AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh Crime: ಕಲ್ಲಿನಿಂದ ತಲೆ ಒಡೆದು, ಚಾಕುವಿನಿಂದ ಕತ್ತು ಸೀಳಿ ಮೂವರು ಅಪ್ರಾಪ್ತ ಬಾಲಕರಿಂದ ಬರ್ಬರ ಹತ್ಯೆ

ಮೂವರು ಅಪ್ರಾಪ್ತ ಬಾಲಕರು ಸೇರಿ ಬಾಲಕನೋರ್ವನ ತಲೆ ಒಡೆದು, ಕತ್ತು ಸೀಳಿ ಹತ್ಯೆ ಮಾಡಿ, ಪ್ಲಾಸ್ಟಿಕ್​ ಬ್ಯಾಗ್​ನಲ್ಲಿ ತುಂಬಿ ಎಸೆದಿರುವ ಘಟನೆ ಮಧ್ಯಪ್ರದೇಶದ ಸಿಯೋನಿಯಲ್ಲಿ ನಡೆದಿದೆ.

Madhya Pradesh Crime: ಕಲ್ಲಿನಿಂದ ತಲೆ ಒಡೆದು, ಚಾಕುವಿನಿಂದ ಕತ್ತು ಸೀಳಿ ಮೂವರು ಅಪ್ರಾಪ್ತ ಬಾಲಕರಿಂದ ಬರ್ಬರ ಹತ್ಯೆ
Crime SceneImage Credit source: Times Of India
ನಯನಾ ರಾಜೀವ್
|

Updated on: May 16, 2023 | 8:28 AM

Share

ಮೂವರು ಅಪ್ರಾಪ್ತ ಬಾಲಕರು ಸೇರಿ ಬಾಲಕನೋರ್ವನ ತಲೆ ಒಡೆದು, ಕತ್ತು ಸೀಳಿ ಹತ್ಯೆ ಮಾಡಿ, ಪ್ಲಾಸ್ಟಿಕ್​ ಬ್ಯಾಗ್​ನಲ್ಲಿ ತುಂಬಿ ಎಸೆದಿರುವ ಘಟನೆ ಮಧ್ಯಪ್ರದೇಶದ ಸಿಯೋನಿಯಲ್ಲಿ ನಡೆದಿದೆ. 11 ವರ್ಷದ ಅಪ್ರಾಪ್ತ 12 ವರ್ಷದ ತನ್ನ ಸ್ನೇಹಿತನನ್ನೇ ಸೈಕಲ್​ಚೈನ್​ನಿಂದ ಕತ್ತು ಹಿಸುಕಿ, ಕೊಯ್ದು ಕೊಲೆ ಮಾಡಿ ಬಳಿಕ ಕಲ್ಲಿನಿಂದ ತಲೆಯನ್ನು ಒಡೆದಿದ್ದಾರೆ, ಮನೆಯ ಬಳಿ ಕಸದ ರಾಶಿಯಲ್ಲಿ ಇದನ್ನು ಬಿಸಾಡಿದ್ದರು. ಮಹಿಳೆಯೊಬ್ಬರು ರಕ್ತಸಿಕ್ತ ಚೀಲವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಅಪರಾಧ ಬೆಳಕಿಗೆ ಬಂದಿದೆ.

ಹಳೆ ಜಗಳವೇ ಕೊಲೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಮೂವರು ಬಾಲಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು 14 ದಿನಗಳ ಕಾಲ ಸುಧಾರಣಾ ಗೃಹಕ್ಕೆ ಕಳುಹಿಸಲಾಗಿದೆ. ಇಬ್ಬರು ಸಹೋದರರು ಸೇರಿದಂತೆ ಕ್ರಮವಾಗಿ 16, 14 ಮತ್ತು 11 ವರ್ಷ ವಯಸ್ಸಿನ ಮೂವರು 12 ವರ್ಷದ ಬಾಲಕನನ್ನು ಸಿಯೋನಿ ಜಿಲ್ಲಾ ಕೇಂದ್ರದಿಂದ ಸುಮಾರು 28 ಕಿಮೀ ದೂರದಲ್ಲಿರುವ ಮಗರ್‌ಕಥಾ ಗ್ರಾಮದ ನಿರ್ಜನ ಸ್ಥಳಕ್ಕೆ ಭಾನುವಾರ ಕರೆದಿದ್ದಾರೆ ಎಂದು ಬರ್ಘಾಟ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರಸನ್ನ ಶರ್ಮಾ ತಿಳಿಸಿದ್ದಾರೆ.

ಮತ್ತಷ್ಟು ಓದಿ: ವೋಟ್ ಹಾಕಿಲ್ಲವೆಂದು ಅಣ್ಣ ತಮ್ಮಂದಿರ ನಡುವೆ ಕಿರಿಕ್; ದೊಡ್ಡಪ್ಪನನ್ನೇ ಕೊಲೆ ಮಾಡಿದ ಮಗ

ಮೂವರು ಬಾಲಕರು ಈ ಹಿಂದೆ ಕೊಲೆ ಮಾಡಿ ಅನುಭವ ಇರುವವರ ರೀತಿ ಹತ್ಯೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಮೊದಲು ಹತ್ಯೆ ಮಾಡಲು ಸಂಚು ರೂಪಿಸಿದ್ದರು, ಬಳಿಕ ಬಾಲಕನನ್ನು ಸ್ಥಳಕ್ಕೆ ಕರೆದೊಯ್ದಿದ್ದರು, ಅವನನ್ನು ಹಿಡಿದು ಸೈಕಲ್ ಚೈನ್‌ನಿಂದ ಕತ್ತು ಹಿಸುಕಿ ಕೊಂದರು. ಹುಡುಗ ನೋವಿನಿಂದ ನರಳುತ್ತಿರುವಾಗ ಅವರು ದೊಡ್ಡ ಕಲ್ಲಿನಿಂದ ಅವನ ತಲೆಯನ್ನು ಒಡೆದು, ಕತ್ತು ಸೀಳಿದ್ದರು ಎಂದು ಶರ್ಮಾ ಹೇಳಿದರು.

12 ವರ್ಷದ ಬಾಲಕನ ಶವವನ್ನು ಪಾಲಿಥಿನ್ ಚೀಲದಲ್ಲಿ ತುಂಬಿ ಅವರ ಮನೆ ಬಳಿಯ ಬೆಣಚುಕಲ್ಲುಗಳ ರಾಶಿಯ ಮೇಲೆ ಎಸೆದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತರೆ ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ