Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ನಾಯಿ ಬೊಗಳಿತೆಂದು ಮಾಲೀಕರನ್ನೇ ಕೊಂದ ವ್ಯಕ್ತಿ

ನಾಯಿ ತನ್ನನ್ನು ನೋಡಿ ಬೊಗಳಿತು ಎನ್ನುವ ಕೋಪದಲ್ಲಿ ವ್ಯಕ್ತಿಯೊಬ್ಬ ಮಾಲೀಕರನ್ನೇ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶನಿವಾರ ರಾತ್ರಿ ಮುಸಖೇಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಶಾಂತಿ ನಗರದ ನಿವಾಸಿಯಾಗಿದ್ದು, ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ.

ಮಧ್ಯಪ್ರದೇಶ: ನಾಯಿ ಬೊಗಳಿತೆಂದು ಮಾಲೀಕರನ್ನೇ ಕೊಂದ ವ್ಯಕ್ತಿ
ನಾಯ-ಸಾಂದರ್ಭಿಕ ಚಿತ್ರImage Credit source: Hindustan Times
Follow us
ನಯನಾ ರಾಜೀವ್
|

Updated on:Dec 24, 2023 | 12:47 PM

ನಾಯಿ ತನ್ನನ್ನು ನೋಡಿ ಬೊಗಳಿತು ಎನ್ನುವ ಕೋಪದಲ್ಲಿ ವ್ಯಕ್ತಿಯೊಬ್ಬ ಮಾಲೀಕರನ್ನೇ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಶನಿವಾರ ರಾತ್ರಿ ಮುಸಖೇಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಶಾಂತಿ ನಗರದ ನಿವಾಸಿಯಾಗಿದ್ದು, ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುತ್ತಿದ್ದಾಗ ಘಟನೆ ನಡೆದಿದೆ.

ರಾತ್ರಿ 10.30 ರ ಸುಮಾರಿಗೆ ಅವರು ಸಮುದಾಯ ಭವನದ ಬಳಿ ಇದ್ದಾಗ ನಾಯಿಯೊಂದು ನಿರಂತರವಾಗಿ ಬೊಗಳಲು ಪ್ರಾರಂಭಿಸಿತು ಮತ್ತು ಆ ವ್ಯಕ್ತಿಗೆ ರಸ್ತೆಯ ಮೂಲಕ ಹೋಗಲು ಸಾಧ್ಯವಾಗಲಿಲ್ಲ ಎಂದು ಆಜಾದ್‌ನಗರ ಪೊಲೀಸ್ ಠಾಣೆ ಪ್ರಭಾರಿ ನೀರಜ್ ಮೇಧಾ ತಿಳಿಸಿದ್ದಾರೆ. 65 ವರ್ಷದ ಮಹಿಳೆಯೊಬ್ಬರು ತನ್ನ ಮನೆಯಿಂದ ಹೊರಬಂದಿದ್ದರು ಮತ್ತು ಆ ವ್ಯಕ್ತಿ ಜತೆ ಜಗಳಕ್ಕಿಳಿದಿದ್ದರು.

ಆತ ಮಹಿಳೆಯ ಹೊಟ್ಟೆಗೆ ಒದ್ದಿದ್ದಾನೆ, ಆಕೆ ತಕ್ಷಣ ಕುಸಿದು ಬಿದ್ದಿದ್ದಾರೆ. ಅಲ್ಲಿದ್ದವರು ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಆದರೆ ಅಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿ ಹೋಗಿತ್ತು.

ಮತ್ತಷ್ಟು ಓದಿ: ಬಿಹಾರದಲ್ಲಿ ಎಐಎಂಐಎಂ ನಾಯಕ ಆರಿಫ್ ಜಮಾಲ್ ಹತ್ಯೆ

ಆರೋಪಿಯ ವಿರುದ್ಧ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Sun, 24 December 23

ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ