AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madhya Pradesh: ಮದುವೆ ಮನೆಯಲ್ಲಿ ವಿಷ ಸೇವಿಸಿದ ನವ ಜೋಡಿ, ವರ ಸಾವು, ವಧುವಿನ ಸ್ಥಿತಿ ಗಂಭೀರ

ವಧು-ವರರಿಬ್ಬರೂ ಮದುವೆಮನೆಯಲ್ಲೇ ವಿಷ ಸೇವಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಖುಷಿ ಖುಷಿಯಾಗಿರಬೇಕಿದ್ದ ಮದುವೆ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.

Madhya Pradesh: ಮದುವೆ ಮನೆಯಲ್ಲಿ ವಿಷ ಸೇವಿಸಿದ ನವ ಜೋಡಿ, ವರ ಸಾವು, ವಧುವಿನ ಸ್ಥಿತಿ ಗಂಭೀರ
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: May 18, 2023 | 9:16 AM

Share

ವಧು-ವರರಿಬ್ಬರೂ ಮದುವೆಮನೆಯಲ್ಲೇ ವಿಷ ಸೇವಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಖುಷಿ ಖುಷಿಯಾಗಿರಬೇಕಿದ್ದ ಮದುವೆ ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ವರ ಸಾವನ್ನಪ್ಪಿದ್ದು, ವಧುವಿನ ಪರಿಸ್ಥಿತಿ ಚಿಂತಾಜನಕವಾಗಿದೆ. ವಿವಾಹದ ಸಂದರ್ಭದಲ್ಲಿ ವಾಗ್ವಾದ ನಡೆದಿತ್ತು.  ನಂತರ ಇಬ್ಬರೂ ವಿಷ ಸೇವಿಸಿದ್ದರು, ಬಳಿಕ 21 ವರ್ಷದ ವರ ವಿಷ ಸೇವಿಸಿ ಮೃತಪಟ್ಟಿದ್ದಾರೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ವರ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದು, ವಧು ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ರಂಜಾನ್ ಖಾನ್, ಕನಾಡಿಯಾ ಪ್ರದೇಶದ ಆರ್ಯ ಸಮಾಜ ದೇವಸ್ಥಾನದಲ್ಲಿ ಜಗಳ ನಡೆದ ಕಾರಣ ವರ ವಿಷ ಸೇವಿಸಿ ತನ್ನ 20 ವರ್ಷದ ವಧುವಿಗೆ ಈ ವಿಷಯವನ್ನು ತಿಳಿಸಿದ್ದಾನೆ.

ಮತ್ತಷ್ಟು ಓದಿ: Delhi Crime: 35 ವರ್ಷದ ಪತ್ನಿಯನ್ನು ಕೊಲ್ಲಲು ಇಬ್ಬರಿಗೆ ಸುಪಾರಿ ಕೊಟ್ಟಿದ್ದ 71 ವರ್ಷದ ವ್ಯಕ್ತಿ

ವರ ವಿಷ ಸೇವಿಸಿರುವುದು ಗೊತ್ತಾದ ತಕ್ಷಣ ವಧು ಕೂಡ ವಿಷ ಕುಡಿದಿದ್ದಾಳೆ. ವರದ ಕುಟುಂಬದವರು ನೀಡಿರುವ ಮಾಹಿತಿ ಪ್ರಕಾರ, ಕಳೆದ ಕೆಲವು ತಿಂಗಳಿನಿಂದ ಯುವತಿಯು ಮದುವೆಯಾಗುವಂತೆ ಆತನ ಮೇಲೆ ಒತ್ತಡ ಹೇರುತ್ತಿದ್ದಳು, ವೃತ್ತಿಜೀವನದ ಆಧಾರದ ಮೇಲೆ ಎರಡು ವರ್ಷಗಳ ಕಾಲಾವಕಾಶ ಕೋರಿದಾಗ ಮಹಿಳೆ ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಳು ಎಂದಿದ್ದಾರೆ. ಘಟನೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್