Crime News: ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮತಾಂತರ, ಗೋಮಾಂಸ ತಿನ್ನಿಸಿ ಚಿತ್ರಹಿಂಸೆ; ಲವ್ ಜಿಹಾದ್ ಬಯಲು

ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ಹುಡುಗಿಯನ್ನು ಬಲೆಗೆ ಬೀಳಿಸಲು ರಾಣಾ ಎಂದು ಹೆಸರು ಹೇಳಿಕೊಂಡು ಮೋಸ ಮಾಡಿದ್ದಾನೆ. ನಂತರ ಬಲವಂತವಾಗಿ ಆಕೆಯನ್ನು ಮತಾಂತರಿಸಿ, ನಿಕಾಹ್ ಸಮಯದಲ್ಲಿ ಅವಳಿಗೆ ಗೋಮಾಂಸ ತಿನ್ನಿಸಿದ್ದಾನೆ. ಮದುವೆಯಾದ ನಂತರ ಮಗುವನ್ನು ಗರ್ಭಪಾತ ಮಾಡುವಂತೆ ಅವಳನ್ನು ಒತ್ತಾಯಿಸಿದ್ದಾನೆ.

Crime News: ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮತಾಂತರ, ಗೋಮಾಂಸ ತಿನ್ನಿಸಿ ಚಿತ್ರಹಿಂಸೆ; ಲವ್ ಜಿಹಾದ್ ಬಯಲು
ಸಾಂದರ್ಭಿಕ ಚಿತ್ರ
Follow us
|

Updated on: Jun 07, 2024 | 7:40 PM

ನವದೆಹಲಿ: ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್‌ನ (Love Jihad) ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಮುಸ್ಲಿಂ ಯುವಕನೊಬ್ಬ ಬಿಹಾರದ ಹಿಂದೂ ಯುವತಿಯ ಬಳಿ ತಾನು ರಾಣಾ ಎಂಬ ಹಿಂದೂ ಯುವಕ ಎಂದು ಹೇಳಿಕೊಂಡಿದ್ದಾನೆ. ತನ್ನ ಗುರುತನ್ನು ಸುಳ್ಳು ಹೇಳಿ ಲವ್ ಜಿಹಾದ್‌ಗೆ ಸಿಕ್ಕಿಹಾಕಿಸಿ, ಅವಳೊಂದಿಗೆ ಪ್ರಣಯ ಸಂಬಂಧವನ್ನು ಪ್ರಾರಂಭಿಸಿ ನಂತರ ರಾಯ್​ಬರೇಲಿಯ ದರ್ಗಾಕ್ಕೆ ಕರೆತಂದಿದ್ದಾನೆ.

ಆಕೆಯನ್ನು ಅಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ. ನಂತರ, ಅವರು ತಮ್ಮ ನಿಕಾಹ್ (ಇಸ್ಲಾಮಿಕ್ ವಿವಾಹ ಸಮಾರಂಭ) ಸಮಯದಲ್ಲಿ ಆಕೆಗೆ ಗೋಮಾಂಸವನ್ನು ತಿನ್ನಿಸಿದ್ದಾರೆ. ಮದುವೆಯಾದ ನಂತರ ಆಕೆ ಗರ್ಭಿಣಿಯಾದಾಗ ಒತ್ತಾಯದಿಂದ ಆಕೆಗೆ ಗರ್ಭಪಾತ ಮಾಡಿಸಿದ್ದಾನೆ. ಬಳಿಕ, ಆಕೆಯ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರ ಹಾಕಿದ್ದಾನೆ. ಸಂತ್ರಸ್ತೆ ಇದೀಗ ನ್ಯಾಯಕ್ಕಾಗಿ ಹಿರಿಯ ಪೊಲೀಸ್ ಅಧೀಕ್ಷಕರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಯುವತಿ ನಾಪತ್ತೆ ಪ್ರಕರಣದ ಹಿಂದೆ ಲವ್ ಜಿಹಾದ್ ಶಂಕೆ

ಈ ವಿಷಯ ಬಹೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಸುನ್ನಿ ನಗರಕ್ಕೆ ಸಂಬಂಧಿಸಿದೆ. ಆರೋಪಿಯು ಗುರ್ಗಾಂವ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಸಂತ್ರಸ್ತೆಯ ಬಳಿಗೆ ಬಂದು ತನ್ನನ್ನು ರಾಣಾ ಎಂದು ಪರಿಚಯಿಸಿಕೊಂಡಿದ್ದಾನೆ. ನಂತರ ಆಕೆಯನ್ನು ಪ್ರೀತಿಸುವಂತೆ ಆಮಿಷವೊಡ್ಡಿದ್ದ. ವರದಿಗಳ ಪ್ರಕಾರ, ಅವಳು ದೆಹಲಿಯಲ್ಲಿ ಬಾಡಿಗೆ ಸ್ಥಳದಲ್ಲಿ ಉಳಿದುಕೊಂಡಿದ್ದಳು. ಅವನು ಸಹ ಅಲ್ಲೇ ಹತ್ತಿರದಲ್ಲೇ ವಾಸಿಸುತ್ತಿದ್ದನು. ರಾಣಾ ಎಂದು ಹೇಳಿಕೊಂಡು ಆಕೆಯೊಂದಿಗೆ ಸ್ನೇಹ ಬೆಳೆಸಿ ಕ್ರಮೇಣ ಆಕೆಯನ್ನು ತನ್ನ ಬಲೆಗೆ ಬೀಳಿಸಿಕೊಂಡಿದ್ದ. ನಂತರ ಅವನು ಸುಮಾರು ಒಂದೂವರೆ ವರ್ಷಗಳ ಹಿಂದೆ ಬಹೇರಿಯಲ್ಲಿರುವ ತನ್ನ ನಿವಾಸಕ್ಕೆ ಅವಳನ್ನು ಕರೆದೊಯ್ದಿದ್ದ. ನಂತರ ಆತ ದರ್ಗಾದಲ್ಲಿ ಇಸ್ಲಾಂ ಧರ್ಮವನ್ನು ಸ್ವೀಕರಿಸುವಂತೆ ಒತ್ತಡ ಹೇರಿದ್ದ. ಅಲ್ಲಿ ಅವಳನ್ನು ಮದುವೆಯಾಗಿದ್ದ.

ಇದನ್ನೂ ಓದಿ: ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಲವ್ ಜಿಹಾದ್ ಶುರುವಾಗಿದೆ: ಬಿವೈ ವಿಜಯೇಂದ್ರ

ಮದುವೆಯ ನಂತರ ತನಗೆ ಥಳಿಸಿ ಚಿತ್ರಹಿಂಸೆ ನೀಡಲಾಯಿತು ಎಂದು ಮಹಿಳೆ ಹೇಳಿದ್ದಾಳೆ. ಅವಳು ಗರ್ಭಿಣಿಯಾದಾಗ ಮಗುವನ್ನು ಗರ್ಭಪಾತ ಮಾಡುವಂತೆ ಒತ್ತಾಯಿಸಲಾಯಿತು. ಒಂದು ದಿನ ಆಕೆಯ ಗಂಡನ ತಮ್ಮ ಅವಳ ಕೋಣೆಗೆ ಪ್ರವೇಶಿಸಿ ಅತ್ಯಾಚಾರ ಮಾಡಿದನು. ಮನೆಗೆ ಬಂದ ಬಳಿಕ ಪತಿಗೆ ಈ ವಿಷಯ ಹೇಳಿದಾಗ ಬಾಯಿ ಮುಚ್ಚಿಕೊಳ್ಳುವಂತೆ ಬೆದರಿಸಿದ್ದು, ಯಾರಿಗಾದರೂ ಹೇಳಿದರೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡುವುದಾಗಿ ಹೆದರಿಸಿದ್ದಾರೆ. ನಂತರ ಅವಳು ಬಹೇರಿ ಪೊಲೀಸ್ ಠಾಣೆಗೆ ಬಂದು ಎಲ್ಲ ವಿಷಯವನ್ನೂ ತಿಳಿಸಿದ್ದಾರೆ. ಗಂಡನ ವಿರುದ್ಧ ದೂರು ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ