AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮತಾಂತರ, ಗೋಮಾಂಸ ತಿನ್ನಿಸಿ ಚಿತ್ರಹಿಂಸೆ; ಲವ್ ಜಿಹಾದ್ ಬಯಲು

ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಹುಡುಗಿಯನ್ನು ಬಲೆಗೆ ಬೀಳಿಸಲು ರಾಣಾ ಎಂದು ಹೆಸರು ಹೇಳಿಕೊಂಡು ಮೋಸ ಮಾಡಿದ್ದಾನೆ. ನಂತರ ಬಲವಂತವಾಗಿ ಆಕೆಯನ್ನು ಮತಾಂತರಿಸಿ, ನಿಕಾಹ್ ಸಮಯದಲ್ಲಿ ಅವಳಿಗೆ ಗೋಮಾಂಸ ತಿನ್ನಿಸಿದ್ದಾನೆ. ಮದುವೆಯಾದ ನಂತರ ಮಗುವನ್ನು ಗರ್ಭಪಾತ ಮಾಡುವಂತೆ ಅವಳನ್ನು ಒತ್ತಾಯಿಸಿದ್ದಾನೆ.

Crime News: ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮತಾಂತರ, ಗೋಮಾಂಸ ತಿನ್ನಿಸಿ ಚಿತ್ರಹಿಂಸೆ; ಲವ್ ಜಿಹಾದ್ ಬಯಲು
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jun 07, 2024 | 7:40 PM

Share

ನವದೆಹಲಿ: ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್‌ನ (Love Jihad) ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮುಸ್ಲಿಂ ಯುವಕನೊಬ್ಬ ಬಿಹಾರದ ಹಿಂದೂ ಯುವತಿಯ ಬಳಿ ತಾನು ರಾಣಾ ಎಂಬ ಹಿಂದೂ ಯುವಕ ಎಂದು ಹೇಳಿಕೊಂಡಿದ್ದಾನೆ. ತನ್ನ ಗುರುತನ್ನು ಸುಳ್ಳು ಹೇಳಿ ಲವ್ ಜಿಹಾದ್‌ಗೆ ಸಿಕ್ಕಿಹಾಕಿಸಿ, ಅವಳೊಂದಿಗೆ ಪ್ರಣಯ ಸಂಬಂಧವನ್ನು ಪ್ರಾರಂಭಿಸಿ ನಂತರ ರಾಯ್​ಬರೇಲಿಯ ದರ್ಗಾಕ್ಕೆ ಕರೆತಂದಿದ್ದಾನೆ.

ಆಕೆಯನ್ನು ಅಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ. ನಂತರ, ಅವರು ತಮ್ಮ ನಿಕಾಹ್ (ಇಸ್ಲಾಮಿಕ್ ವಿವಾಹ ಸಮಾರಂಭ) ಸಮಯದಲ್ಲಿ ಆಕೆಗೆ ಗೋಮಾಂಸವನ್ನು ತಿನ್ನಿಸಿದ್ದಾರೆ. ಮದುವೆಯಾದ ನಂತರ ಆಕೆ ಗರ್ಭಿಣಿಯಾದಾಗ ಒತ್ತಾಯದಿಂದ ಆಕೆಗೆ ಗರ್ಭಪಾತ ಮಾಡಿಸಿದ್ದಾನೆ. ಬಳಿಕ, ಆಕೆಯ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರ ಹಾಕಿದ್ದಾನೆ. ಸಂತ್ರಸ್ತೆ ಇದೀಗ ನ್ಯಾಯಕ್ಕಾಗಿ ಹಿರಿಯ ಪೊಲೀಸ್ ಅಧೀಕ್ಷಕರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಶಂಕೆ

ಈ ವಿಷಯ ಬಹೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಸುನ್ನಿ ನಗರಕ್ಕೆ ಸಂಬಂಧಿಸಿದೆ. ಆರೋಪಿಯು ಗುರ್ಗಾಂವ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಸಂತ್ರಸ್ತೆಯ ಬಳಿಗೆ ಬಂದು ತನ್ನನ್ನು ರಾಣಾ ಎಂದು ಪರಿಚಯಿಸಿಕೊಂಡಿದ್ದಾನೆ. ನಂತರ ಆಕೆಯನ್ನು ಪ್ರೀತಿಸುವಂತೆ ಆಮಿಷವೊಡ್ಡಿದ್ದ. ವರದಿಗಳ ಪ್ರಕಾರ, ಅವಳು ದೆಹಲಿಯಲ್ಲಿ ಬಾಡಿಗೆ ಸ್ಥಳದಲ್ಲಿ ಉಳಿದುಕೊಂಡಿದ್ದಳು. ಅವನು ಸಹ ಅಲ್ಲೇ ಹತ್ತಿರದಲ್ಲೇ ವಾಸಿಸುತ್ತಿದ್ದನು. ರಾಣಾ ಎಂದು ಹೇಳಿಕೊಂಡು ಆಕೆಯೊಂದಿಗೆ ಸ್ನೇಹ ಬೆಳೆಸಿ ಕ್ರಮೇಣ ಆಕೆಯನ್ನು ತನ್ನ ಬಲೆಗೆ ಬೀಳಿಸಿಕೊಂಡಿದ್ದ. ನಂತರ ಅವನು ಸುಮಾರು ಒಂದೂವರೆ ವರ್ಷಗಳ ಹಿಂದೆ ಬಹೇರಿಯಲ್ಲಿರುವ ತನ್ನ ನಿವಾಸಕ್ಕೆ ಅವಳನ್ನು ಕರೆದೊಯ್ದಿದ್ದ. ನಂತರ ಆತ ದರ್ಗಾದಲ್ಲಿ ಇಸ್ಲಾಂ ಧರ್ಮವನ್ನು ಸ್ವೀಕರಿಸುವಂತೆ ಒತ್ತಡ ಹೇರಿದ್ದ. ಅಲ್ಲಿ ಅವಳನ್ನು ಮದುವೆಯಾಗಿದ್ದ.

ಇದನ್ನೂ ಓದಿ: ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಲವ್ ಜಿಹಾದ್ ಶುರುವಾಗಿದೆ: ಬಿವೈ ವಿಜಯೇಂದ್ರ

ಮದುವೆಯ ನಂತರ ತನಗೆ ಥಳಿಸಿ ಚಿತ್ರಹಿಂಸೆ ನೀಡಲಾಯಿತು ಎಂದು ಮಹಿಳೆ ಹೇಳಿದ್ದಾಳೆ. ಅವಳು ಗರ್ಭಿಣಿಯಾದಾಗ ಮಗುವನ್ನು ಗರ್ಭಪಾತ ಮಾಡುವಂತೆ ಒತ್ತಾಯಿಸಲಾಯಿತು. ಒಂದು ದಿನ ಆಕೆಯ ಗಂಡನ ತಮ್ಮ ಅವಳ ಕೋಣೆಗೆ ಪ್ರವೇಶಿಸಿ ಅತ್ಯಾಚಾರ ಮಾಡಿದನು. ಮನೆಗೆ ಬಂದ ಬಳಿಕ ಪತಿಗೆ ಈ ವಿಷಯ ಹೇಳಿದಾಗ ಬಾಯಿ ಮುಚ್ಚಿಕೊಳ್ಳುವಂತೆ ಬೆದರಿಸಿದ್ದು, ಯಾರಿಗಾದರೂ ಹೇಳಿದರೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡುವುದಾಗಿ ಹೆದರಿಸಿದ್ದಾರೆ. ನಂತರ ಅವಳು ಬಹೇರಿ ಪೊಲೀಸ್ ಠಾಣೆಗೆ ಬಂದು ಎಲ್ಲ ವಿಷಯವನ್ನೂ ತಿಳಿಸಿದ್ದಾರೆ. ಗಂಡನ ವಿರುದ್ಧ ದೂರು ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ