AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಂ ತ್ರಿಕೋನ ಪ್ರೇಮ: ಪ್ರೇಯಸಿಗಾಗಿ ಮತ್ತೋರ್ವ ಯುವಕನನ್ನು 50 ಬಾರಿ ಇರಿದು ಕೊಲೆ ಮಾಡಿದ ವ್ಯಕ್ತಿ

ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ ಯುವತಿಯನ್ನು  ಇಬ್ಬರು ಪ್ರೀತಿಸುತ್ತಿದ್ದರು. ಮೃತರನ್ನು ಮಾಹಿರ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ. ಹಾಗೂ ಆರೋಪಿ ಅರ್ಮಾನ್ ಖಾನ್ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ಮಾಹಿರ್ ಕೊಲೆಗೆ ಕಾರಣವಾಯಿತು.

ಇನ್​ಸ್ಟಾಗ್ರಾಂ ತ್ರಿಕೋನ ಪ್ರೇಮ: ಪ್ರೇಯಸಿಗಾಗಿ ಮತ್ತೋರ್ವ ಯುವಕನನ್ನು 50 ಬಾರಿ ಇರಿದು ಕೊಲೆ ಮಾಡಿದ ವ್ಯಕ್ತಿ
ಪೊಲೀಸ್​Image Credit source: News 18
ನಯನಾ ರಾಜೀವ್
|

Updated on: Dec 31, 2023 | 10:32 AM

Share

ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ ಯುವತಿಯನ್ನು  ಇಬ್ಬರು ಪ್ರೀತಿಸುತ್ತಿದ್ದರು. ಮೃತರನ್ನು ಮಾಹಿರ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ. ಹಾಗೂ ಆರೋಪಿ ಅರ್ಮಾನ್ ಖಾನ್ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ಮಾಹಿರ್ ಕೊಲೆಗೆ ಕಾರಣವಾಯಿತು.

ದೆಹಲಿಯ ಪಹರ್‌ಗಂಜ್‌ನಲ್ಲಿರುವ ಫ್ಲೆಕ್ಸ್ ಪ್ರಿಂಟಿಂಗ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ 21 ವರ್ಷದ ಯುವತಿಯೊಂದಿಗೆ ಇನ್​ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ್ದರು. ಇಬ್ಬರ ನಡುವಿನ ಸ್ನೇಹವು ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಅರ್ಮಾನ್‌ನನ್ನು ಇಕ್ಕಟ್ಟಿಗೆ ಸಿಲುಕಿಸಿತು.

ವೀಡಿಯೊ ಕರೆಯಲ್ಲಿ ಇಬ್ಬರನ್ನು ಕಂಡು ಅರ್ಮಾನ್‌ನ ಅಸೂಯೆ ಉತ್ತುಂಗಕ್ಕೇರಿತು. ಕರೆಯಿಂದ ಕೋಪಗೊಂಡ ಆರೋಪಿ ಮಹಿಳೆಯ ಫೋನ್ ಕಿತ್ತುಕೊಂಡು, ಮಾಹಿರ್​ನನ್ನು ಭೇಟಿಯಾಗದಂತೆ ತಾಕೀತು ಹಾಕಿದ್ದ.

ಇನ್ನಿಬ್ಬರು ಆರೋಪಿಗಳಾದ ಫೈಸಲ್ (21) ಮತ್ತು ಸಮೀರ್ (19) ಜೊತೆ ಸೇರಿ ಮೂವರು ಮಾಹಿರ್ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ಶವವನ್ನು ರಸ್ತೆ ಬದಿ ಎಸೆದು ಹೋಗಿದ್ದರು.

ಮತ್ತಷ್ಟು ಓದಿ:ಶಿವಮೊಗ್ಗ: ಕೈದಿಗಳಿಗೆ ಗಾಂಜಾ, ಮೊಬೈಲ್ ನೀಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ

ನಂತರ ಯಾರೋ ನೋಡಿ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಹೊಟ್ಟೆಯ ಮೇಲೆ ಚಾಕುವಿನಿಂದ ಇರಿದ ಗಾಯಗಳಿದ್ದವು. ಸ್ಥಳದಲ್ಲಿ ರಕ್ತಸಿಕ್ತವಾದ ಚಾಕು ಕೂಡ ಪತ್ತೆಯಾಗಿದೆ.

ಖಾನ್ ಈಗ ನ್ಯಾಯಾಂಗ ಬಂಧನದಲ್ಲಿದ್ದು, ಮಹಿರ್ ಹತ್ಯೆಯಲ್ಲಿ ಪ್ರಮುಖ ಶಂಕಿತನೆಂದು ಪರಿಗಣಿಸಲಾಗಿದೆ. ಈತ ಮಾಹಿರ್‌ಗೆ ಕನಿಷ್ಠ 50 ಬಾರಿ ಇರಿದಿದ್ದಾನೆ ಎಂದು ಪೊಲೀಸರು ನಂಬಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ