AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾಳಕೊಪ್ಪ ಪ್ರೇಮಿಗಳ ನಿಶ್ಚಿತಾರ್ಥದ ವೇಳೆ ಪ್ರಿಯಕರನಿಗೆ ಚಾಕು ಇರಿದ ಪ್ರೇಯಸಿಯ ಚಿಕ್ಕ ತಮ್ಮ, ಕಾರಣವೇನು?

Shiralakoppa in Shikaripura: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಪ್ರೇಮಿಗಳು ಮದುವೆಯ ಸಂಭ್ರಮದಲಿದ್ದರು. ಯುವಕನೂ ನಿಶ್ಚಿತಾರ್ಥಕ್ಕೆ ಎಲ್ಲ ಸಿದ್ದತೆ ಮಾಡಿಕೊಂಡಿದ್ದ. ಈ ನಡುವೆ ನಿನ್ನೆ ರಾತ್ರಿ ಪ್ರಿಯಕರನ ಕೊಲೆಗೆ ಹುಡುಗಿಯ ತಮ್ಮ ಯತ್ನ ನಡೆಸಿದ ಘಟನೆಯಿಂದ ಕುಟುಂಬಕ್ಕೆ ದೊಡ್ಡ ಆಘಾತ. ಸದ್ಯ ಮನೆಯಲ್ಲಿ ನಿಶ್ಚಿತಾರ್ಥದ ಸಂಭ್ರಮದ ಬದಲಿಗೆ ನೋವು ಕಣ್ಣೀರಿನಲ್ಲಿ ಕುಟುಂಬಸ್ಥರು ಮುಳುಗಿದ್ದಾರೆ..

ಶಿರಾಳಕೊಪ್ಪ ಪ್ರೇಮಿಗಳ ನಿಶ್ಚಿತಾರ್ಥದ ವೇಳೆ ಪ್ರಿಯಕರನಿಗೆ ಚಾಕು ಇರಿದ ಪ್ರೇಯಸಿಯ ಚಿಕ್ಕ ತಮ್ಮ, ಕಾರಣವೇನು?
ನಿಶ್ಚಿತಾರ್ಥದ ವೇಳೆ ಪ್ರಿಯಕರನಿಗೆ ಚಾಕು ಇರಿದ ಪ್ರೇಯಸಿಯ ಚಿಕ್ಕ ತಮ್ಮ
Basavaraj Yaraganavi
| Edited By: |

Updated on:Mar 09, 2024 | 9:53 AM

Share

ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಕುಟುಂಬಸ್ಥರ ವಿರೋಧದ ಹಿನ್ನೆಲೆ ಮದುವೆಯಾಗಬೇಕೆಂದು ಪ್ರೇಮಿಗಳು ಮನೆಬಿಟ್ಟು ಹೋಗಿದ್ದರು. ಆದರೂ ಕುಟುಂಬಸ್ಥರು ಇಬ್ಬರನ್ನೂ ಮನವೊಲಿಸಿ ವಾಪಸ್ ಕರೆಸಿದ್ದರು. ನಿನ್ನೆ ಶುಕ್ರವಾರ ಪ್ರೇಮಿಗಳ ಮದುವೆ ನಿಶ್ಚಿತಾರ್ಥವಿತ್ತು. ಯುವತಿಯ ತಮ್ಮನು ನಿನ್ನೆ ರಾತ್ರಿ ಪ್ರೇಮಿಯ ಹೊಟ್ಟೆಗೆ ಚಾಕು ಇರಿದ್ದಾನೆ. ಈ ಘಟನೆಯಿಂದ ಪ್ರೇಮಿಗಳ ನಿಶ್ಚಿತಾರ್ಥ ಕ್ಯಾನ್ಸಲ್ ಆಗಿದೆ. ಪ್ರೇಮಿಯು ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ್ದಾನೆ. ಲವರ್ ಗೆ ಚಾಕು ಇರಿತ ಶಾಕ್ ಕುರಿತು ಒಂದು ವರದಿ ಇಲ್ಲಿದೆ.

ಸಲ್ಮಾನ್ ಅಲಿಯಾಸ್ ಸೈಯದ್ ಗೂಡು ಮತ್ತು ಯುವತಿಯು ಪ್ರೀತಿಸುತ್ತಿದ್ದರು. ಇಬ್ಬರದ್ದೂ ಒಂದೇ ಮುಸ್ಲಿಂ ಜಾತಿ. ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಇಬ್ಬರೂ ಪ್ರೇಮಿಗಳು ವಾಸವಾಗಿದ್ದರು. ಒಂದೇ ಊರು. ಪ್ರೇಮಿಗಳು ಕೆಲವು ತಿಂಗಳಿನಿಂದ ಪ್ರೀತಿಸುತ್ತಿದ್ದರು. ಈ ಇಬ್ಬರ ಪ್ರೀತಿಗೆ ಕುಟುಂಬಸ್ಥರು ಒಪ್ಪುವುದಿಲ್ಲ ಎನ್ನುವ ಭಯ ಆ ಪ್ರೇಮಿಗಳನ್ನು ಕಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರೂ ಪ್ರೇಮಿಗಳು ಒಂದಾಗಬೇಕೆಂದು ಡಿಸೈಡ್ ಮಾಡಿದ್ದರು.

ಪ್ರೇಮಿಗಳು ಗಪ್ ಚುಪ್ ಆಗಿ ಮನೆ ಬಿಟ್ಟು ಓಡಿಹೋಗಿದ್ದರು. ಇಬ್ಬರೂ ಲವ್ ಮ್ಯಾರೇಜ್ ಆಗುವ ನಿರ್ಧಾರ ಮಾಡಿದ್ದರು. ಈ ಇಬ್ಬರೂ ಓಡಿಹೋಗಿರುವ ವಿಷಯವು ಗೊತ್ತಾಗಿತ್ತು. ಇಬ್ಬರನ್ನೂ ಮನವೊಲಿಸಿ, ಇಬ್ಬರಿಗೂ ಮದುವೆ ಮಾಡುವುದಾಗಿ ಪ್ರೇಮಿಗಳನ್ನು ವಾಪಸ್ ಕರೆತರುವಲ್ಲಿ ಯಶಸ್ವಿಯಾಗಿದ್ದರು. ಇಂದು ಸಂಜೆ ಯುವತಿಯ ಮನೆಯಲ್ಲಿ ಮದುವೆಯ ನಿಶ್ಚಿತಾರ್ಥವಿತ್ತು. ಆದ್ರೆ ಇದಕ್ಕೂ ಮೊದಲು ಯುವತಿಯ ಸಹೋದರ ಜಬೀ ಮತ್ತು ಆತನ ಇಬ್ಬರು ಸ್ನೇಹಿತರು ಸೇರಿ ಪ್ರಿಯಕರ ಸಲ್ಮಾನ್ ನ್ನು ಪಟ್ಟಣದಿಂದ ಹೊರವಲಯಕ್ಕೆ ಕರೆದುಕೊಂಡು ಹೋಗಿ ಚಾಕು ಇರಿದು ಕೊಲೆಗೆ ಯತ್ನಿಸಿದ್ದಾರೆ. ಯುವತಿಯ ಸಹೋದರನಿಗೆ ಈ ಲವ್ ಮ್ಯಾರೇಜ್ ಇಷ್ಟರಲಿಲ್ಲ. ಈ ಹಿನ್ನೆಲೆಯಲ್ಲಿ ಅಕ್ಕ ಪ್ರೀತಿಸಿದ ಪ್ರಿಯಕರನ ಕಥೆ ಮುಗಿಸಲು ತಮ್ಮ ಡಿಸೈಡ್ ಮಾಡಿದ್ದನಂತೆ. ತಕ್ಷಣ ಯುವಕನನ್ನು ಪಟ್ಟಣದ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಹೀಗೆ ಲವ್ ಮಾಡಿ ಇನ್ನೇನು ಮದುವೆಯಾಗುವ ಖುಷಿಯಲ್ಲಿದ್ದ ಪ್ರಿಯಕರನಿಗೆ ದೊಡ್ಡ ಶಾಕ್. ಉಪಾಯದಿಂದ ನಿನ್ನೆ ರಾತ್ರಿ ಸ್ನೇಹಿತನೊಬ್ಬನು ಬೈಕ್ ಮೇಲೆ ಕರೆದುಕೊಂಡು ಹೋಗಿದ್ದಾನೆ. ಶಿರಾಳಕೊಪ್ಪದ ಹೊರವಲಯದಲ್ಲಿ ಪ್ರಿಯಕರ ಮೇಲೆ ಸೇಡು ತೀರಿಸಿಕೊಳ್ಳಲು ಅಲ್ಲಿ ಪ್ರೇಯಸಿಯ ತಮ್ಮ ಜಬೀ ಕಾದು ಕುಳಿತಿದ್ದ. ಪ್ರಿಯಕರನ ತಮ್ಮನನ್ನು ನೋಡಿದ ಪ್ರಿಯಕರನಿಗೆ ಅಚ್ಚರಿಯಾಗಿದೆ.

ಇದನ್ನೂ ಓದಿ: ಮದ್ಯಪಾನ ಮಾಡಬೇಡಿ ಎಂದಿದ್ದಕ್ಕೆ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ

ಈ ನಡುವೆ ಯಾವುದೋ ಮಾಯದಲ್ಲಿ ಕೈಯಲ್ಲಿದ್ದ ಚಾಕು ತೆಗೆದು ಅಕ್ಕನ ಮದುವೆಯಾಗುವ ಸಲ್ಮಾನ್ ನ ಹೊಟ್ಟೆಗೆ ತಮ್ಮ ಜಬೀ ಚಾಕುವಿಂದ ಇರಿದ್ದಾನೆ. ಚಾಕು ಇರಿದ ಬಳಿಕ ಜಬೀ ಕ್ಷಣಾರ್ಧದಲ್ಲಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಸದ್ಯ ಹೀಗೆ ಪ್ರೀತಿಸಿದ ಯುವತಿಯನ್ನೇ ಮದುವೆಯಾಗುತ್ತಿರುವ ಖುಷಿಯಲ್ಲಿ ಸಲ್ಮಾನ್ ಇದ್ದನು. ಆದರೆ ತನ್ನ ಅಕ್ಕನ ಲವ್ ಮಾಡಿ ಕುಟುಂಬಕ್ಕೆ ಕೆಟ್ಟು ಹೆಸರು ತಂದಿರುವ ಪ್ರಿಯಕರಿಗೆ ಬುದ್ದಿ ಕಲಿಸಲು ತಮ್ಮನು ಮುಂದಾಗಿದ್ದನು.

ಈ ಪ್ರಕರಣದಲ್ಲಿ ಶಿರಾಳಕೊಪ್ಪ ಪೊಲೀಸರು ಜಬೀಯನ್ನು ಬಂಧಿಸಿದ್ದಾರೆ. ಈತನ ಜೊತೆ ಇದ್ದ ಮತ್ತಿಬ್ಬರ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಸಲ್ಮಾನ್ ಅದೃಷ್ಟ ಚೆನ್ನಾಗಿತ್ತು. ಹೊಟ್ಟೆಗೆ ಚಾಕು ಇರಿದು ಗಂಭೀರವಾಗಿ ಗಾಯಗೊಂಡಿದ್ದರೂ ನಿನ್ನೆ ತಡರಾತ್ರಿ ಶಿರಾಳಕೊಪ್ಪದ ಕಾಂಗ್ರೆಸ್ ಮುಖಂಡ ಬಿಲಾಲ್ ಅವರೇ ಸ್ವತಃ ಅಂಬುಲೆನ್ಸ್ ಮೂಲಕ ಸಲ್ಮಾನನ್ನು ಶಿವಮೊಗ್ಗಕ್ಕೆ ಕರೆತಂದಿದ್ದಾರೆ. ಸೂಕ್ತ ಸಮಯದಲ್ಲಿ ಸಲ್ಮಾನನಿಗೆ ಚಿಕಿತ್ಸೆ ಸಿಕ್ಕಿದ್ದರಿಂದ ಆತ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ದಾಳಿಯಲ್ಲಿ ಗಾಯಾಳು ಪರಿಸ್ಥಿತಿ ಗಂಭೀರವಾಗಿತ್ತು. ಈಗ ಚಿಕಿತ್ಸೆ ಬಳಿಕ ಆತನ ಆರೋಗ್ಯ ಸ್ಥಿರವಾಗಿರುವ ಕುರಿತು ವೈದ್ಯರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:44 am, Sat, 9 March 24

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!