ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ, ಇಬ್ಬರ ಸಾವು

ರಾಯಚೂರು: ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ ಹೊಡೆದು ಮನೆಯಲ್ಲಿದ್ದ ದಂಪತಿ ಮೃತಪಟ್ಟಿರುವ ಘಟನೆ ಸಿಂಧನೂರ ತಾಲೂಕಿನ ಬೂತಲದಿನ್ನಿ ಕ್ರಾಸ್ ಬಳಿ ನಡೆದಿದೆ. ರಾಜೇಶ್(40), ಜ್ಯೋತಿ(35) ಮೃತಪಟ್ಟಿದ್ದಾರೆ. ಮನೆಯಲ್ಲಿ ಸಿಲುಕಿದ್ದ ದೇವಿಕಾ, ರಾಜು ಎಂಬುವರನ್ನು ಸ್ಥಳೀಯರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ. ಭತ್ತದ ತುಂಬಿದ್ದ ಲಾರಿ ತನ್ನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕ ಇದ್ದ ಶಡ್ ಮೇಲೆ ಬಿದ್ದಿದೆ. ಬೀಳುತ್ತಿದ್ದಂತೆ ಶಡ್‍ನಲ್ಲಿ ವಾಸಿಸುತ್ತಿದ್ದ ದಂಪತಿ […]

ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ, ಇಬ್ಬರ ಸಾವು

Updated on: Dec 19, 2019 | 10:33 AM

ರಾಯಚೂರು: ರಸ್ತೆ ಪಕ್ಕದಲ್ಲಿದ್ದ ಮನೆ ಮೇಲೆ ಲಾರಿ ಪಲ್ಟಿ ಹೊಡೆದು ಮನೆಯಲ್ಲಿದ್ದ ದಂಪತಿ ಮೃತಪಟ್ಟಿರುವ ಘಟನೆ ಸಿಂಧನೂರ ತಾಲೂಕಿನ ಬೂತಲದಿನ್ನಿ ಕ್ರಾಸ್ ಬಳಿ ನಡೆದಿದೆ.
ರಾಜೇಶ್(40), ಜ್ಯೋತಿ(35) ಮೃತಪಟ್ಟಿದ್ದಾರೆ. ಮನೆಯಲ್ಲಿ ಸಿಲುಕಿದ್ದ ದೇವಿಕಾ, ರಾಜು ಎಂಬುವರನ್ನು ಸ್ಥಳೀಯರು ರಕ್ಷಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣವಾಗಿದೆ. ಭತ್ತದ ತುಂಬಿದ್ದ ಲಾರಿ ತನ್ನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕ ಇದ್ದ ಶಡ್ ಮೇಲೆ ಬಿದ್ದಿದೆ. ಬೀಳುತ್ತಿದ್ದಂತೆ ಶಡ್‍ನಲ್ಲಿ ವಾಸಿಸುತ್ತಿದ್ದ ದಂಪತಿ ಮೃತಪಟ್ಟಿದ್ದಾರೆ. ಇನ್ನು ಸಿಂಧನೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us