ಆಸ್ತಿ ವಿವಾದ: ಕೋರ್ಟ್ ಆವರಣದಲ್ಲೇ ಸಂಬಂಧಿ ಯುವಕನಿಂದ ಭೀಕರವಾಗಿ ಕೊಲೆಯಾದ ವಕೀಲ

ತಾರಿಹಳ್ಳಿ ನಿವಾಸಿ ವೆಂಕಟೇಶ್​ ಕೊಲೆಯಾದ ವಕೀಲರಾಗಿದ್ದು, ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಕೀಲನನ್ನ ಕೊಂದಿರುವ ಶಂಕೆ ವ್ಯಕ್ತವಾಗಿದೆ.

ಆಸ್ತಿ ವಿವಾದ: ಕೋರ್ಟ್ ಆವರಣದಲ್ಲೇ ಸಂಬಂಧಿ ಯುವಕನಿಂದ ಭೀಕರವಾಗಿ ಕೊಲೆಯಾದ ವಕೀಲ
ವೆಂಕಟೇಶ್,​ ಕೊಲೆಯಾದ ವಕೀಲ
Edited By: ಸಾಧು ಶ್ರೀನಾಥ್​

Updated on: Feb 27, 2021 | 2:30 PM

ಬಳ್ಳಾರಿ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲೇ ವಕೀಲನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ಕೋರ್ಟ್ ಆವರಣದಲ್ಲಿ ನಡೆದಿದೆ.

ತಾರಿಹಳ್ಳಿ ನಿವಾಸಿ ವೆಂಕಟೇಶ್​ ಕೊಲೆಯಾದ ವಕೀಲರಾಗಿದ್ದು, ಆಸ್ತಿ ವಿವಾದ ಹಿನ್ನೆಲೆಯಲ್ಲಿ ವಕೀಲನನ್ನ ಕೊಂದಿರುವ ಶಂಕೆ ವ್ಯಕ್ತವಾಗಿದೆ. ವಕೀಲ ವೆಂಕಟೇಶ್​ನ ಸಂಬಂಧಿ ಯುವಕನಿಂದ ಈ ಕೃತ್ಯ ನಡೆದಿದ್ದು, ಲಾಂಗ್​ನಿಂದ ಮನಸೋ ಇಚ್ಛೆ ಕೊಚ್ಚಿ ಕೊಲ್ಲಲಾಗಿದೆ. ಹತ್ಯೆ ವೇಳೆ ವಕೀಲರು, ಸಾರ್ವಜನಿಕರು ದಿಕ್ಕಾಪಾಲಾಗಿ ಓಡಿಹೋಗಿದ್ದಾರೆ. ಘಟನಾ ಸ್ಥಳಕ್ಕೆ ಹೊಸಪೇಟೆ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಜಮೀನು ವಿಚಾರ: ಬಾಮೈದನ ಮೇಲೆ ಇಬ್ಬರು ಭಾವಂದಿರಿಂದ ಹಲ್ಲೆ, ಯಾವೂರಲ್ಲಿ?

pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us