AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಂ ತ್ರಿಕೋನ ಪ್ರೇಮ: ಪ್ರೇಯಸಿಗಾಗಿ ಮತ್ತೋರ್ವ ಯುವಕನನ್ನು 50 ಬಾರಿ ಇರಿದು ಕೊಲೆ ಮಾಡಿದ ವ್ಯಕ್ತಿ

ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ ಯುವತಿಯನ್ನು  ಇಬ್ಬರು ಪ್ರೀತಿಸುತ್ತಿದ್ದರು. ಮೃತರನ್ನು ಮಾಹಿರ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ. ಹಾಗೂ ಆರೋಪಿ ಅರ್ಮಾನ್ ಖಾನ್ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ಮಾಹಿರ್ ಕೊಲೆಗೆ ಕಾರಣವಾಯಿತು.

ಇನ್​ಸ್ಟಾಗ್ರಾಂ ತ್ರಿಕೋನ ಪ್ರೇಮ: ಪ್ರೇಯಸಿಗಾಗಿ ಮತ್ತೋರ್ವ ಯುವಕನನ್ನು 50 ಬಾರಿ ಇರಿದು ಕೊಲೆ ಮಾಡಿದ ವ್ಯಕ್ತಿ
ಪೊಲೀಸ್​Image Credit source: News 18
Follow us
ನಯನಾ ರಾಜೀವ್
|

Updated on: Dec 31, 2023 | 10:32 AM

ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರು ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ದೆಹಲಿಯ ಭಾಗೀರಥಿ ವಿಹಾರದಲ್ಲಿ ನಡೆದಿದೆ. ಇದಕ್ಕೆಲ್ಲಾ ತ್ರಿಕೋನ ಪ್ರೇಮವೇ ಕಾರಣ ಎನ್ನಲಾಗಿದೆ. ಒಂದೇ ಯುವತಿಯನ್ನು  ಇಬ್ಬರು ಪ್ರೀತಿಸುತ್ತಿದ್ದರು. ಮೃತರನ್ನು ಮಾಹಿರ್ ಅಲಿಯಾಸ್ ಇಮ್ರಾನ್ ಎಂದು ಗುರುತಿಸಲಾಗಿದೆ. ಹಾಗೂ ಆರೋಪಿ ಅರ್ಮಾನ್ ಖಾನ್ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದರು. ಇದೇ ಮಾಹಿರ್ ಕೊಲೆಗೆ ಕಾರಣವಾಯಿತು.

ದೆಹಲಿಯ ಪಹರ್‌ಗಂಜ್‌ನಲ್ಲಿರುವ ಫ್ಲೆಕ್ಸ್ ಪ್ರಿಂಟಿಂಗ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ 21 ವರ್ಷದ ಯುವತಿಯೊಂದಿಗೆ ಇನ್​ಸ್ಟಾಗ್ರಾಂನಲ್ಲಿ ಸ್ನೇಹ ಬೆಳೆಸಿದ್ದರು. ಇಬ್ಬರ ನಡುವಿನ ಸ್ನೇಹವು ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದ ಅರ್ಮಾನ್‌ನನ್ನು ಇಕ್ಕಟ್ಟಿಗೆ ಸಿಲುಕಿಸಿತು.

ವೀಡಿಯೊ ಕರೆಯಲ್ಲಿ ಇಬ್ಬರನ್ನು ಕಂಡು ಅರ್ಮಾನ್‌ನ ಅಸೂಯೆ ಉತ್ತುಂಗಕ್ಕೇರಿತು. ಕರೆಯಿಂದ ಕೋಪಗೊಂಡ ಆರೋಪಿ ಮಹಿಳೆಯ ಫೋನ್ ಕಿತ್ತುಕೊಂಡು, ಮಾಹಿರ್​ನನ್ನು ಭೇಟಿಯಾಗದಂತೆ ತಾಕೀತು ಹಾಕಿದ್ದ.

ಇನ್ನಿಬ್ಬರು ಆರೋಪಿಗಳಾದ ಫೈಸಲ್ (21) ಮತ್ತು ಸಮೀರ್ (19) ಜೊತೆ ಸೇರಿ ಮೂವರು ಮಾಹಿರ್ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ಶವವನ್ನು ರಸ್ತೆ ಬದಿ ಎಸೆದು ಹೋಗಿದ್ದರು.

ಮತ್ತಷ್ಟು ಓದಿ:ಶಿವಮೊಗ್ಗ: ಕೈದಿಗಳಿಗೆ ಗಾಂಜಾ, ಮೊಬೈಲ್ ನೀಡಲು ಯತ್ನಿಸುತ್ತಿದ್ದ ಇಬ್ಬರ ಬಂಧನ

ನಂತರ ಯಾರೋ ನೋಡಿ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಹೊಟ್ಟೆಯ ಮೇಲೆ ಚಾಕುವಿನಿಂದ ಇರಿದ ಗಾಯಗಳಿದ್ದವು. ಸ್ಥಳದಲ್ಲಿ ರಕ್ತಸಿಕ್ತವಾದ ಚಾಕು ಕೂಡ ಪತ್ತೆಯಾಗಿದೆ.

ಖಾನ್ ಈಗ ನ್ಯಾಯಾಂಗ ಬಂಧನದಲ್ಲಿದ್ದು, ಮಹಿರ್ ಹತ್ಯೆಯಲ್ಲಿ ಪ್ರಮುಖ ಶಂಕಿತನೆಂದು ಪರಿಗಣಿಸಲಾಗಿದೆ. ಈತ ಮಾಹಿರ್‌ಗೆ ಕನಿಷ್ಠ 50 ಬಾರಿ ಇರಿದಿದ್ದಾನೆ ಎಂದು ಪೊಲೀಸರು ನಂಬಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್