AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ, ಇಬ್ಬರು ಶಿಕ್ಷಕರು ಅಮಾನತು

ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಆರೋಪದ ಮೇಲೆ ಬೋರನಕುಂಟೆ ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕನನ್ನು ಮಧುಗಿರಿ ಬಿಇಒ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ತುಮಕೂರು: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ, ಇಬ್ಬರು ಶಿಕ್ಷಕರು ಅಮಾನತು
ಶಿಕ್ಷಕ ಮಂಜುನಾಥ
TV9 Web
| Edited By: |

Updated on:Mar 28, 2023 | 8:07 AM

Share

ಮುಖ್ಯಾಂಶಗಳು

  • 4, 5ನೇ ತರಗತಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ
  • ಬೋರನಕುಂಟೆ ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಮುಖ್ಯ ಶಿಕ್ಷಕ ಅಮಾನತು
  • ಶಿಕ್ಷಕರನ್ನು ಅಮಾನತು ಮಾಡಿ ಮಧುಗಿರಿ ಬಿಇಒ ತಿಮ್ಮರಾಜು ಆದೇಶ

ತುಮಕೂರು: ಶಾಲಾ ವಿದ್ಯಾರ್ಥಿನಿಯರಿಗೆ (Students) ಲೈಂಗಿಕ ಕಿರುಕುಳ ನೀಡುತ್ತಿದ್ದ(sexually harassment)  ಆರೋಪದ ಮೇಲೆ ಬೋರನಕುಂಟೆ ಸರ್ಕಾರಿ ಶಾಲೆ ಶಿಕ್ಷಕ (Teacher) ಮಂಜುನಾಥನನ್ನು ಅಮಾನತು ಮಾಡಲಾಗಿದೆ. ಇನ್ನು ಕರ್ತವ್ಯಲೋಪ ಆರೋಪದ ಮೇಲೆ ಮುಖ್ಯ ಶಿಕ್ಷಕ ನಟರಾಜ್ ಸಹ ಸಸ್ಪೆಂಡ್ ಮಾಡಿ ಮಧುಗಿರಿ ಬಿಇಒ ತಿಮ್ಮರಾಜು ಆದೇಶ ಹೊರಡಿಸಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊದ್ದೇರಿ ಹೋಬಳಿ ಬೋರಗುಂಟೆ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಮಂಜುನಾಥ ನಿತ್ಯ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು. ಇದರಿಂದ ರೊಚ್ಚಿಗೆದ್ದಿದ್ದ ಗ್ರಾಮಸ್ಥರು ಶಾಲೆಗೆ ನುಗ್ಗಿ ಮಂಜುನಾಥನನ್ನು ಗ್ರಾಮಸ್ಥರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು.

ಇದನ್ನೂ ಓದಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಕಾಮುಕ ಶಿಕ್ಷಕನಿಗೆ ಸ್ಥಳೀಯರಿಂದ ಧರ್ಮದೇಟು

ಮಂಜುನಾಥನ ಕಾಮಚೇಷ್ಟೆ‌ ವಿಷಯ ತಿಳಿದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮರಾಜು ಹಾಗೂ ಬುಡವನಹಳ್ಳಿ ಪೊಲೀಸ್​ ಇನ್ಸ್​ಪೆಕ್ಟರ್​ ಹನುಮಂತರಾಯಪ್ಪ, ಸಿಡಿಪಿಒ ಅನಿತಾ ಅವರು ವಿದ್ಯಾರ್ಥಿನಿಯರ ವಿಚಾರಣೆ ನಡೆಸಿದ್ದರು. ಇದೀಗ ಬಿಇಒ, ಶಿಕ್ಷಕ ಮಂಜುನಾಥನನ್ನು ಕೆಲಸದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದರ ಜೊತೆಗೆ ಕರ್ತವ್ಯಲೋಪ ಮೇಲೆ ಮುಖ್ಯ ಶಿಕ್ಷಕ ನಟರಾಜ್ ಅವರನ್ನು ಸಹ ಸಸ್ಪೆಂಡ್ ಮಾಡಿದ್ದಾರೆ. ಸದ್ಯ ಶಿಕ್ಷಕ ಮಂಜುನಾಥ ಬಡವನಹಳ್ಳಿ ಪೊಲೀಸರ ವಶದಲ್ಲಿದ್ದಾರೆ.

ಇನ್ನಷ್ಟು ತುಮಕೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:04 am, Tue, 28 March 23

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ