AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಮಾಡುವ ಖರ್ಚಿನಿಂದ ಬೇಸತ್ತು ಸ್ನೇಹಿತನಿಗೆ ಹಣಕೊಟ್ಟು ಕೊಲ್ಲಿಸಿದ ಗಂಡ

ವ್ಯಕ್ತಿಯೊಬ್ಬ ಸ್ನೇಹಿತನಿಗೆ ಹಣ ಕೊಟ್ಟು ಪತ್ನಿಯನ್ನು ಕೊಲ್ಲಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಹೇಮಂತ್ ಶರ್ಮಾ ಎಂಬಾತ ತನ್ನ ಸ್ನೇಹಿತನ ಸಹಾಯ ಪಡೆದು ಹತ್ಯೆ ಮಾಡಲು ಆತನಿಗೆ 2.5 ಲಕ್ಷ ರೂ. ನೀಡಿದ್ದ, ಆರಂಭದಲ್ಲಿ ರಸ್ತೆ ಅಪಘಾತದಂತೆ ಕಂಡುಬಂದ ಈ ಘಟನೆಯು ಆಗಸ್ಟ್​ 13ರಂದು ನಡೆದಿತ್ತು. ಹತ್ತು ದಿನಗಳ ಬಳಿಕ ಪೊಲೀಸ್​ ತನಿಖೆಯಲ್ಲಿ ವಿಚಾರ ಬೆಳಕಿಗೆ ಬಂದಿದೆ.

ಪತ್ನಿ ಮಾಡುವ ಖರ್ಚಿನಿಂದ ಬೇಸತ್ತು ಸ್ನೇಹಿತನಿಗೆ ಹಣಕೊಟ್ಟು ಕೊಲ್ಲಿಸಿದ ಗಂಡ
ಕೊಲೆ
Follow us
ನಯನಾ ರಾಜೀವ್
|

Updated on: Aug 25, 2024 | 9:04 AM

ಪತ್ನಿ ಮಾಡುವ ಖರ್ಚಿನಿಂದ ಬೇಸತ್ತು ವ್ಯಕ್ತಿಯೊಬ್ಬ ಸ್ನೇಹಿತನಿಗೆ ಹಣಕೊಟ್ಟು ಆಕೆಯನ್ನು ಕೊಲ್ಲಿಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ. ಹೇಮಂತ್ ಶರ್ಮಾ ಎಂಬಾತ ತನ್ನ ಸ್ನೇಹಿತನ ಸಹಾಯ ಪಡೆದು ಹತ್ಯೆ ಮಾಡಲು ಆತನಿಗೆ 2.5 ಲಕ್ಷ ರೂ. ನೀಡಿದ್ದ, ಆರಂಭದಲ್ಲಿ ರಸ್ತೆ ಅಪಘಾತದಂತೆ ಕಂಡುಬಂದ ಈ ಘಟನೆಯು ಆಗಸ್ಟ್​ 13ರಂದು ನಡೆದಿತ್ತು. ಹತ್ತು ದಿನಗಳ ಬಳಿಕ ಪೊಲೀಸ್​ ತನಿಖೆಯಲ್ಲಿ ಸತ್ಯ ಬೆಳಕಿಗೆ ಬಂದಿದೆ.

ಪೊಲೀಸರ ಪ್ರಕಾರ ಶರ್ಮಾ, ಪತ್ನಿ ಕೊಲೆಯನ್ನು ರಸ್ತೆ ಅಪಘಾತದಂತೆ ಕಾಣುವಂತೆ ರೂಪಿಸಿದ್ದ. ಘಟನೆ ದಿನದಂದು ಪತ್ನಿಯನ್ನು ಆಕೆಯ ಸಹೋದರ ಸಂದೇಶ್​ ದೇವಸ್ಥಾನಕ್ಕೆ ಕರೆದೊಯ್ದಿದ್ದರು. ಹಿಂದಿರುಗುವಾಗ ಶರ್ಮಾ ಸ್ನೇಹಿತನಿದ್ದ ಇಕೋಸ್ಪೋರ್ಟ್ಸ್​ ಕಾರು ಈ ಇಬ್ಬರು ಪ್ರಯಾಣಿಸುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ.

ಮಹಿಳೆ ಮಾರಣಾಂತಿಕವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆ, ಸಂದೇಶ್‌ಗೆ ಗಾಯಗಳಾಗಿವೆ. ಶರ್ಮಾ ಇದನ್ನು ಹಿಟ್​ ಆ್ಯಂಡ್ ರನ್ ಎಂದು ಹೇಳಿದ್ದ, ಬಳಿಕ ಆ ಪ್ರದೇಶದ ಸಿಸಿಟಿವಿ ದೃಶ್ಯಗಳಲ್ಲಿ ಶರ್ಮಾ ಹೇಳಿರುವ ರೀತಿಯ ವಾಹನ ಕಾಣಿಸದೇ ಇರುವುದು ಅನುಮಾನಗಳನ್ನು ಹುಟ್ಟುಹಾಕಿತ್ತು.

ಮತ್ತಷ್ಟು ಓದಿ: Crime News: ಅಕ್ಕನ ಮಗಳ ಜೊತೆ ಅಕ್ರಮ ಸಂಬಂಧ; ಬೇರೊಬ್ಬನ ಜೊತೆ ಮದುವೆಯಾಗುತ್ತಿದ್ದಾಕೆಯನ್ನು ಕೊಂದ ಮಾವ

ಘರ್ಷಣೆಗೆ ಸ್ವಲ್ಪ ಮೊದಲು ಮೋಟಾರ್‌ಸೈಕಲ್‌ನ ಹಿಂದೆ ಇಕೋಸ್ಪೋರ್ಟ್ ಕಾರು ಇರುವುದು ಕಂಡುಬಂದಿತ್ತು. ಹೇಮಂತ್ ಶರ್ಮಾರ ಎರಡನೇ ಪತ್ನಿ ಈ ದುರ್ಗಾವತಿ, ಅವರು 2022ರಲ್ಲಿ ವಿವಾಹವಾಗಿದ್ದರು.

ಶರ್ಮಾಳ ಮದುವೆಯಾದ ಕೆಲವೇ ದಿನಗಳಲ್ಲಿ ದುರ್ಗಾವತಿ ತನ್ನ ಮೊದಲ ಪತಿಗೆ ವಿಚ್ಛೇದನ ನೀಡಿ ಮನೆಗೆ ಮರಳಿದ್ದಳು. ನಂತರ, ದುರ್ಗಾವತಿ ಶರ್ಮಾಳೊಂದಿಗೆ ಮತ್ತೆ ಒಂದಾದರು ಮತ್ತು ಇಬ್ಬರೂ 2023 ರಲ್ಲಿ ನ್ಯಾಯಾಲಯದಲ್ಲಿ ವಿವಾಹವಾದರು. ಆಕೆ ವಿಪರೀತ ಖರ್ಚು ಮಾಡುತ್ತಿದ್ದ ಕಾರಣ ಶರ್ಮಾಗೆ ಕೋಪ ತರಿಸುತ್ತಿತ್ತು. ಬಳಿಕ ಆಕೆಯನ್ನು ಕೊಲೆ ಮಾಡಲು ಯೋಜನೆ ರೂಪಿಸಿದ್ದ. ಸಂಚಿನಲ್ಲಿ ಭಾಗಿಯಾಗಿರುವ ಇನ್ನಿಬ್ಬರು ಇನ್ನೂ ತಲೆಮರೆಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು