AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್​ಗಾಗಿ.. ಯುವತಿಯರ ಬೆತ್ತಲೆ ವಿಡಿಯೋ ಮಾಡ್ತಿದ್ದ ನರ್ಸ್ ಕೊನೆಗೂ ಅಂದರ್​

ಬಾಯ್​ಫ್ರೆಂಡ್​ಗಾಗಿ ಯುವತಿಯರ ಬೆತ್ತಲೆ ವಿಡಿಯೋ ಮಾಡ್ತಿದ್ದ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ವೈಟ್​ಫೀಲ್ಡ್​ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರೇಮಿಗಳನ್ನು ಆಶ್ಚಿನಿ ಹಾಗೂ ಪ್ರಭು ಎಂದು ಗುರುತಿಸಲಾಗಿದೆ.

ಬಾಯ್​ಫ್ರೆಂಡ್​ಗಾಗಿ.. ಯುವತಿಯರ ಬೆತ್ತಲೆ ವಿಡಿಯೋ ಮಾಡ್ತಿದ್ದ ನರ್ಸ್ ಕೊನೆಗೂ ಅಂದರ್​
ಬಂಧಿತ ಆರೋಪಿ ಪ್ರಭು
guruganesh bhat
| Edited By: |

Updated on: Dec 15, 2020 | 5:39 PM

Share

ಬೆಂಗಳೂರು: ಬಾಯ್​ಫ್ರೆಂಡ್​ಗಾಗಿ ಯುವತಿಯರ ಬೆತ್ತಲೆ ವಿಡಿಯೋ ಮಾಡ್ತಿದ್ದ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ವೈಟ್​ಫೀಲ್ಡ್​ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರೇಮಿಗಳನ್ನು ಆಶ್ಚಿನಿ ಹಾಗೂ ಪ್ರಭು ಎಂದು ಗುರುತಿಸಲಾಗಿದೆ. ನಗರದ ವೈಟ್​ಫೀಲ್ಡ್​ನಲ್ಲಿರುವ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಅಶ್ವಿನಿ ತನ್ನ ಪ್ರಿಯಕರ ಪ್ರಭುವಿನೊಂದಿಗೆ ಜೊತೆಗೂಡಿ ಈ ಕುಕೃತ್ಯದಲ್ಲಿ ಭಾಗಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯ ಲೆಡೀಸ್​ ಹಾಸ್ಟಲ್​ನಲ್ಲಿ ತಂಗಿದ್ದ ನರ್ಸ್​ಗಳು ಸ್ನಾನದ ಕೋಣೆಗೆ ತೆರಳುತ್ತಿದ್ದ ವೇಳೆ ಅಶ್ವಿನಿ ಅಲ್ಲಿ ಮೊಬೈಲ್ ಇಟ್ಟು ಅವರ ಬೆತ್ತಲೆ ವಿಡಿಯೋಗಳನ್ನ ರೆಕಾರ್ಡ್​ ಮಾಡಿಕೊಳ್ಳುತ್ತಿದ್ದಳು ಎಂದು ಹೇಳಲಾಗಿದೆ. ಬಳಿಕ ಅದನ್ನು ಚೆನ್ನೈನಲ್ಲಿದ್ದ ತನ್ನ ಬಾಯ್​ಫ್ರೆಂಡ್​ ಪ್ರಭುಗೆ ರವಾನಿಸುತ್ತಿದ್ದಳು ಎಂದು ತಿಳಿದುಬಂದಿದೆ.

ಅಂದ ಹಾಗೆ, ಅಶ್ವಿನಿ ಹಾಗೂ ಪ್ರಭು ಕಳೆದ ಎರಡು ವರ್ಷಗಳ ಹಿಂದೆ ಮಿಸ್ಡ್ ಕಾಲ್ ಮೂಲಕ ಪರಿಚಯವಾಗಿದ್ದರಂತೆ. ಚೆನ್ನೈನ ಐಷಾರಾಮಿ ಹೋಟೆಲ್​ನಲ್ಲಿ ಚೀಫ್ ಶೆಫ್ ಆಗಿ ಕೆಲಸ‌ ಮಾಡ್ತಿದ್ದ ಪ್ರಭು ಮೊದಲು ಅಶ್ವಿನಿಗೆ ತಾನು ಸ್ನಾನ ಮಾಡುತ್ತಿರುವ ವಿಡಿಯೋವನ್ನು ರೆಕಾರ್ಡ್ ಮಾಡಿ ಕಳಿಸು ಎಂದು ಹೇಳಿ ತರಿಸಿಕೊಂಡಿದ್ದನಂತೆ. ಬಳಿಕ ನಿನ್ನ ಸಹೋದ್ಯೋಗಿ ನರ್ಸ್​ಗಳ ಬೆತ್ತಲೆ ವಿಡಿಯೋ ಸಹ ಕಳಿಸು ಎಂದು ಡಿಮ್ಯಾಂಡ್ ಮಾಡಿದ್ದನಂತೆ. ಕರುಡು ಪ್ರೀತಿಯೋ ಏನೋ ಗೊತ್ತಿಲ್ಲ. ಆದರೆ, ಅಶ್ವಿನಿ ತನ್ನ ಪ್ರಿಯಕರಿನಿಗೋಸ್ಕರ ಈ ಕೆಟ್ಟ ಕೆಲಸಕ್ಕೂ ಇಳಿದಿದ್ದಳು ಎಂಬುದು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾಳಂತೆ. ಸದ್ಯ, ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಅಶ್ವಿನಿ ಹಾಗೂ ಚೆನ್ನೈನಿಂದ ಆಕೆಯ ಕಾಮುಕ ಪ್ರೇಮಿ ಪ್ರಭುವನ್ನು ಪೊಲೀಸರು ಬಂಧಿಸಿದ್ದಾರೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ