AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh Crime: ಕಲ್ಲಿನಿಂದ ತಲೆ ಒಡೆದು, ಚಾಕುವಿನಿಂದ ಕತ್ತು ಸೀಳಿ ಮೂವರು ಅಪ್ರಾಪ್ತ ಬಾಲಕರಿಂದ ಬರ್ಬರ ಹತ್ಯೆ

ಮೂವರು ಅಪ್ರಾಪ್ತ ಬಾಲಕರು ಸೇರಿ ಬಾಲಕನೋರ್ವನ ತಲೆ ಒಡೆದು, ಕತ್ತು ಸೀಳಿ ಹತ್ಯೆ ಮಾಡಿ, ಪ್ಲಾಸ್ಟಿಕ್​ ಬ್ಯಾಗ್​ನಲ್ಲಿ ತುಂಬಿ ಎಸೆದಿರುವ ಘಟನೆ ಮಧ್ಯಪ್ರದೇಶದ ಸಿಯೋನಿಯಲ್ಲಿ ನಡೆದಿದೆ.

Madhya Pradesh Crime: ಕಲ್ಲಿನಿಂದ ತಲೆ ಒಡೆದು, ಚಾಕುವಿನಿಂದ ಕತ್ತು ಸೀಳಿ ಮೂವರು ಅಪ್ರಾಪ್ತ ಬಾಲಕರಿಂದ ಬರ್ಬರ ಹತ್ಯೆ
Crime SceneImage Credit source: Times Of India
ನಯನಾ ರಾಜೀವ್
|

Updated on: May 16, 2023 | 8:28 AM

Share

ಮೂವರು ಅಪ್ರಾಪ್ತ ಬಾಲಕರು ಸೇರಿ ಬಾಲಕನೋರ್ವನ ತಲೆ ಒಡೆದು, ಕತ್ತು ಸೀಳಿ ಹತ್ಯೆ ಮಾಡಿ, ಪ್ಲಾಸ್ಟಿಕ್​ ಬ್ಯಾಗ್​ನಲ್ಲಿ ತುಂಬಿ ಎಸೆದಿರುವ ಘಟನೆ ಮಧ್ಯಪ್ರದೇಶದ ಸಿಯೋನಿಯಲ್ಲಿ ನಡೆದಿದೆ. 11 ವರ್ಷದ ಅಪ್ರಾಪ್ತ 12 ವರ್ಷದ ತನ್ನ ಸ್ನೇಹಿತನನ್ನೇ ಸೈಕಲ್​ಚೈನ್​ನಿಂದ ಕತ್ತು ಹಿಸುಕಿ, ಕೊಯ್ದು ಕೊಲೆ ಮಾಡಿ ಬಳಿಕ ಕಲ್ಲಿನಿಂದ ತಲೆಯನ್ನು ಒಡೆದಿದ್ದಾರೆ, ಮನೆಯ ಬಳಿ ಕಸದ ರಾಶಿಯಲ್ಲಿ ಇದನ್ನು ಬಿಸಾಡಿದ್ದರು. ಮಹಿಳೆಯೊಬ್ಬರು ರಕ್ತಸಿಕ್ತ ಚೀಲವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಅಪರಾಧ ಬೆಳಕಿಗೆ ಬಂದಿದೆ.

ಹಳೆ ಜಗಳವೇ ಕೊಲೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಮೂವರು ಬಾಲಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು 14 ದಿನಗಳ ಕಾಲ ಸುಧಾರಣಾ ಗೃಹಕ್ಕೆ ಕಳುಹಿಸಲಾಗಿದೆ. ಇಬ್ಬರು ಸಹೋದರರು ಸೇರಿದಂತೆ ಕ್ರಮವಾಗಿ 16, 14 ಮತ್ತು 11 ವರ್ಷ ವಯಸ್ಸಿನ ಮೂವರು 12 ವರ್ಷದ ಬಾಲಕನನ್ನು ಸಿಯೋನಿ ಜಿಲ್ಲಾ ಕೇಂದ್ರದಿಂದ ಸುಮಾರು 28 ಕಿಮೀ ದೂರದಲ್ಲಿರುವ ಮಗರ್‌ಕಥಾ ಗ್ರಾಮದ ನಿರ್ಜನ ಸ್ಥಳಕ್ಕೆ ಭಾನುವಾರ ಕರೆದಿದ್ದಾರೆ ಎಂದು ಬರ್ಘಾಟ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರಸನ್ನ ಶರ್ಮಾ ತಿಳಿಸಿದ್ದಾರೆ.

ಮತ್ತಷ್ಟು ಓದಿ: ವೋಟ್ ಹಾಕಿಲ್ಲವೆಂದು ಅಣ್ಣ ತಮ್ಮಂದಿರ ನಡುವೆ ಕಿರಿಕ್; ದೊಡ್ಡಪ್ಪನನ್ನೇ ಕೊಲೆ ಮಾಡಿದ ಮಗ

ಮೂವರು ಬಾಲಕರು ಈ ಹಿಂದೆ ಕೊಲೆ ಮಾಡಿ ಅನುಭವ ಇರುವವರ ರೀತಿ ಹತ್ಯೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಮೊದಲು ಹತ್ಯೆ ಮಾಡಲು ಸಂಚು ರೂಪಿಸಿದ್ದರು, ಬಳಿಕ ಬಾಲಕನನ್ನು ಸ್ಥಳಕ್ಕೆ ಕರೆದೊಯ್ದಿದ್ದರು, ಅವನನ್ನು ಹಿಡಿದು ಸೈಕಲ್ ಚೈನ್‌ನಿಂದ ಕತ್ತು ಹಿಸುಕಿ ಕೊಂದರು. ಹುಡುಗ ನೋವಿನಿಂದ ನರಳುತ್ತಿರುವಾಗ ಅವರು ದೊಡ್ಡ ಕಲ್ಲಿನಿಂದ ಅವನ ತಲೆಯನ್ನು ಒಡೆದು, ಕತ್ತು ಸೀಳಿದ್ದರು ಎಂದು ಶರ್ಮಾ ಹೇಳಿದರು.

12 ವರ್ಷದ ಬಾಲಕನ ಶವವನ್ನು ಪಾಲಿಥಿನ್ ಚೀಲದಲ್ಲಿ ತುಂಬಿ ಅವರ ಮನೆ ಬಳಿಯ ಬೆಣಚುಕಲ್ಲುಗಳ ರಾಶಿಯ ಮೇಲೆ ಎಸೆದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತರೆ ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ