AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವರ್​ ಜತೆ ಲಾಡ್ಜ್​ಗೆ ತೆರಳಿದ್ದ ಮೇಕಪ್​ ಆರ್ಟಿಸ್ಟ್​ ದುರಂತ ಅಂತ್ಯ: ಬ್ಯೂಟಿಷಿಯನ್ ವರ್ಕರ್ಸ್ ಸಮಾವೇಶಕ್ಕೆ ಹೋದವಳು ಹೆಣವಾದಳು

ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾ ಸಮಾವೇಶಕ್ಕೆ ಬಂದಿದ್ದ ಮೇಕಪ್ ಆರ್ಟಿಸ್ಟ್ ದುರಂತ ಅಂತ್ಯಕಂಡಿದ್ದಾಳೆ.

ಲವರ್​ ಜತೆ ಲಾಡ್ಜ್​ಗೆ ತೆರಳಿದ್ದ ಮೇಕಪ್​ ಆರ್ಟಿಸ್ಟ್​ ದುರಂತ ಅಂತ್ಯ: ಬ್ಯೂಟಿಷಿಯನ್ ವರ್ಕರ್ಸ್ ಸಮಾವೇಶಕ್ಕೆ ಹೋದವಳು ಹೆಣವಾದಳು
ದೇವಿಕಾ, ಕೊಲೆಯಾದ ಮೇಕಪ್​ ಆರ್ಟಿಸ್ಟ್​
ರಮೇಶ್ ಬಿ. ಜವಳಗೇರಾ
|

Updated on: May 19, 2023 | 7:56 AM

Share

ಕೊಚ್ಚಿ: ಮೇಕಪ್​ ಆರ್ಟಿಸ್ಟ್​ ಒಬ್ಬಳು ಪ್ರಿಯಕರನಿಂದಲೇ ಬರ್ಬರ ಹತ್ಯೆಯಾಗಿರುವ ಘಟನೆ ಕೇರಳದ ಕಾಸರಗೋಡಿನ ಕನ್ಹಂಗಾಡ್​ನಲ್ಲಿರುವ ಲಾಡ್ಜ್​ ಒಂದರಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಉದ್ಮಾ ಪಂಚಾಯಿತಿಯ ಮುಕ್ಕುನೋಥ್​ ನಿವಾಸಿ ಪಿ.ಬಿ. ದೇವಿಕಾ (34) ಎಂದು ಗುರುತಿಸಲಾಗಿದೆ. ಇನ್ನು ಹತ್ಯೆ ಮಾಡಿದ ಬಳಿಕ ಪ್ರಿಯಕರ ಸತೀಶ್​ (36) ಲಾಡ್ಜ್​ ರೂಮ್​ ಅನ್ನು ಲಾಕ್​ ಮಾಡಿ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಲಾಡ್ಜ್​ ರೂಮ್​ ಅನ್ನು ತೆರೆದಾಗ ದೇವಿಕಾ ಕತ್ತು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದಳು ಎಂದು ಬಾಲಕೃಷ್ಣನ್​ ನಾಯರ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹೊಳೆಯಲ್ಲಿ ಮುಳುಗಿ ಬಿಜೆಪಿ ಮುಖಂಡ ದುರ್ಮರಣ, ಬಿಜೆಪಿ ಕಚೇರಿ ಮುಂದೆ ಕಾರ್ಯಕರ್ತರಿಂದ ಅಂತಿಮ ನಮನ

ಆರೋಪಿ ಸತೀಶ್ ಮುಲ್ಲಿಯಾರ್​ ಗ್ರಾಮ ಪಂಚಾಯಿತಿಯ​ ಬೊವಿಕನಮ್​ ಮೂಲದ ನಿವಾಸಿ. ಈತ ಕನ್ಹಂಗಾಡ್​ ಪಟ್ಟಣದಲ್ಲಿ ಖಾಸಗಿ ಸೆಕ್ಯುರಿಟಿ ಏಜೆನ್ಸಿಯನ್ನು ನಡೆಸುತ್ತಿದ್ದಾರೆ. ಈಗಾಗಲೇ ಈತನಿಗೆ ಮದುವೆಯಾಗಿದ್ದು, ಒಂದು ಮಗು ಕೂಡ ಇದೆ. ದೇವಿಕಾಗೂ ಮದುವೆ ಆಗಿತ್ತು. ಆಕೆಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿಗೆ ಡಿವೋರ್ಸ್​ ನೀಡಿ ತನ್ನೊಂದಿಗೆ ಇರುವಂತೆ ದೇವಿಕಾ ಒತ್ತಾಯ ಮಾಡುತ್ತಿದ್ದಳು. ಹೀಗಾಗಿ ಆಕೆಯನ್ನು ಕೊಲೆ ಮಾಡಿದೆ ಎಂದು ಸತೀಶ್​ ಪೊಲೀಸರ ಮುಂದೆ ಒಪ್ಪಿಕೊಮಡಿದ್ದಾನೆ ಎಂದು ತಿಳಿದುಬಂದಿದ್ದು, ಈ ಬಗ್ಗೆಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಸಮಾವೇಶಕ್ಕೆ ಬಂದಿದ್ದ ದೇವಿಕಾ

ಕಳೆದ ಎರಡು ತಿಂಗಳಿನಿಂದ ಸತೀಶ್​ ಲಾಡ್ಜ್​ನಲ್ಲಿ ವಾಸವಿದ್ದನು. ಕನ್ಹಂಗಾಡ್​ನಿಂದ 20 ಕಿಮೀ ದೂರದಲ್ಲಿರುವ ತನ್ನ ಊರಿನಿಂದ ದೇವಿಕಾ ಲಾಡ್ಜ್​ಗೆ ಬಂದಿದ್ದಳು. CITU ಗೆ ಸಂಯೋಜಿತವಾಗಿರುವ ಕೇರಳ ಸ್ಟೇಟ್ ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾ ಸಮಾವೇಶದಲ್ಲಿ ಭಾಗವಹಿಸಲು ಕನ್ಹಂಗಾಡ್​ಗೆ ಬಂದಿದ್ದಳು. ಸಮಾವೇಶ ಬಳಿಕ ಸತೀಶ್​ನನ್ನು ಭೇಟಿ ಮಾಡಿ, ಆತನೊಂದಿಗೆ ಲಾಡ್ಜ್​ಗೆ ತೆರಳಿದ್ದಳು. ಈ ವೇಳೆ ಆಕೆಯನ್ನು ಕೊಂದಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ