AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮತಾಂತರ, ಗೋಮಾಂಸ ತಿನ್ನಿಸಿ ಚಿತ್ರಹಿಂಸೆ; ಲವ್ ಜಿಹಾದ್ ಬಯಲು

ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಹುಡುಗಿಯನ್ನು ಬಲೆಗೆ ಬೀಳಿಸಲು ರಾಣಾ ಎಂದು ಹೆಸರು ಹೇಳಿಕೊಂಡು ಮೋಸ ಮಾಡಿದ್ದಾನೆ. ನಂತರ ಬಲವಂತವಾಗಿ ಆಕೆಯನ್ನು ಮತಾಂತರಿಸಿ, ನಿಕಾಹ್ ಸಮಯದಲ್ಲಿ ಅವಳಿಗೆ ಗೋಮಾಂಸ ತಿನ್ನಿಸಿದ್ದಾನೆ. ಮದುವೆಯಾದ ನಂತರ ಮಗುವನ್ನು ಗರ್ಭಪಾತ ಮಾಡುವಂತೆ ಅವಳನ್ನು ಒತ್ತಾಯಿಸಿದ್ದಾನೆ.

Crime News: ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮತಾಂತರ, ಗೋಮಾಂಸ ತಿನ್ನಿಸಿ ಚಿತ್ರಹಿಂಸೆ; ಲವ್ ಜಿಹಾದ್ ಬಯಲು
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jun 07, 2024 | 7:40 PM

Share

ನವದೆಹಲಿ: ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್‌ನ (Love Jihad) ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮುಸ್ಲಿಂ ಯುವಕನೊಬ್ಬ ಬಿಹಾರದ ಹಿಂದೂ ಯುವತಿಯ ಬಳಿ ತಾನು ರಾಣಾ ಎಂಬ ಹಿಂದೂ ಯುವಕ ಎಂದು ಹೇಳಿಕೊಂಡಿದ್ದಾನೆ. ತನ್ನ ಗುರುತನ್ನು ಸುಳ್ಳು ಹೇಳಿ ಲವ್ ಜಿಹಾದ್‌ಗೆ ಸಿಕ್ಕಿಹಾಕಿಸಿ, ಅವಳೊಂದಿಗೆ ಪ್ರಣಯ ಸಂಬಂಧವನ್ನು ಪ್ರಾರಂಭಿಸಿ ನಂತರ ರಾಯ್​ಬರೇಲಿಯ ದರ್ಗಾಕ್ಕೆ ಕರೆತಂದಿದ್ದಾನೆ.

ಆಕೆಯನ್ನು ಅಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ. ನಂತರ, ಅವರು ತಮ್ಮ ನಿಕಾಹ್ (ಇಸ್ಲಾಮಿಕ್ ವಿವಾಹ ಸಮಾರಂಭ) ಸಮಯದಲ್ಲಿ ಆಕೆಗೆ ಗೋಮಾಂಸವನ್ನು ತಿನ್ನಿಸಿದ್ದಾರೆ. ಮದುವೆಯಾದ ನಂತರ ಆಕೆ ಗರ್ಭಿಣಿಯಾದಾಗ ಒತ್ತಾಯದಿಂದ ಆಕೆಗೆ ಗರ್ಭಪಾತ ಮಾಡಿಸಿದ್ದಾನೆ. ಬಳಿಕ, ಆಕೆಯ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರ ಹಾಕಿದ್ದಾನೆ. ಸಂತ್ರಸ್ತೆ ಇದೀಗ ನ್ಯಾಯಕ್ಕಾಗಿ ಹಿರಿಯ ಪೊಲೀಸ್ ಅಧೀಕ್ಷಕರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಶಂಕೆ

ಈ ವಿಷಯ ಬಹೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಸುನ್ನಿ ನಗರಕ್ಕೆ ಸಂಬಂಧಿಸಿದೆ. ಆರೋಪಿಯು ಗುರ್ಗಾಂವ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಸಂತ್ರಸ್ತೆಯ ಬಳಿಗೆ ಬಂದು ತನ್ನನ್ನು ರಾಣಾ ಎಂದು ಪರಿಚಯಿಸಿಕೊಂಡಿದ್ದಾನೆ. ನಂತರ ಆಕೆಯನ್ನು ಪ್ರೀತಿಸುವಂತೆ ಆಮಿಷವೊಡ್ಡಿದ್ದ. ವರದಿಗಳ ಪ್ರಕಾರ, ಅವಳು ದೆಹಲಿಯಲ್ಲಿ ಬಾಡಿಗೆ ಸ್ಥಳದಲ್ಲಿ ಉಳಿದುಕೊಂಡಿದ್ದಳು. ಅವನು ಸಹ ಅಲ್ಲೇ ಹತ್ತಿರದಲ್ಲೇ ವಾಸಿಸುತ್ತಿದ್ದನು. ರಾಣಾ ಎಂದು ಹೇಳಿಕೊಂಡು ಆಕೆಯೊಂದಿಗೆ ಸ್ನೇಹ ಬೆಳೆಸಿ ಕ್ರಮೇಣ ಆಕೆಯನ್ನು ತನ್ನ ಬಲೆಗೆ ಬೀಳಿಸಿಕೊಂಡಿದ್ದ. ನಂತರ ಅವನು ಸುಮಾರು ಒಂದೂವರೆ ವರ್ಷಗಳ ಹಿಂದೆ ಬಹೇರಿಯಲ್ಲಿರುವ ತನ್ನ ನಿವಾಸಕ್ಕೆ ಅವಳನ್ನು ಕರೆದೊಯ್ದಿದ್ದ. ನಂತರ ಆತ ದರ್ಗಾದಲ್ಲಿ ಇಸ್ಲಾಂ ಧರ್ಮವನ್ನು ಸ್ವೀಕರಿಸುವಂತೆ ಒತ್ತಡ ಹೇರಿದ್ದ. ಅಲ್ಲಿ ಅವಳನ್ನು ಮದುವೆಯಾಗಿದ್ದ.

ಇದನ್ನೂ ಓದಿ: ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಲವ್ ಜಿಹಾದ್ ಶುರುವಾಗಿದೆ: ಬಿವೈ ವಿಜಯೇಂದ್ರ

ಮದುವೆಯ ನಂತರ ತನಗೆ ಥಳಿಸಿ ಚಿತ್ರಹಿಂಸೆ ನೀಡಲಾಯಿತು ಎಂದು ಮಹಿಳೆ ಹೇಳಿದ್ದಾಳೆ. ಅವಳು ಗರ್ಭಿಣಿಯಾದಾಗ ಮಗುವನ್ನು ಗರ್ಭಪಾತ ಮಾಡುವಂತೆ ಒತ್ತಾಯಿಸಲಾಯಿತು. ಒಂದು ದಿನ ಆಕೆಯ ಗಂಡನ ತಮ್ಮ ಅವಳ ಕೋಣೆಗೆ ಪ್ರವೇಶಿಸಿ ಅತ್ಯಾಚಾರ ಮಾಡಿದನು. ಮನೆಗೆ ಬಂದ ಬಳಿಕ ಪತಿಗೆ ಈ ವಿಷಯ ಹೇಳಿದಾಗ ಬಾಯಿ ಮುಚ್ಚಿಕೊಳ್ಳುವಂತೆ ಬೆದರಿಸಿದ್ದು, ಯಾರಿಗಾದರೂ ಹೇಳಿದರೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡುವುದಾಗಿ ಹೆದರಿಸಿದ್ದಾರೆ. ನಂತರ ಅವಳು ಬಹೇರಿ ಪೊಲೀಸ್ ಠಾಣೆಗೆ ಬಂದು ಎಲ್ಲ ವಿಷಯವನ್ನೂ ತಿಳಿಸಿದ್ದಾರೆ. ಗಂಡನ ವಿರುದ್ಧ ದೂರು ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್