AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದೋರ್​ನಲ್ಲಿ ಸಾಕು ನಾಯಿ ವಿಚಾರವಾಗಿ ಜಗಳ, ಕೋಪದಲ್ಲಿ ಗುಂಡಿಕ್ಕಿ ಇಬ್ಬರ ಹತ್ಯೆ, 6 ಮಂದಿಗೆ ಗಾಯ

ಸಾಕು ನಾಯಿ ವಿಚಾರವಾಗಿ ಆರಂಭವಾದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಇಂದೋರ್​ನಲ್ಲಿ ಬ್ಯಾಂಕ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ರಾಜಪಾಲ್ ಸಿಂಗ್ ರಾಜಾವತ್ ನಿನ್ನೆ ರಾತ್ರಿ ತನ್ನ ಬಾಲ್ಕನಿಯಿಂದ ಅಕ್ಕ ಪಕ್ಕದ ಮನೆಯವರ ಮೇಲೆ ಗುಂಡು ಹಾರಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ.

ಇಂದೋರ್​ನಲ್ಲಿ ಸಾಕು ನಾಯಿ ವಿಚಾರವಾಗಿ ಜಗಳ, ಕೋಪದಲ್ಲಿ ಗುಂಡಿಕ್ಕಿ ಇಬ್ಬರ ಹತ್ಯೆ, 6 ಮಂದಿಗೆ ಗಾಯ
ಗುಂಡಿನ ದಾಳಿImage Credit source: Free Press Journal
ನಯನಾ ರಾಜೀವ್
|

Updated on: Aug 18, 2023 | 12:33 PM

Share

ಸಾಕು ನಾಯಿ ವಿಚಾರವಾಗಿ ಆರಂಭವಾದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಇಂದೋರ್​ನಲ್ಲಿ ಬ್ಯಾಂಕ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ರಾಜಪಾಲ್ ಸಿಂಗ್ ರಾಜಾವತ್ ನಿನ್ನೆ ರಾತ್ರಿ ತನ್ನ ಬಾಲ್ಕನಿಯಿಂದ ಅಕ್ಕ ಪಕ್ಕದ ಮನೆಯವರ ಮೇಲೆ ಗುಂಡು ಹಾರಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ರಾಜಾವತ್ ಮತ್ತು ಅವರ ಪಕ್ಕದ ಮನೆಯವರಾದ ವಿಮಲ್ ಅಚಲ (35) ಅವರು ರಾತ್ರಿ 11 ಗಂಟೆಗೆ ಕೃಷ್ಣಾ ಬಾಗ್ ಕಾಲೋನಿಯ ಕಿರಿದಾದ ಲೇನ್‌ನಲ್ಲಿ ತಮ್ಮ ನಾಯಿಗಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಎರಡೂ ನಾಯಿಗಳು ಎದುರುಬದರಾಗಿದ್ದವು. ನಂತರ ಗುರಾಯಿಸಿ ಕಿತ್ತಾಡಿಕೊಳ್ಳಲು ಶುರು ಮಾಡಿದ್ದವು.

ನಂತರ ಈ ಇಬ್ಬರ ನಡುವೆಯೂ ವಾಗ್ವಾದ ಶುರುವಾಗಿತ್ತು, ನಂತರ ರಾಜವತ್ ತನ್ನ ಮೊದಲ ಮಹಡಿಯ ಮನೆಗೆ ಓಡಿ 12-ಬೋರ್ ರೈಫಲ್ ಬಳಸಿ ಅಚಲ ಮೇಲೆ ಗುಂಡು ಹಾರಿಸಿದ್ದಾನೆ. ರಾಜಾವತ್ ಜನರ ಮೇಲೆ ಗುಂಡು ಹಾರಿಸುವ ಮೊದಲು ಗಾಳಿಯಲ್ಲಿ ಎರಡು ಮೂರು ಸುತ್ತು ಗುಂಡು ಹಾರಿಸಿದ್ದ. ಹಾಗೆಯೇ ಜನರೆಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ.

ಮತ್ತಷ್ಟು ಓದಿ: ಹೆಂಡತಿಯ ಸೀರೆ ಕದ್ದ ಎಂದು ಪಕ್ಕದ ಮನೆಯವನನ್ನು ಗುಂಡಿಕ್ಕಿ ಹತ್ಯೆ ಮಾಡಿದ ವ್ಯಕ್ತಿ

ನಗರದ ನಿಪಾನಿಯಾ ಪ್ರದೇಶದಲ್ಲಿ ಹೇರ್ ಸಲೂನ್ ನಡೆಸುತ್ತಿದ್ದ ಅಚಲ, ಜತೆಗೆ ಮತ್ತೋರ್ವ ರಾಹುಲ್ ವರ್ಮಾ ಎಂಬುವವರು ಕೂಡ ಗುಂಡೇಟಿಗೆ ಬಲಿಯಾಗಿದ್ದಾರೆ. ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹೊಡೆದಾಟ ನಡೆದಾಗ ಬೀದಿಯಲ್ಲಿದ್ದ ಇತರ ಆರು ಮಂದಿಗೂ ಗುಂಡು ತಗುಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಾವತ್ ಅವರ ಪುತ್ರ ಸುಧೀರ್ ಮತ್ತು ಇನ್ನೊಬ್ಬ ಸಂಬಂಧಿ ಶುಭಂ ಅವರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು. ಗ್ವಾಲಿಯರ್ ಮೂಲದ ರಾಜಾವತ್ ಅವರು ಪರವಾನಗಿ ಪಡೆದ 12-ಬೋರ್ ರೈಫಲ್ ಅನ್ನು ಹೊಂದಿದ್ದರಿಂದ ಇಂದೋರ್‌ನಲ್ಲಿ ಖಾಸಗಿ ಸಂಸ್ಥೆಯೊಂದು ಭದ್ರತಾ ಸಿಬ್ಬಂದಿಯಾಗಿ ನೇಮಕಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ