AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಂ ತ್ರಿಕೋನ ಪ್ರೇಮ: ಪ್ರೇಯಸಿಗಾಗಿ ಮತ್ತೋರ್ವ ಯುವಕನನ್ನು 50 ಬಾರಿ ಇರಿದು ಕೊಲೆ ಮಾಡಿದ ವ್ಯಕ್ತಿ

ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ ಯುವತಿಯನ್ನು  ಇಬ್ಬರು ಪ್ರೀತಿಸುತ್ತಿದ್ದರು. ಮೃತರನ್ನು ಮಾಹಿರ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ. ಹಾಗೂ ಆರೋಪಿ ಅರ್ಮಾನ್ ಖಾನ್ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ಮಾಹಿರ್ ಕೊಲೆಗೆ ಕಾರಣವಾಯಿತು.

ಇನ್​ಸ್ಟಾಗ್ರಾಂ ತ್ರಿಕೋನ ಪ್ರೇಮ: ಪ್ರೇಯಸಿಗಾಗಿ ಮತ್ತೋರ್ವ ಯುವಕನನ್ನು 50 ಬಾರಿ ಇರಿದು ಕೊಲೆ ಮಾಡಿದ ವ್ಯಕ್ತಿ
ಪೊಲೀಸ್​Image Credit source: News 18
ನಯನಾ ರಾಜೀವ್
|

Updated on: Dec 31, 2023 | 10:32 AM

Share

ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ ಯುವತಿಯನ್ನು  ಇಬ್ಬರು ಪ್ರೀತಿಸುತ್ತಿದ್ದರು. ಮೃತರನ್ನು ಮಾಹಿರ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ. ಹಾಗೂ ಆರೋಪಿ ಅರ್ಮಾನ್ ಖಾನ್ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ಮಾಹಿರ್ ಕೊಲೆಗೆ ಕಾರಣವಾಯಿತು.

ದೆಹಲಿಯ ಪಹರ್‌ಗಂಜ್‌ನಲ್ಲಿರುವ ಫ್ಲೆಕ್ಸ್ ಪ್ರಿಂಟಿಂಗ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ 21 ವರ್ಷದ ಯುವತಿಯೊಂದಿಗೆ ಇನ್​ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ್ದರು. ಇಬ್ಬರ ನಡುವಿನ ಸ್ನೇಹವು ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಅರ್ಮಾನ್‌ನನ್ನು ಇಕ್ಕಟ್ಟಿಗೆ ಸಿಲುಕಿಸಿತು.

ವೀಡಿಯೊ ಕರೆಯಲ್ಲಿ ಇಬ್ಬರನ್ನು ಕಂಡು ಅರ್ಮಾನ್‌ನ ಅಸೂಯೆ ಉತ್ತುಂಗಕ್ಕೇರಿತು. ಕರೆಯಿಂದ ಕೋಪಗೊಂಡ ಆರೋಪಿ ಮಹಿಳೆಯ ಫೋನ್ ಕಿತ್ತುಕೊಂಡು, ಮಾಹಿರ್​ನನ್ನು ಭೇಟಿಯಾಗದಂತೆ ತಾಕೀತು ಹಾಕಿದ್ದ.

ಇನ್ನಿಬ್ಬರು ಆರೋಪಿಗಳಾದ ಫೈಸಲ್ (21) ಮತ್ತು ಸಮೀರ್ (19) ಜೊತೆ ಸೇರಿ ಮೂವರು ಮಾಹಿರ್ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ಶವವನ್ನು ರಸ್ತೆ ಬದಿ ಎಸೆದು ಹೋಗಿದ್ದರು.

ಮತ್ತಷ್ಟು ಓದಿ:ಶಿವಮೊಗ್ಗ: ಕೈದಿಗಳಿಗೆ ಗಾಂಜಾ, ಮೊಬೈಲ್ ನೀಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ

ನಂತರ ಯಾರೋ ನೋಡಿ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಹೊಟ್ಟೆಯ ಮೇಲೆ ಚಾಕುವಿನಿಂದ ಇರಿದ ಗಾಯಗಳಿದ್ದವು. ಸ್ಥಳದಲ್ಲಿ ರಕ್ತಸಿಕ್ತವಾದ ಚಾಕು ಕೂಡ ಪತ್ತೆಯಾಗಿದೆ.

ಖಾನ್ ಈಗ ನ್ಯಾಯಾಂಗ ಬಂಧನದಲ್ಲಿದ್ದು, ಮಹಿರ್ ಹತ್ಯೆಯಲ್ಲಿ ಪ್ರಮುಖ ಶಂಕಿತನೆಂದು ಪರಿಗಣಿಸಲಾಗಿದೆ. ಈತ ಮಾಹಿರ್‌ಗೆ ಕನಿಷ್ಠ 50 ಬಾರಿ ಇರಿದಿದ್ದಾನೆ ಎಂದು ಪೊಲೀಸರು ನಂಬಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ