AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ದಲಿತ ಯುವಕನನ್ನು ಹೊಡೆದು ಕೊಂದು, ತಾಯಿಯನ್ನು ವಿವಸ್ತ್ರಗೊಳಿಸಿದ ಪ್ರಕರಣ: 8 ಮಂದಿಯ ಬಂಧನ

ದಲಿತ ಯುವಕನನ್ನು ಹೊಡೆದು ಕೊಂದು, ತಾಯಿಯನ್ನು ವಿವಸ್ತ್ರಗೊಳಿಸಿ ದುಷ್ಕೃತ್ಯ ಮೆರೆದಿದ್ದಾರೆ. ಈ ಪ್ರಕರಣದಲ್ಲಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. 2019 ರಲ್ಲಿ ಮೃತ ವ್ಯಕ್ತಿಯ ಸಹೋದರಿ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂಪಡೆಯುವ ವಿಚಾರದಲ್ಲಿ ದಲಿತ ವ್ಯಕ್ತಿ ಮತ್ತು ಆರೋಪಿಗಳ ನಡುವೆ ವಾದ ವಿವಾದ ನಡೆದ ನಂತರ ಗುರುವಾರ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಧ್ಯಪ್ರದೇಶ: ದಲಿತ ಯುವಕನನ್ನು ಹೊಡೆದು ಕೊಂದು, ತಾಯಿಯನ್ನು ವಿವಸ್ತ್ರಗೊಳಿಸಿದ ಪ್ರಕರಣ: 8 ಮಂದಿಯ ಬಂಧನ
ಮನೆImage Credit source: NDTV
ನಯನಾ ಎಸ್​ಪಿ
| Edited By: |

Updated on: Aug 28, 2023 | 9:00 AM

Share

ದಲಿತ ಯುವಕನನ್ನು ಹೊಡೆದು ಕೊಂದು, ತಾಯಿಯನ್ನು ವಿವಸ್ತ್ರಗೊಳಿಸಿ ದುಷ್ಕೃತ್ಯ ಮೆರೆದಿದ್ದಾರೆ. ಈ ಪ್ರಕರಣದಲ್ಲಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. 2019 ರಲ್ಲಿ ಮೃತ ವ್ಯಕ್ತಿಯ ಸಹೋದರಿ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂಪಡೆಯುವ ವಿಚಾರದಲ್ಲಿ ದಲಿತ ವ್ಯಕ್ತಿ ಮತ್ತು ಆರೋಪಿಗಳ ನಡುವೆ ವಾದ ವಿವಾದ ನಡೆದ ನಂತರ ಗುರುವಾರ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

18 ವರ್ಷದ ನಿತಿನ್ ಅಹಿರ್ವಾರ್, ತನ್ನ ಸಹೋದರಿ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಥಳಿಸಿ ಹತ್ಯೆ ಮಾಡಿದ್ದಾರೆ, ದೂರು ಹಿಂಪಡೆಯುವಂತೆ ಆರೋಪಿ ಸಂತ್ರಸ್ತೆಯ ಸಹೋದರಿಯ ಮೇಲೆ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ. ಆರೋಪಿ ವಿಕ್ರಮ್ ಸಿಂಗ್ ಠಾಕೂರ್ ಮೊದಲು ಸಂತ್ರಸ್ತೆಯ ಮನೆಯನ್ನು ಧ್ವಂಸ ಮಾಡಿ ನಂತರ ಕೊಲೆ ಹತ್ಯೆ ಮಾಡಿದ್ದಾನೆ. ಸಂತ್ರಸ್ತೆಯ ತಾಯಿ ಮಧ್ಯಪ್ರವೇಶಿಸಲು ಬಂದಾಗ, ಆಕೆಯನ್ನು ವಿವಸ್ತ್ರಗೊಳಿಸಲಾಗಿದೆ.

ಪ್ರಮುಖ ಆರೋಪಿ ಸೇರಿದಂತೆ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಬಂಧಿಸಲು ಪೊಲೀಸ್ ತಂಡಗಳು ವಿವಿಧೆಡೆ ಶೋಧ ನಡೆಸುತ್ತಿವೆ. 9 ಆರೋಪಿಗಳು ಮತ್ತು ಮೂರ್ನಾಲ್ಕು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಪೊಲೀಸರು ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ಕೋಮಲ್ ಸಿಂಗ್ ಇನ್ನೂ ತಲೆಮರೆಸಿಕೊಂಡಿದ್ದಾನೆ.

ಮತ್ತಷ್ಟು ಓದಿ:  Mysore News: ಕಬ್ಬಿಣದ ರಾಡ್‌‌ನಿಂದ ಹೊಡೆದು ಮಹಿಳೆಯ ಭೀಕರ ಹತ್ಯೆ

ಸಹೋದರಿಯ ನೀಡಿರುವ ಪ್ರಕಾರ, ಆರೋಪಿಗಳಾದ ಕೋಮಲ್ ಸಿಂಗ್, ವಿಕ್ರಮ್ ಸಿಂಗ್ ಮತ್ತು ಆಜಾದ್ ಸಿಂಗ್ ಅವರ ಮನೆಗೆ ಬಂದು ಲೈಂಗಿಕ ಕಿರುಕುಳ ಪ್ರಕರಣವನ್ನು ಹಿಂಪಡೆಯುವಂತೆ ಮನವೊಲಿಸಲು ಪ್ರಯತ್ನಿಸಿದರು. ಸಂತ್ರಸ್ತೆಯ ತಾಯಿ ನಿರಾಕರಿಸಿದಾಗ ಆಕೆಗೆ ಬೆದರಿಕೆ ಹಾಕಿ ಆಕೆಯ ಮನೆಯನ್ನು ಧ್ವಂಸಗೊಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ