AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವರ್​ ಜತೆ ಲಾಡ್ಜ್​ಗೆ ತೆರಳಿದ್ದ ಮೇಕಪ್​ ಆರ್ಟಿಸ್ಟ್​ ದುರಂತ ಅಂತ್ಯ: ಬ್ಯೂಟಿಷಿಯನ್ ವರ್ಕರ್ಸ್ ಸಮಾವೇಶಕ್ಕೆ ಹೋದವಳು ಹೆಣವಾದಳು

ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾ ಸಮಾವೇಶಕ್ಕೆ ಬಂದಿದ್ದ ಮೇಕಪ್ ಆರ್ಟಿಸ್ಟ್ ದುರಂತ ಅಂತ್ಯಕಂಡಿದ್ದಾಳೆ.

ಲವರ್​ ಜತೆ ಲಾಡ್ಜ್​ಗೆ ತೆರಳಿದ್ದ ಮೇಕಪ್​ ಆರ್ಟಿಸ್ಟ್​ ದುರಂತ ಅಂತ್ಯ: ಬ್ಯೂಟಿಷಿಯನ್ ವರ್ಕರ್ಸ್ ಸಮಾವೇಶಕ್ಕೆ ಹೋದವಳು ಹೆಣವಾದಳು
ದೇವಿಕಾ, ಕೊಲೆಯಾದ ಮೇಕಪ್​ ಆರ್ಟಿಸ್ಟ್​
ರಮೇಶ್ ಬಿ. ಜವಳಗೇರಾ
|

Updated on: May 19, 2023 | 7:56 AM

Share

ಕೊಚ್ಚಿ: ಮೇಕಪ್​ ಆರ್ಟಿಸ್ಟ್​ ಒಬ್ಬಳು ಪ್ರಿಯಕರನಿಂದಲೇ ಬರ್ಬರ ಹತ್ಯೆಯಾಗಿರುವ ಘಟನೆ ಕೇರಳದ ಕಾಸರಗೋಡಿನ ಕನ್ಹಂಗಾಡ್​ನಲ್ಲಿರುವ ಲಾಡ್ಜ್​ ಒಂದರಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಉದ್ಮಾ ಪಂಚಾಯಿತಿಯ ಮುಕ್ಕುನೋಥ್​ ನಿವಾಸಿ ಪಿ.ಬಿ. ದೇವಿಕಾ (34) ಎಂದು ಗುರುತಿಸಲಾಗಿದೆ. ಇನ್ನು ಹತ್ಯೆ ಮಾಡಿದ ಬಳಿಕ ಪ್ರಿಯಕರ ಸತೀಶ್​ (36) ಲಾಡ್ಜ್​ ರೂಮ್​ ಅನ್ನು ಲಾಕ್​ ಮಾಡಿ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಪೊಲೀಸರು ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಲಾಡ್ಜ್​ ರೂಮ್​ ಅನ್ನು ತೆರೆದಾಗ ದೇವಿಕಾ ಕತ್ತು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದಳು ಎಂದು ಬಾಲಕೃಷ್ಣನ್​ ನಾಯರ್​ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹೊಳೆಯಲ್ಲಿ ಮುಳುಗಿ ಬಿಜೆಪಿ ಮುಖಂಡ ದುರ್ಮರಣ, ಬಿಜೆಪಿ ಕಚೇರಿ ಮುಂದೆ ಕಾರ್ಯಕರ್ತರಿಂದ ಅಂತಿಮ ನಮನ

ಆರೋಪಿ ಸತೀಶ್ ಮುಲ್ಲಿಯಾರ್​ ಗ್ರಾಮ ಪಂಚಾಯಿತಿಯ​ ಬೊವಿಕನಮ್​ ಮೂಲದ ನಿವಾಸಿ. ಈತ ಕನ್ಹಂಗಾಡ್​ ಪಟ್ಟಣದಲ್ಲಿ ಖಾಸಗಿ ಸೆಕ್ಯುರಿಟಿ ಏಜೆನ್ಸಿಯನ್ನು ನಡೆಸುತ್ತಿದ್ದಾರೆ. ಈಗಾಗಲೇ ಈತನಿಗೆ ಮದುವೆಯಾಗಿದ್ದು, ಒಂದು ಮಗು ಕೂಡ ಇದೆ. ದೇವಿಕಾಗೂ ಮದುವೆ ಆಗಿತ್ತು. ಆಕೆಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿಗೆ ಡಿವೋರ್ಸ್​ ನೀಡಿ ತನ್ನೊಂದಿಗೆ ಇರುವಂತೆ ದೇವಿಕಾ ಒತ್ತಾಯ ಮಾಡುತ್ತಿದ್ದಳು. ಹೀಗಾಗಿ ಆಕೆಯನ್ನು ಕೊಲೆ ಮಾಡಿದೆ ಎಂದು ಸತೀಶ್​ ಪೊಲೀಸರ ಮುಂದೆ ಒಪ್ಪಿಕೊಮಡಿದ್ದಾನೆ ಎಂದು ತಿಳಿದುಬಂದಿದ್ದು, ಈ ಬಗ್ಗೆಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಸಮಾವೇಶಕ್ಕೆ ಬಂದಿದ್ದ ದೇವಿಕಾ

ಕಳೆದ ಎರಡು ತಿಂಗಳಿನಿಂದ ಸತೀಶ್​ ಲಾಡ್ಜ್​ನಲ್ಲಿ ವಾಸವಿದ್ದನು. ಕನ್ಹಂಗಾಡ್​ನಿಂದ 20 ಕಿಮೀ ದೂರದಲ್ಲಿರುವ ತನ್ನ ಊರಿನಿಂದ ದೇವಿಕಾ ಲಾಡ್ಜ್​ಗೆ ಬಂದಿದ್ದಳು. CITU ಗೆ ಸಂಯೋಜಿತವಾಗಿರುವ ಕೇರಳ ಸ್ಟೇಟ್ ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾ ಸಮಾವೇಶದಲ್ಲಿ ಭಾಗವಹಿಸಲು ಕನ್ಹಂಗಾಡ್​ಗೆ ಬಂದಿದ್ದಳು. ಸಮಾವೇಶ ಬಳಿಕ ಸತೀಶ್​ನನ್ನು ಭೇಟಿ ಮಾಡಿ, ಆತನೊಂದಿಗೆ ಲಾಡ್ಜ್​ಗೆ ತೆರಳಿದ್ದಳು. ಈ ವೇಳೆ ಆಕೆಯನ್ನು ಕೊಂದಿದ್ದಾನೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ