AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೊಟ್ಟಿ ಖರೀದಿ ವೇಳೆ ಪ್ರೇಮಾಂಕುರ; ಪ್ರಿಯಕರನ ಹಣ ಖರ್ಚು ಮಾಡಿಸಿ ಮರಳಿ ಗಂಡನೂರಿಗೆ ಹೋದ ಮಹಿಳೆ

ಇದು ಒಂದು ರೊಟ್ಟಿಯಿಂದಾದ ಪ್ರೀತಿ ಪ್ರೇಮದ ರಿಯಲ್ ಸ್ಟೋರಿ. ರೊಟ್ಟಿ ಖರೀದಿಗೆ ಹೋಗಿದ್ದಾಗ ವಿವಾಹಿತ ಪುರುಷನಿಗೆ ವಿವಾಹಿತ ಮಹಿಳೆ ಮೇಲೆ ಲವ್ ಆಗಿದೆ. ಗಂಡನಿಂದ ದೂರ ಉಳಿದು ಪ್ರಿಯಕರನೊಂದಿಗೆ ಬಳ್ಳಾರಿಯಲ್ಲಿ ನೆಲೆಸಿದ್ದಳು. ಪ್ರಿಯಕರನೊಂದಿಗೆ ಇದ್ದುಕೊಂಡು ಭರ್ಜರಿ ಹಣ ಖರ್ಚು ಮಾಡಿ ಕೊನೆಗೆ ಮಹಿಳೆ ಮರಳಿ ಪತಿಯೊಂದಿಗೆ ಹೋಗಿದ್ದಾಳೆ. ಇತ್ತ, ಮಹಿಳೆಗಾಗಿ ಪ್ರಿಯಕರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.

ರೊಟ್ಟಿ ಖರೀದಿ ವೇಳೆ ಪ್ರೇಮಾಂಕುರ; ಪ್ರಿಯಕರನ ಹಣ ಖರ್ಚು ಮಾಡಿಸಿ ಮರಳಿ ಗಂಡನೂರಿಗೆ ಹೋದ ಮಹಿಳೆ
ರೊಟ್ಟಿ ಖರೀದಿ ವೇಳೆ ಪ್ರೇಮಾಂಕುರ; ಪ್ರಿಯಕರನ ಹಣ ಖರ್ಚು ಮಾಡಿಸಿ ಮರಳಿ ಗಂಡನೂರಿಗೆ ಹೋದ ಮಹಿಳೆ
Sahadev Mane
| Updated By: Rakesh Nayak Manchi|

Updated on: Jan 24, 2024 | 9:33 AM

Share

ಬಳ್ಳಾರಿ, ಜ.24: ಇದು ಒಂದು ರೊಟ್ಟಿಯಿಂದಾದ ಪ್ರೀತಿ ಪ್ರೇಮದ ರಿಯಲ್ ಸ್ಟೋರಿ. ರೊಟ್ಟಿ ಖರೀದಿಗೆ ಹೋಗಿದ್ದಾಗ ವಿವಾಹಿತ ಪುರುಷನಿಗೆ ವಿವಾಹಿತ ಮಹಿಳೆ ಮೇಲೆ ಲವ್ ಆಗಿದೆ. ಗಂಡನಿಂದ ದೂರ ಉಳಿದು ಪ್ರಿಯಕರನೊಂದಿಗೆ ಬಳ್ಳಾರಿಯಲ್ಲಿ (Ballari) ನೆಲೆಸಿದ್ದಳು. ಪ್ರಿಯಕರನೊಂದಿಗೆ ಇದ್ದುಕೊಂಡು ಭರ್ಜರಿ ಹಣ ಖರ್ಚು ಮಾಡಿ ಕೊನೆಗೆ ಮಹಿಳೆ ಮರಳಿ ಪತಿಯೊಂದಿಗೆ ಹೋಗಿದ್ದಾಳೆ ಮಾರಾಯ್ರೆ.

ಮಹಾರಾಷ್ಟ್ರದ ಸಾಂಗ್ಲಿಯ ಜತ್ತ ತಾಲೂಕಿನ ಮುಚ್ಚಂಡಿ ಗ್ರಾಮದ ಸಿದ್ದಗೊಂಡ ಸೌದತ್ತಿ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಈತನಿಗೆ ಮದುವೆಯಾಗಿದ್ದು, ಇಬ್ಬರು ಮಕ್ಕಳು ಕೂಡ ಇದ್ದಾರೆ. ಹೀಗಿದ್ದರೂ ರೊಟ್ಟಿ ತರಲೆಂದು ಹೋದ ಸೌದತ್ತಿಗೆ ರೊಟ್ಟಿ ಮಾಡುವ ಸುಜಾತಾಳ ಮೇಲೆ ಪ್ರೇಮಾಂಕುರವಾಗಿದೆ. ಈಕೆಗೂ ಮದುವೆಯಾಗಿ ಒಂದು ಮಗುವಿದೆ.

ಇದನ್ನೂ ಓದಿ: ಗಂಡನ ಶ್ವಾನಪ್ರೇಮ ಸಹಿಸದೆ ಪತ್ನಿಯೇ ಬಿಟ್ಟು ಹೋದರಂತೆ, ಆದರೆ ನಾಯಿಗಳ ಮೇಲಿನ ಆತನ ಪ್ರೀತಿ ಮತ್ತಷ್ಟು ದೃಢವಾಗಿದೆ

ರೊಟ್ಟಿ ತರಲು ಹೋಗುತ್ತಿದ್ದಾಗ ಸುಜಾತಾ ಮತ್ತು ಸೌದತ್ತಿ ಮೇಲೆ ಬೆಳೆದ ಸಲುಗೆ ಪ್ರೀತಿಗೆ ತಿರುಗಿದೆ. ಅದರಂತೆ ಸಜಾತ ತನ್ನ ಗಂಡನನ್ನು ಬಿಟ್ಟು ಸೌದತ್ತಿ ಜೊತೆ ಓಡಿ ಬಂದಿದ್ದಳು. ಹೀಗೆ ಓಡಿ ಬಂದ ವಿವಾಹಿತ ಜೋಡಿ ಹಕ್ಕಿ ಕಳೆದ ಆರು ತಿಂಗಳಿನಿಂದ ಬಳ್ಳಾರಿಯಲ್ಲಿ ನೆಲೆಸಿದ್ದರು. ಇತ್ತ, ಪತ್ನಿ ಕಾಣೆಯಾಗಿದ್ದಾಳೆ ಎಂದು ಪತಿ ಮಹೇಶ್ ಮಹಾರಾಷ್ಟ್ರ ಸಾಂಗ್ಲಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ.

ಅದರಂತೆ ಮಹಿಳೆಯನ್ನು ಪ್ರಿಯಕರನ ಜೊತೆ ಪತ್ತೆ ಹಚ್ಚಿದ ಸಾಂಗ್ಲಿ ಪೊಲೀಸರು ರಾಜಿ ಪಂಚಾಯ್ತಿ ನಡೆಸಿದ್ದಾರೆ. ಈ ವೇಳೆ ತಾನು ಸಿದ್ದಗೊಂಡ ಸೌದತ್ತಿ ಜೊತೆಗೆ ಹೋಗುತ್ತೇನೆ ಎಂದಿದ್ದಾಳೆ. ಅದರಂತೆ, ಸಾಂಗ್ಲಿ ಪೋಲಿಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆದು ಸುಜಾತಾಳನ್ನು ಸೌದತ್ತಿ ಬಳ್ಳಾರಿಗೆ ಕರೆದುಕೊಂಡು ಬಂದಿದ್ದಾನೆ.

ಹೀಗೆ ಸೌದತ್ತಿ ಜೊತೆಗಿದ್ದ ಸುಜಾತ ಅಲ್ಲಿಗೆ ಇಲ್ಲಿಗೆ ಎಂದು ಸುತ್ತಾಡಿ, ವಿಮಾನದಲ್ಲೂ ಪ್ರಯಾಣ ಮಾಡಿ ಭರ್ಜರಿ ಹಣ ಖರ್ಚು ಮಾಡಿಸಿದ್ದಾಳೆ. ಕೊನೆಗೆ ತನ್ನ ಗಂಡನಿಗೆ ದೂರವಾಣಿ ಕರೆ ಮಾಡಿ ಮರಳಿ ಗಂಡನ ಜೊತೆ ಹೋಗಿದ್ದಾಳೆ. ಇತ್ತ, ತನ್ನ ಪ್ರೇಯಸಿ ಬೇಕು ಅಂತಾ ಸಿದ್ದಗೊಂಡ ಸೌದತ್ತಿ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪ್ರೇಯಸಿ ಸುಜಾತ ಹುಡುಕಾಟಕ್ಕಾಗಿ‌ ಕಚೇರಿ ಕಚೇರಿ ಅಲೆಯುತ್ತಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್