AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಮಾಲೀಕರ ಮನೆಯನ್ನೇ ದೋಚಿದ ಲಿವಿಂಗ್ ಟುಗೆದರ್​​ನಲ್ಲಿದ್ದ ಜೋಡಿ

ಬಾಡಿಗೆ ಮನೆಯಲ್ಲಿ ಲಿವಿಂಗ್ ಟುಗೆದರ್​​ನಲ್ಲಿದ್ದ ಜೋಡಿ ಮಾಲೀಕರ ಮನೆಯನ್ನೇ ದೋಚಿರುವ ಘಟನೆ ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎಜಿಎಸ್ ಲೇಔಟ್​​​ನಲ್ಲಿ ನಡೆದಿದೆ.

Bengaluru News: ಮಾಲೀಕರ ಮನೆಯನ್ನೇ ದೋಚಿದ ಲಿವಿಂಗ್ ಟುಗೆದರ್​​ನಲ್ಲಿದ್ದ ಜೋಡಿ
ಬಂಧಿತ ಆರೋಪಿಗಳು
Shivaprasad B
| Edited By: |

Updated on:Jul 02, 2023 | 10:30 AM

Share

ಬೆಂಗಳೂರು: ಬಾಡಿಗೆ ಮನೆಯಲ್ಲಿ ಲಿವಿಂಗ್ ಟುಗೆದರ್​​ನಲ್ಲಿದ್ದ (Living together) ಜೋಡಿ ಮಾಲೀಕರ ಮನೆಯನ್ನೇ ದೋಚಿರುವ ಘಟನೆ ನಗರದ ಸುಬ್ರಮಣ್ಯಪುರ ಪೊಲೀಸ್ (Police) ಠಾಣಾ ವ್ಯಾಪ್ತಿಯ ಎಜಿಎಸ್ ಲೇಔಟ್​​​ನಲ್ಲಿ ನಡೆದಿದೆ. ಸದ್ಯ ಖತರ್ನಾಕ್ ಜೋಡಿಯನ್ನು (Couple) ಸುಬ್ರಮಣ್ಯವಪುರ ಪೊಲೀಸರು ಬಂಧಿಸಿದ್ದಾರೆ. ಲಿಖಿತ ಹಾಗೂ ಸುಮಂತಾ ಬಂಧಿತ ಆರೋಪಿಗಳು.

ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಎಜಿಎಸ್ ಲೇಔಟ್​​​ನ ಪ್ರೇಮಲತ ಎಂಬುವವರ ಮನೆಯಲ್ಲಿ ಲಿಖಿತ ಹಾಗೂ ಸುಮಂತ್ ಬಾಡಿಗೆಗೆ ಇದ್ದರು. ಜೋಡಿ ಕಳ್ಳತನ ಮಾಡಲು ನಾಲ್ಕು ತಿಂಗಳು ಮನೆ ಬಾಡಿಗೆಗೆ ಪಡೆದಿತ್ತು. ಈ ಇಬ್ಬರು ನಾಲ್ಕು ತಿಂಗಳು ಮನೆ ಮಾಲೀಕರ ಚಲನ-ವಲನ ಗಮನಿಸಿದ್ದರು.

ಜೋಡಿ ಇತ್ತೀಚೆಗೆ ಮನೆ ಖಾಲಿ ಮಾಡಿದೆ. ಮನೆ ಖಾಲಿ ಮಾಡಿದ ಕೆಲವೇ ದಿನಗಳಲ್ಲಿ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡಿದೆ. ಆರೋಪಿಗಳು ಮನೆಯಲ್ಲಿದ್ದ 4 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದಾರೆ. ಆರೋಪಿಗಳ ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿತ್ತು.

ಇದನ್ನೂ ಓದಿ: ನಿತ್ಯ ಕುಡಿದು ಬಂದು ಕಿರುಕುಳ ಕೊಡುತ್ತಿದ್ದ ಮಗನ ಕೈ ಕಾಲು ಕಟ್ಟಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ತಂದೆ

ಪ್ರಕರಣವನ್ನು ದಾಖಲಿಸಿಕೊಂಡಿದ್ದ ಪೊಲೀಸರು, ಇಬ್ಬರಿಗಾಗಿ ಬಲೆ ಬೀಸಿದ್ದರು. ಆರೋಪಿಗಳು ಕದ್ದ ಚಿನ್ನದ ಒಡವೆಗಳನ್ನು ಮಾರಿ ಶಿವಮೊಗ್ಗದಲ್ಲಿ ಸೆಟಲ್ ಆಗಿದ್ದಾರೆ. ಎಂಬ ಮಾಹಿತಿ ತಿಳಿದ ಕೂಡಲೆ ಸುಬ್ರಮಣ್ಯಪುರ ಠಾಣಾ ಪೊಲೀಸರು ಖದೀಮರನ್ನು ಬಂಧಿಸಿ ಕರೆತಂದಿದ್ದಾರೆ.

ಹೀಗೆ ಕದ್ದ ಹಣ ಖಾಲಿಯಾದ ಹಿನ್ನಲೆ ಮತ್ತೊಂದು ಕೃತ್ಯವೆಸಗಲು ಆರೋಪಿಗಳು ಸಿದ್ದವಾಗಿದ್ದರೆಂಬುವುದು ವಿಚಾರಣೆ ವೇಳೆ ತಿಳಿದುಬಂದಿದೆ. ಇನ್ನು ಪೊಲೀಸರು ಆರೋಪಿಗಳನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:52 am, Sun, 2 July 23

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​