AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಡೀಪ್​ ಫೇಕ್ ಪ್ರಕರಣ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಫೋಟೋ ಎಡಿಟ್​ ಮಾಡಿ ಬ್ಯ್ಲಾಕ್​ಮೇಲ್

ದುಷ್ಕರ್ಮಿಗಳು ಇತ್ತೀಚಿಗೆ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರ ಭಾವಚಿತ್ರವನ್ನು ಡೀಪ್​ ಫೇಕ್​ ಮೂಲಕ ಅಶ್ಲೀಲವಾಗಿ ವಿಡಿಯೋ ಎಡಿಟ್​ ಮಾಡಿದ್ದರು. ಈ ಪ್ರಕರಣ ನಂತರ ಇದೇ ರೀತಿ ನಟಿ ಕತ್ರಿನಾ ಕೈಫ್​ ಅವರ ಭಾವಚಿತ್ರ ಉಪಯೋಗಿಸಿ ಅಶ್ಲೀಲವಾಗಿ ಎಡಿಟ್​ ಮಾಡಲಾಗಿತ್ತು. ಈ ಡೀಪ್​​ ಫೇಕ್​ ಪ್ರಕರಣ ಕರ್ನಾಟಕದ ಬೆಳಗಾವಿಗೂ ಕಾಲಿಟ್ಟಿದೆ. ಯುವತಿಯರ ಭಾವಚಿತ್ರ ಬಳಸಿ ಅಶ್ಲೀಲ್​ವಾಗಿ ಎಡಿಟ್​ ಮಾಡಲಾಗಿದೆ.

ಬೆಳಗಾವಿಯಲ್ಲಿ ಡೀಪ್​ ಫೇಕ್ ಪ್ರಕರಣ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಫೋಟೋ ಎಡಿಟ್​ ಮಾಡಿ ಬ್ಯ್ಲಾಕ್​ಮೇಲ್
ಪೋಷಕರಿಂದ ಪೊಲೀಸರಿಗೆ ದೂರು (ಎಡಚಿತ್ರ) ಆರೋಪಿ ಮಂಥನ್​ ಪಾಟೀಲ್​ (ಬಲಚಿತ್ರ)
Sahadev Mane
| Updated By: ವಿವೇಕ ಬಿರಾದಾರ|

Updated on:Nov 12, 2023 | 10:26 AM

Share

ಬೆಳಗಾವಿ ನ.10: ಪ್ರೀತಿ ನಿರಾಕರಿಸಿದ್ದಕ್ಕೆ ಡೀಪ್​ ಫೇಕ್ (Deepfake)​ ಮೂಲಕ ಯಾರದೋ ನಗ್ನ ದೇಹಕ್ಕೆ ಯುವತಿಯ (Young Girl) ಭಾವಚಿತ್ರ ಅಳವಡಿಸಿ ಯುವಕ ಬ್ಯ್ಲಾಕ್​ಮೇಲ್ (Blackmail)​​ ಮಾಡಿರುವ ಘಟನೆ ಜಿಲ್ಲೆಯ ಖಾನಾಪುರ (Khanapur) ಪಟ್ಟಣದಲ್ಲಿ ನಡೆದಿದೆ. ಫೋಟೋ ಎಡಿಟ್​ ಮಾಡಿ ಬ್ಯ್ಲಾಕ್​ಮೇಲ್​ ಮಾಡಿದ್ದ ಆರೋಪಿ ಮಂಥನ್ ಪಾಟೀಲ್​ (22)​ನನ್ನು ಖಾನಾಪುರ ಪೊಲೀಸರು ಬಂಧಿಸಿದ್ದಾರೆ. ಯುವತಿ ಮತ್ತು ಆರೋಪಿ ಮಂಥನ್ ಪಾಟೀಲ್ ಒಂದೇ ಊರವನರಾಗಿದ್ದಾರೆ. ಮಂಥನ್ ಪಾಟೀಲ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಆರೋಪಿ ಮಂಥನ್​ ಪಾಟೀಲ್​​ ಯುವತಿಗೆ ಪ್ರೀತಿ ಮಾಡುವಂತೆ ಬೆನ್ನು ಬಿದ್ದಿದ್ದನು.

ಆದರೆ ಯುವತಿ ಈತನ ಲವ್​ ಪ್ರಪೋಸಲ್​ಗೆ ಒಪ್ಪಿರಲಿಲ್ಲ. ಹೀಗಾಗಿ ಆರೋಪಿ ಮಂಥನ್​ ಪಾಟೀಲ್​, ಸಾಮಾಜಿಕ ಜಾಲತಾಣದಿಂದ ಯುವತಿಯ ಫೋಟೋ ತೆಗೆದುಕೊಂಡು ನಗ್ನವಾಗಿ ಎಡಿಟ್​ ಮಾಡಿ ವೈರಲ್​ ಮಾಡುತ್ತೇನೆ ಎಂದು ಬ್ಲ್ಯಾಕ್​​ಮೇಲ್​ ಮಾಡಿದ್ದಾನೆ. ಆದರೂ ಯುವತಿ ಪ್ರೀತಿ ಮಾಡಲು ಒಪ್ಪಿರುವುದಿಲ್ಲ. ಯುವತಿಯ ಮೇಲೆ ಮತ್ತಷ್ಟು ಒತ್ತಡ ಹಾಕಲು ಆರೋಪಿ ಮಂಥನ್​ ಪಾಟೀಲ್​ ಯುವತಿ ಮತ್ತು ಆಕೆಯ ಗೆಳತಿಯರು ಒಟ್ಟಿಗೆ ಇರುವ ಭಾವಚಿತ್ರ ತೆಗೆದುಕೊಂಡು ಯಾರದ್ದೋ ನಗ್ನ ಭಾವಚಿತ್ರಕ್ಕೆ ಇವರ ಮುಖವನ್ನು ಅಳವಡಿಸುತ್ತಾನೆ.

ನಂತರ dram_quen_arati8 ಅಂತಾ ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಎಡಿಟ್​ ಮಾಡಿದ್ದ ಯುವತಿಯರ ಭಾವಚಿತ್ರವನ್ನು ಅಪ್ಲೋಡ್​ ಮಾಡುತ್ತಾನೆ. ಕೂಡಲೆ ಯುವತಿಯರು ಖಾನಾಪುರ ಪೊಲೀಸರಿಗೆ ದೂರು ನೀಡುತ್ತಾರೆ. ಅಲ್ಲದೆ ಯುವತಿಯರು ಮತ್ತು ಕುಟುಂಬಸ್ಥರು ಪೊಲೀಸ್ ಠಾಣೆ ಎದುರು ಧರಣಿ ಕೂಡ ನಡೆಸಿದ್ದರು. ದೂರಿನನ್ವಯ ಖಾನಾಪುರ ಪೊಲೀಸರು ಆರೋಪಿ ಮಂಥನ್​​ ಪಾಟೀಲ್​ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಡೀಪ್‌ಫೇಕ್ ವಿಡಿಯೋ ಹೇಗೆ ಸೃಷ್ಟಿಯಾಗುತ್ತದೆ? ರಶ್ಮಿಕಾ ಮಂದಣ್ಣ ಅವರ ನಕಲಿ ವಿಡಿಯೋ ಹೇಗೆ ಮಾಡಿದ್ರು?

ಪ್ರಕರಣ ಸಂಬಂಧ ಬೆಳಗಾವಿ ಎಸ್​ಪಿ ಹೇಳಿದ್ದೇನು?

ಈ ಪ್ರಕರಣದ ಬಗ್ಗೆ ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ್ ಗುಳೇದ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದು, ಪೋಟೊ ಎಡಿಟ್ ಮಾಡಿ ಯುವತಿಯರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಪ್ರಕರಣ ಖಾನಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಈ ಸಂಬಂಧ ಆರೋಪಿ ಮಂಥನ್ ಪಾಟೀಲ್ ಬಂಧಿಸಲಾಗಿದೆ. ಯುವತಿಯೋರ್ವಳು ಆತನನ್ನು ಪ್ರೀತಿ ಮಾಡಲು ಒಪ್ಪಿರಲಿಲ್ಲ. ಇದರಿಂದ ಯುವತಿಗೆ ವಾರ್ನ್ ಮಾಡಿ ಮಾನ ಮರ್ಯಾದೆ ಹರಾಜು ಹಾಕುತ್ತೇನೆ ಅಂತ ಬ್ಲ್ಯಾಕ್​ಮೇಲ್​ ಮಾಡಿದ್ದನು. ಬಳಿಕ ಯುವತಿ ಹೆಸರಿನಲ್ಲಿ ಫೇಕ್ ಅಕೌಂಟ್ ಸೃಷ್ಟಿಸಿ, ಡೀಫ್ ಫೇಕ್ ನಂತ ತಂತ್ರಜ್ಞಾನ ಬಳಸಿಕೊಂಡು ಪೋಟೊ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದನು ಎಂದು ತಿಳಿಸಿದರು.

ಯುವತಿಯ ಮೇಲೆ ಮತ್ತಷ್ಟು ಒತ್ತಡ ಹಾಕಲು, ಯುವತಿಯ ಮೂರು ಜನ ಗೆಳತಿಯರ ಫೋಟೊ ಎಡಿಟ್ ಮಾಡಿ ಅಪ್ಲೋಡ್ ಮಾಡಿದ್ದನು. ಈ ಸಂಬಂಧ ಯುವತಿಯರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದರು. ಕೇಸ್ ದಾಖಲಿಸಿಕೊಂಡು ಯುವಕ ಮಂಥನ್ ಪಾಟೀಲ್​ನನ್ನ ಅರೆಸ್ಟ್ ಮಾಡಿದ್ದೇವೆ. ಈ ರೀತಿ ಯಾರಾದರೂ ಫೋಟೊ ಎಡಿಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರೇ ಕೂಡಲೇ ಠಾಣೆಗೆ ಬಂದು ದೂರು ನೀಡಿ ಎಂದು ಸಾರ್ವಜನಿಕರಿಗೆ  ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:31 am, Sun, 12 November 23

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್