AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh Crime: ಕಲ್ಲಿನಿಂದ ತಲೆ ಒಡೆದು, ಚಾಕುವಿನಿಂದ ಕತ್ತು ಸೀಳಿ ಮೂವರು ಅಪ್ರಾಪ್ತ ಬಾಲಕರಿಂದ ಬರ್ಬರ ಹತ್ಯೆ

ಮೂವರು ಅಪ್ರಾಪ್ತ ಬಾಲಕರು ಸೇರಿ ಬಾಲಕನೋರ್ವನ ತಲೆ ಒಡೆದು, ಕತ್ತು ಸೀಳಿ ಹತ್ಯೆ ಮಾಡಿ, ಪ್ಲಾಸ್ಟಿಕ್​ ಬ್ಯಾಗ್​ನಲ್ಲಿ ತುಂಬಿ ಎಸೆದಿರುವ ಘಟನೆ ಮಧ್ಯಪ್ರದೇಶದ ಸಿಯೋನಿಯಲ್ಲಿ ನಡೆದಿದೆ.

Madhya Pradesh Crime: ಕಲ್ಲಿನಿಂದ ತಲೆ ಒಡೆದು, ಚಾಕುವಿನಿಂದ ಕತ್ತು ಸೀಳಿ ಮೂವರು ಅಪ್ರಾಪ್ತ ಬಾಲಕರಿಂದ ಬರ್ಬರ ಹತ್ಯೆ
Crime SceneImage Credit source: Times Of India
ನಯನಾ ರಾಜೀವ್
|

Updated on: May 16, 2023 | 8:28 AM

Share

ಮೂವರು ಅಪ್ರಾಪ್ತ ಬಾಲಕರು ಸೇರಿ ಬಾಲಕನೋರ್ವನ ತಲೆ ಒಡೆದು, ಕತ್ತು ಸೀಳಿ ಹತ್ಯೆ ಮಾಡಿ, ಪ್ಲಾಸ್ಟಿಕ್​ ಬ್ಯಾಗ್​ನಲ್ಲಿ ತುಂಬಿ ಎಸೆದಿರುವ ಘಟನೆ ಮಧ್ಯಪ್ರದೇಶದ ಸಿಯೋನಿಯಲ್ಲಿ ನಡೆದಿದೆ. 11 ವರ್ಷದ ಅಪ್ರಾಪ್ತ 12 ವರ್ಷದ ತನ್ನ ಸ್ನೇಹಿತನನ್ನೇ ಸೈಕಲ್​ಚೈನ್​ನಿಂದ ಕತ್ತು ಹಿಸುಕಿ, ಕೊಯ್ದು ಕೊಲೆ ಮಾಡಿ ಬಳಿಕ ಕಲ್ಲಿನಿಂದ ತಲೆಯನ್ನು ಒಡೆದಿದ್ದಾರೆ, ಮನೆಯ ಬಳಿ ಕಸದ ರಾಶಿಯಲ್ಲಿ ಇದನ್ನು ಬಿಸಾಡಿದ್ದರು. ಮಹಿಳೆಯೊಬ್ಬರು ರಕ್ತಸಿಕ್ತ ಚೀಲವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಅಪರಾಧ ಬೆಳಕಿಗೆ ಬಂದಿದೆ.

ಹಳೆ ಜಗಳವೇ ಕೊಲೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಮೂವರು ಬಾಲಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು 14 ದಿನಗಳ ಕಾಲ ಸುಧಾರಣಾ ಗೃಹಕ್ಕೆ ಕಳುಹಿಸಲಾಗಿದೆ. ಇಬ್ಬರು ಸಹೋದರರು ಸೇರಿದಂತೆ ಕ್ರಮವಾಗಿ 16, 14 ಮತ್ತು 11 ವರ್ಷ ವಯಸ್ಸಿನ ಮೂವರು 12 ವರ್ಷದ ಬಾಲಕನನ್ನು ಸಿಯೋನಿ ಜಿಲ್ಲಾ ಕೇಂದ್ರದಿಂದ ಸುಮಾರು 28 ಕಿಮೀ ದೂರದಲ್ಲಿರುವ ಮಗರ್‌ಕಥಾ ಗ್ರಾಮದ ನಿರ್ಜನ ಸ್ಥಳಕ್ಕೆ ಭಾನುವಾರ ಕರೆದಿದ್ದಾರೆ ಎಂದು ಬರ್ಘಾಟ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರಸನ್ನ ಶರ್ಮಾ ತಿಳಿಸಿದ್ದಾರೆ.

ಮತ್ತಷ್ಟು ಓದಿ: ವೋಟ್ ಹಾಕಿಲ್ಲವೆಂದು ಅಣ್ಣ ತಮ್ಮಂದಿರ ನಡುವೆ ಕಿರಿಕ್; ದೊಡ್ಡಪ್ಪನನ್ನೇ ಕೊಲೆ ಮಾಡಿದ ಮಗ

ಮೂವರು ಬಾಲಕರು ಈ ಹಿಂದೆ ಕೊಲೆ ಮಾಡಿ ಅನುಭವ ಇರುವವರ ರೀತಿ ಹತ್ಯೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಮೊದಲು ಹತ್ಯೆ ಮಾಡಲು ಸಂಚು ರೂಪಿಸಿದ್ದರು, ಬಳಿಕ ಬಾಲಕನನ್ನು ಸ್ಥಳಕ್ಕೆ ಕರೆದೊಯ್ದಿದ್ದರು, ಅವನನ್ನು ಹಿಡಿದು ಸೈಕಲ್ ಚೈನ್‌ನಿಂದ ಕತ್ತು ಹಿಸುಕಿ ಕೊಂದರು. ಹುಡುಗ ನೋವಿನಿಂದ ನರಳುತ್ತಿರುವಾಗ ಅವರು ದೊಡ್ಡ ಕಲ್ಲಿನಿಂದ ಅವನ ತಲೆಯನ್ನು ಒಡೆದು, ಕತ್ತು ಸೀಳಿದ್ದರು ಎಂದು ಶರ್ಮಾ ಹೇಳಿದರು.

12 ವರ್ಷದ ಬಾಲಕನ ಶವವನ್ನು ಪಾಲಿಥಿನ್ ಚೀಲದಲ್ಲಿ ತುಂಬಿ ಅವರ ಮನೆ ಬಳಿಯ ಬೆಣಚುಕಲ್ಲುಗಳ ರಾಶಿಯ ಮೇಲೆ ಎಸೆದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತರೆ ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು