಧಿ ಯುವಕನಿಂದ ಭೀಕರವಾಗಿ ಕೊಲೆಯಾದ ವಕೀಲ
ತಾರಿಹಳ್ಳಿ ನಿವಾಸಿ ವೆಂಕಟೇಶ್ ಕೊಲೆಯಾದ ವಕೀಲರಾಗಿದ್ದು, ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಕೀಲನನ್ನ ಕೊಂದಿರುವ ಶಂಕೆ ವ್ಯಕ್ತವಾಗಿದೆ.

ವೆಂಕಟೇಶ್, ಕೊಲೆಯಾದ ವಕೀಲ
ಬಳ್ಳಾರಿ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲೇ ವಕೀಲನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಕೋರ್ಟ್ ಆವರಣದಲ್ಲಿ ನಡೆದಿದೆ.
ತಾರಿಹಳ್ಳಿ ನಿವಾಸಿ ವೆಂಕಟೇಶ್ ಕೊಲೆಯಾದ ವಕೀಲರಾಗಿದ್ದು, ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಕೀಲನನ್ನ ಕೊಂದಿರುವ ಶಂಕೆ ವ್ಯಕ್ತವಾಗಿದೆ. ವಕೀಲ ವೆಂಕಟೇಶ್ನ ಸಂಬಂಧಿ ಯುವಕನಿಂದ ಈ ಕೃತ್ಯ ನಡೆದಿದ್ದು, ಲಾಂಗ್ನಿಂದ ಮನಸೋ ಇಚ್ಛೆ ಕೊಚ್ಚಿ ಕೊಲ್ಲಲಾಗಿದೆ. ಹತ್ಯೆ ವೇಳೆ ವಕೀಲರು, ಸಾರ್ವಜನಿಕರು ದಿಕ್ಕಾಪಾಲಾಗಿ ಓಡಿಹೋಗಿದ್ದಾರೆ. ಘಟನಾ ಸ್ಥಳಕ್ಕೆ ಹೊಸಪೇಟೆ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಜಮೀನು ವಿಚಾರ: ಬಾಮೈದನ ಮೇಲೆ ಇಬ್ಬರು ಭಾವಂದಿರಿಂದ ಹಲ್ಲೆ, ಯಾವೂರಲ್ಲಿ?
Follow Us
