AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಪೊಲೀಸ್ ಠಾಣೆ ಸಮೀಪವೇ ವಕೀಲನಿಗೆ ಚಾಕು ಇರಿತ; ನೆರವಿಗೆ ಧಾವಿಸಿದ ಆಟೋ ಡ್ರೈವರ್ ಮೇಲೂ ಹಲ್ಲೆಗೆ ಯತ್ನ

ಬೆಂಗಳೂರು ಹೊರವಲಯದ ಆನೇಕಲ್ ಪೊಲೀಸ್​ ಠಾಣೆ(Anekal Police Station) ಬಳಿ ವಕೀಲನಿಗೆ ಚಾಕು ಇರಿದ ಅಮಾನುಷ ಘಟನೆ ನಡೆದಿದೆ. ಈ ವೇಳೆ ನೆರವಿಗೆ ಧಾವಿಸಿದ ಆಟೋ ಡ್ರೈವರ್ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆನೇಕಲ್: ಪೊಲೀಸ್ ಠಾಣೆ ಸಮೀಪವೇ ವಕೀಲನಿಗೆ ಚಾಕು ಇರಿತ; ನೆರವಿಗೆ ಧಾವಿಸಿದ ಆಟೋ ಡ್ರೈವರ್ ಮೇಲೂ ಹಲ್ಲೆಗೆ ಯತ್ನ
ಆನೇಕಲ್ ಪೊಲೀಸ್ ಠಾಣೆ ಸಮೀಪವೇ ವಕೀಲನಿಗೆ ಚಾಕು ಇರಿತ
ರಾಮು, ಆನೇಕಲ್​
| Edited By: |

Updated on:Mar 13, 2024 | 7:43 PM

Share

ಬೆಂಗಳೂರು ಗ್ರಾಮಾಂತರ, ಮಾ.13: ಪೊಲೀಸ್ ಠಾಣೆಯ ಸಮೀಪವೇ ವಕೀಲನಿಗೆ ಚಾಕು ಇರಿದ ಅಮಾನುಷ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಠಾಣೆ(Anekal Police Station) ಬಳಿ ನಡೆದಿದೆ. ವಕೀಲ ಮಂಜುನಾಥ್ ಎಂಬುವವರ ಬೆನ್ನು, ಕೈಗೆ ಮೂರು ಬಾರಿ ಚಾಕುವಿನಿಂದ ಇರಿಯಲಾಗಿದೆ. ನೆರವಿಗೆ ಧಾವಿಸಿದ ಆಟೋ ಡ್ರೈವರ್ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ವಕೀಲ ಮಂಜುನಾಥ್​ಗೆ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನು ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಈ ಕುರಿತು ಪೊಲೀಸ್​ ತನಿಖೆ ಬಳಿಕ ನಿಜಾಂಶ ತಿಳಿದುಬರಬೇಕಿದೆ.

ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಅಗರ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ನಡೆದಿದೆ. ಪೃಥ್ವಿ ರಾಜ್(17) ಹಾಗೂ ನವೀನ್(17) ಮೃತ ದುರ್ದೈವಿಗಳು. ಇವರನ್ನು ಕೆಂಗೇರಿ ಸಮೀಪದ ದೊಡ್ಡಬೆಲೆ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಕಾಲೇಜಿನಿಂದ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಮೃತದೇಹವನ್ನ ಹೊರಕ್ಕೆ ತೆಗೆದಿದ್ದಾರೆ. ಈ ಕುರಿತು ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಶಿವಮೊಗ್ಗ: ಹಿಂದೂ ಯುವಕನಿಗೆ ಚಾಕು ಇರಿತ; ಬುದ್ದಿವಾದ ಹೇಳಿದಕ್ಕೆ ಕೊಲೆಗೆ ಯತ್ನ

ಲಾರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಮೆಣಸಿನಕಾಯಿ ಭಸ್ಮ

ರಾಯಚೂರು: ಲಾರಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಮೆಣಸಿನಕಾಯಿ ಭಸ್ಮವಾದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದೇವರಗುಡ್ಡ ಗ್ರಾಮದ ಸಮೀಪ ನಡೆದಿದೆ. ಲಾರಿಯಲ್ಲಿದ್ದ ಅಪಾರ ಪ್ರಮಾಣದ ಮೆಣಸಿನಕಾಯಿ ಬೆಂಕಿಗಾಹುತಿಯಾಗಿದೆ. ಮಾರ್ಕೆಟ್​ಗೆ ಮೆಣಸಿನಕಾಯಿ ಸಾಗಿಸುವಾಗ ಹೈವೋಲ್ಟೇಜ್ ತಂತಿ ತಗುಲಿ ಈ ಅವಘಡ ಸಂಭವಿಸಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಿದ್ದಾರೆ. ಇನ್ನು ತಾನು ಕಷ್ಟಪಟ್ಟು ಬೆಳೆದ ಮೆಣಸಿನಕಾಯಿ ಸುಟ್ಟುಹೋಗಿದ್ದಕ್ಕೆ ರೈತ ಕಂಗಾಲಾಗಿದ್ದಾನೆ. ಈ ಕುರಿತು ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತೆಂಗು, ಬಾಳೆ ತೋಟಕ್ಕೆ ಬೆಂಕಿ; 3 ಎಕರೆ ತೋಟ ಭಸ್ಮ

ತುಮಕೂರು: ಜಿಲ್ಲೆಯ ತಿಪಟೂರು ತಾಲ್ಲೂಕಿನ ಡಿ.ಎಲ್ ಪಾಳ್ಯದಲ್ಲಿ ತೆಂಗು, ಬಾಳೆ ತೋಟಕ್ಕೆ ಬೆಂಕಿ ಬಿದ್ದಿದೆ. ಇದರಿಂದ 60 ತೆಂಗಿನ ಗಿಡ, ಒಂದು ಎಕರೆ ಬಾಳೆಗಿಡ ಭಸ್ಮವಾಗಿದೆ. ಮಂಜುನಾಥ್ ಎಂಬುವರಿಗೆ ಸೇರಿದ ತೋಟ ಇದಾಗಿದ್ದು, ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ತೋಟಕ್ಕೆ ಬೆಂಕಿ ಬಿದ್ದಿದ್ದು ಹೇಗೆ ಎಂದು ಇನ್ನೂ ತಿಳಿದು ಬಂದಿಲ್ಲ. ತೋಟದ ಮಾಲೀಕರಿಗೆ ವಿಚಾರ ತಿಳಿಯವ ವೇಳೆಗೆ ತೋಟ ಸಂಪೂರ್ಣ ಭಸ್ಮವಾಗಿದೆ. ಈ ಘಟನೆ ತಿಪಟೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:59 pm, Wed, 13 March 24

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?