AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವರ್​ ಜತೆ ಲಾಡ್ಜ್​ಗೆ ತೆರಳಿದ್ದ ಮೇಕಪ್​ ಆರ್ಟಿಸ್ಟ್​ ದುರಂತ ಅಂತ್ಯ: ಬ್ಯೂಟಿಷಿಯನ್ ವರ್ಕರ್ಸ್ ಸಮಾವೇಶಕ್ಕೆ ಹೋದವಳು ಹೆಣವಾದಳು

ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾ ಸಮಾವೇಶಕ್ಕೆ ಬಂದಿದ್ದ ಮೇಕಪ್ ಆರ್ಟಿಸ್ಟ್ ದುರಂತ ಅಂತ್ಯಕಂಡಿದ್ದಾಳೆ.

ಲವರ್​ ಜತೆ ಲಾಡ್ಜ್​ಗೆ ತೆರಳಿದ್ದ ಮೇಕಪ್​ ಆರ್ಟಿಸ್ಟ್​ ದುರಂತ ಅಂತ್ಯ: ಬ್ಯೂಟಿಷಿಯನ್ ವರ್ಕರ್ಸ್ ಸಮಾವೇಶಕ್ಕೆ ಹೋದವಳು ಹೆಣವಾದಳು
ದೇವಿಕಾ, ಕೊಲೆಯಾದ ಮೇಕಪ್​ ಆರ್ಟಿಸ್ಟ್​
ರಮೇಶ್ ಬಿ. ಜವಳಗೇರಾ
|

Updated on: May 19, 2023 | 7:56 AM

Share

ಕೊಚ್ಚಿ: ಮೇಕಪ್​ ಆರ್ಟಿಸ್ಟ್​ ಒಬ್ಬಳು ಪ್ರಿಯಕರನಿಂದಲೇ ಬರ್ಬರ ಹತ್ಯೆಯಾಗಿರುವ ಘಟನೆ ಕೇರಳದ ಕಾಸರಗೋಡಿನ ಕನ್ಹಂಗಾಡ್​ನಲ್ಲಿರುವ ಲಾಡ್ಜ್​ ಒಂದರಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಉದ್ಮಾ ಪಂಚಾಯಿತಿಯ ಮುಕ್ಕುನೋಥ್​ ನಿವಾಸಿ ಪಿ.ಬಿ. ದೇವಿಕಾ (34) ಎಂದು ಗುರುತಿಸಲಾಗಿದೆ. ಇನ್ನು ಹತ್ಯೆ ಮಾಡಿದ ಬಳಿಕ ಪ್ರಿಯಕರ ಸತೀಶ್​ (36) ಲಾಡ್ಜ್​ ರೂಮ್​ ಅನ್ನು ಲಾಕ್​ ಮಾಡಿ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಲಾಡ್ಜ್​ ರೂಮ್​ ಅನ್ನು ತೆರೆದಾಗ ದೇವಿಕಾ ಕತ್ತು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದಳು ಎಂದು ಬಾಲಕೃಷ್ಣನ್​ ನಾಯರ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹೊಳೆಯಲ್ಲಿ ಮುಳುಗಿ ಬಿಜೆಪಿ ಮುಖಂಡ ದುರ್ಮರಣ, ಬಿಜೆಪಿ ಕಚೇರಿ ಮುಂದೆ ಕಾರ್ಯಕರ್ತರಿಂದ ಅಂತಿಮ ನಮನ

ಆರೋಪಿ ಸತೀಶ್ ಮುಲ್ಲಿಯಾರ್​ ಗ್ರಾಮ ಪಂಚಾಯಿತಿಯ​ ಬೊವಿಕನಮ್​ ಮೂಲದ ನಿವಾಸಿ. ಈತ ಕನ್ಹಂಗಾಡ್​ ಪಟ್ಟಣದಲ್ಲಿ ಖಾಸಗಿ ಸೆಕ್ಯುರಿಟಿ ಏಜೆನ್ಸಿಯನ್ನು ನಡೆಸುತ್ತಿದ್ದಾರೆ. ಈಗಾಗಲೇ ಈತನಿಗೆ ಮದುವೆಯಾಗಿದ್ದು, ಒಂದು ಮಗು ಕೂಡ ಇದೆ. ದೇವಿಕಾಗೂ ಮದುವೆ ಆಗಿತ್ತು. ಆಕೆಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿಗೆ ಡಿವೋರ್ಸ್​ ನೀಡಿ ತನ್ನೊಂದಿಗೆ ಇರುವಂತೆ ದೇವಿಕಾ ಒತ್ತಾಯ ಮಾಡುತ್ತಿದ್ದಳು. ಹೀಗಾಗಿ ಆಕೆಯನ್ನು ಕೊಲೆ ಮಾಡಿದೆ ಎಂದು ಸತೀಶ್​ ಪೊಲೀಸರ ಮುಂದೆ ಒಪ್ಪಿಕೊಮಡಿದ್ದಾನೆ ಎಂದು ತಿಳಿದುಬಂದಿದ್ದು, ಈ ಬಗ್ಗೆಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಸಮಾವೇಶಕ್ಕೆ ಬಂದಿದ್ದ ದೇವಿಕಾ

ಕಳೆದ ಎರಡು ತಿಂಗಳಿನಿಂದ ಸತೀಶ್​ ಲಾಡ್ಜ್​ನಲ್ಲಿ ವಾಸವಿದ್ದನು. ಕನ್ಹಂಗಾಡ್​ನಿಂದ 20 ಕಿಮೀ ದೂರದಲ್ಲಿರುವ ತನ್ನ ಊರಿನಿಂದ ದೇವಿಕಾ ಲಾಡ್ಜ್​ಗೆ ಬಂದಿದ್ದಳು. CITU ಗೆ ಸಂಯೋಜಿತವಾಗಿರುವ ಕೇರಳ ಸ್ಟೇಟ್ ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾ ಸಮಾವೇಶದಲ್ಲಿ ಭಾಗವಹಿಸಲು ಕನ್ಹಂಗಾಡ್​ಗೆ ಬಂದಿದ್ದಳು. ಸಮಾವೇಶ ಬಳಿಕ ಸತೀಶ್​ನನ್ನು ಭೇಟಿ ಮಾಡಿ, ಆತನೊಂದಿಗೆ ಲಾಡ್ಜ್​ಗೆ ತೆರಳಿದ್ದಳು. ಈ ವೇಳೆ ಆಕೆಯನ್ನು ಕೊಂದಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More