AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವರ್​ ಜತೆ ಲಾಡ್ಜ್​ಗೆ ತೆರಳಿದ್ದ ಮೇಕಪ್​ ಆರ್ಟಿಸ್ಟ್​ ದುರಂತ ಅಂತ್ಯ: ಬ್ಯೂಟಿಷಿಯನ್ ವರ್ಕರ್ಸ್ ಸಮಾವೇಶಕ್ಕೆ ಹೋದವಳು ಹೆಣವಾದಳು

ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾ ಸಮಾವೇಶಕ್ಕೆ ಬಂದಿದ್ದ ಮೇಕಪ್ ಆರ್ಟಿಸ್ಟ್ ದುರಂತ ಅಂತ್ಯಕಂಡಿದ್ದಾಳೆ.

ಲವರ್​ ಜತೆ ಲಾಡ್ಜ್​ಗೆ ತೆರಳಿದ್ದ ಮೇಕಪ್​ ಆರ್ಟಿಸ್ಟ್​ ದುರಂತ ಅಂತ್ಯ: ಬ್ಯೂಟಿಷಿಯನ್ ವರ್ಕರ್ಸ್ ಸಮಾವೇಶಕ್ಕೆ ಹೋದವಳು ಹೆಣವಾದಳು
ದೇವಿಕಾ, ಕೊಲೆಯಾದ ಮೇಕಪ್​ ಆರ್ಟಿಸ್ಟ್​
ರಮೇಶ್ ಬಿ. ಜವಳಗೇರಾ
|

Updated on: May 19, 2023 | 7:56 AM

Share

ಕೊಚ್ಚಿ: ಮೇಕಪ್​ ಆರ್ಟಿಸ್ಟ್​ ಒಬ್ಬಳು ಪ್ರಿಯಕರನಿಂದಲೇ ಬರ್ಬರ ಹತ್ಯೆಯಾಗಿರುವ ಘಟನೆ ಕೇರಳದ ಕಾಸರಗೋಡಿನ ಕನ್ಹಂಗಾಡ್​ನಲ್ಲಿರುವ ಲಾಡ್ಜ್​ ಒಂದರಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಉದ್ಮಾ ಪಂಚಾಯಿತಿಯ ಮುಕ್ಕುನೋಥ್​ ನಿವಾಸಿ ಪಿ.ಬಿ. ದೇವಿಕಾ (34) ಎಂದು ಗುರುತಿಸಲಾಗಿದೆ. ಇನ್ನು ಹತ್ಯೆ ಮಾಡಿದ ಬಳಿಕ ಪ್ರಿಯಕರ ಸತೀಶ್​ (36) ಲಾಡ್ಜ್​ ರೂಮ್​ ಅನ್ನು ಲಾಕ್​ ಮಾಡಿ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಲಾಡ್ಜ್​ ರೂಮ್​ ಅನ್ನು ತೆರೆದಾಗ ದೇವಿಕಾ ಕತ್ತು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದಳು ಎಂದು ಬಾಲಕೃಷ್ಣನ್​ ನಾಯರ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹೊಳೆಯಲ್ಲಿ ಮುಳುಗಿ ಬಿಜೆಪಿ ಮುಖಂಡ ದುರ್ಮರಣ, ಬಿಜೆಪಿ ಕಚೇರಿ ಮುಂದೆ ಕಾರ್ಯಕರ್ತರಿಂದ ಅಂತಿಮ ನಮನ

ಆರೋಪಿ ಸತೀಶ್ ಮುಲ್ಲಿಯಾರ್​ ಗ್ರಾಮ ಪಂಚಾಯಿತಿಯ​ ಬೊವಿಕನಮ್​ ಮೂಲದ ನಿವಾಸಿ. ಈತ ಕನ್ಹಂಗಾಡ್​ ಪಟ್ಟಣದಲ್ಲಿ ಖಾಸಗಿ ಸೆಕ್ಯುರಿಟಿ ಏಜೆನ್ಸಿಯನ್ನು ನಡೆಸುತ್ತಿದ್ದಾರೆ. ಈಗಾಗಲೇ ಈತನಿಗೆ ಮದುವೆಯಾಗಿದ್ದು, ಒಂದು ಮಗು ಕೂಡ ಇದೆ. ದೇವಿಕಾಗೂ ಮದುವೆ ಆಗಿತ್ತು. ಆಕೆಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿಗೆ ಡಿವೋರ್ಸ್​ ನೀಡಿ ತನ್ನೊಂದಿಗೆ ಇರುವಂತೆ ದೇವಿಕಾ ಒತ್ತಾಯ ಮಾಡುತ್ತಿದ್ದಳು. ಹೀಗಾಗಿ ಆಕೆಯನ್ನು ಕೊಲೆ ಮಾಡಿದೆ ಎಂದು ಸತೀಶ್​ ಪೊಲೀಸರ ಮುಂದೆ ಒಪ್ಪಿಕೊಮಡಿದ್ದಾನೆ ಎಂದು ತಿಳಿದುಬಂದಿದ್ದು, ಈ ಬಗ್ಗೆಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಸಮಾವೇಶಕ್ಕೆ ಬಂದಿದ್ದ ದೇವಿಕಾ

ಕಳೆದ ಎರಡು ತಿಂಗಳಿನಿಂದ ಸತೀಶ್​ ಲಾಡ್ಜ್​ನಲ್ಲಿ ವಾಸವಿದ್ದನು. ಕನ್ಹಂಗಾಡ್​ನಿಂದ 20 ಕಿಮೀ ದೂರದಲ್ಲಿರುವ ತನ್ನ ಊರಿನಿಂದ ದೇವಿಕಾ ಲಾಡ್ಜ್​ಗೆ ಬಂದಿದ್ದಳು. CITU ಗೆ ಸಂಯೋಜಿತವಾಗಿರುವ ಕೇರಳ ಸ್ಟೇಟ್ ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾ ಸಮಾವೇಶದಲ್ಲಿ ಭಾಗವಹಿಸಲು ಕನ್ಹಂಗಾಡ್​ಗೆ ಬಂದಿದ್ದಳು. ಸಮಾವೇಶ ಬಳಿಕ ಸತೀಶ್​ನನ್ನು ಭೇಟಿ ಮಾಡಿ, ಆತನೊಂದಿಗೆ ಲಾಡ್ಜ್​ಗೆ ತೆರಳಿದ್ದಳು. ಈ ವೇಳೆ ಆಕೆಯನ್ನು ಕೊಂದಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ