AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಮೊದಲು ಬೆರಳು ಕತ್ತರಿಸಿ ಬಳಿಕ ವ್ಯಕ್ತಿಯನ್ನೇ ಕೊಂದ ತಾಂತ್ರಿಕರು

ಹೆಚ್ಚು ಹಣ ಗಳಿಸಲು ಸಹಾಯ ಮಾಡುತ್ತೇನೆ ಎಂದು ನಂಬಿಸಿ ಇಬ್ಬರು ತಂತ್ರಿಗಳು ವ್ಯಕ್ತಿಯ ಪ್ರಾಣವನ್ನೇ ತೆಗೆದಿದ್ದಾರೆ. ಮಧ್ಯಪ್ರದೇಶದ ನರಸಿಂಗ್​ಪುರದಲ್ಲಿ ಈ ಘಟನೆ ನಡೆದಿದೆ. ಹೆಚ್ಚು ಹಣಗಳಿಸಲು ಸಹಾಯ ಮಾಡುತ್ತೇವೆ ಎಂದು ನಂಬಿಸಿ ಕರೆಸಿಕೊಂಡು, ಮೊದಲು ಬೆರಳು ಕತ್ತರಿಸಲು ಮನವೊಲಿಸಿದ್ದಾರೆ, ಕೊನೆಗೆ ಕೊರಳನ್ನೇ ಕತ್ತರಿಸಿದ್ದಾರೆ.

ಮಧ್ಯಪ್ರದೇಶ: ಮೊದಲು ಬೆರಳು ಕತ್ತರಿಸಿ ಬಳಿಕ ವ್ಯಕ್ತಿಯನ್ನೇ ಕೊಂದ ತಾಂತ್ರಿಕರು
ಸಾವುImage Credit source: The Economic Times
Follow us
ನಯನಾ ರಾಜೀವ್
|

Updated on: Nov 10, 2023 | 8:31 AM

ಹೆಚ್ಚು ಹಣ ಗಳಿಸಲು ಸಹಾಯ ಮಾಡುತ್ತೇನೆ ಎಂದು ನಂಬಿಸಿ ಇಬ್ಬರು ತಂತ್ರಿಗಳು ವ್ಯಕ್ತಿಯ ಪ್ರಾಣವನ್ನೇ ತೆಗೆದಿದ್ದಾರೆ. ಮಧ್ಯಪ್ರದೇಶದ ನರಸಿಂಗ್​ಪುರದಲ್ಲಿ ಈ ಘಟನೆ ನಡೆದಿದೆ. ಹೆಚ್ಚು ಹಣಗಳಿಸಲು ಸಹಾಯ ಮಾಡುತ್ತೇವೆ ಎಂದು ನಂಬಿಸಿ ಕರೆಸಿಕೊಂಡು, ಮೊದಲು ಬೆರಳು ಕತ್ತರಿಸಲು ಮನವೊಲಿಸಿದ್ದಾರೆ, ಕೊನೆಗೆ ಕೊರಳನ್ನೇ ಕತ್ತರಿಸಿದ್ದಾರೆ.

ನವೆಂಬರ್ 4 ರಂದು 22 ವರ್ಷದ ವ್ಯಕ್ತಿಯ ದೇಹವು ಹೊಲದಲ್ಲಿ ಪತ್ತೆಯಾಗಿತ್ತು, ಕುತ್ತಿಗೆಯನ್ನು ಮೊನಚಾದ ಆಯುಧದಿಂದ ಕತ್ತರಿಸಲಾಗಿತ್ತು. ಆರೋಪಿ ಅಂಕಿತ್ ಕೌರವ್ ಎಂಬಾತನಿಗೆ ಬಲಗೈಯ ಮಧ್ಯದ ಬೆರಳನ್ನು ಕತ್ತರಿಸುವಂತೆ ಮನವರಿಕೆ ಮಾಡಲಾಗಿತ್ತು, ಆತನು ಶ್ರೀಮಂತನಾಗಲು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು.

ತಂತ್ರಿಗಳನ್ನು 40 ವರ್ಷದ ಸುರೇಂದ್ರ ಕಚಿ ಮತ್ತು 45 ವರ್ಷದ ರಾಮು ಕಚ್ಚಿ ಎಂದು ಗುರುತಿಸಲಾಗಿದೆ. ಎಸ್ಪಿ ಅಮಿತ್ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಇಬ್ಬರನ್ನೂ ಬಂಧಿಸಲಾಗಿದೆ.

ಘಟನೆ ನಡೆದ ರಾತ್ರಿ ಯುವಕ ಆರೋಪಿಯೊಂದಿಗೆ ಬೈಕ್‌ನಲ್ಲಿ ಹೋಗುತ್ತಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ನಾಲ್ಕು ತಿಂಗಳ ಹಿಂದೆಯೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾಗ ಮಾಂತ್ರಿಕರನ್ನು ಸಂಪರ್ಕಿಸಿದ್ದರು.

ಮತ್ತಷ್ಟು ಓದಿ: ಪಂಜಾಬ್: ಮದ್ಯಪಾನ ಮಾಡಬೇಡ ಎಂದಿದ್ದಕ್ಕೆ ಹೆತ್ತವರನ್ನೇ ಕೊಚ್ಚಿ ಕೊಂದ ಮಗ

ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದರು ಆದರೆ ತಾಂತ್ರಿಕರು ಸಹಾಯ ಮಾಡಿದ ನಂತರವೇ ಆತ ಗುಣಮುಖನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಅನುಭವದಿಂದಾಗಿ ಯುವಕ ಆ ತಂತ್ರಿಗಳನ್ನು ನಂಬಲು ಶುರು ಮಾಡಿದ್ದ, ಸುಮಾರು 15 ದಿನಗಳ ಹಿಂದೆ, ಸಂತ್ರಸ್ತೆಯ ಸೋದರ ಮಾವ ಅನಾರೋಗ್ಯಕ್ಕೆ ಒಳಗಾದಾಗ, ಚಿಕಿತ್ಸೆಗೆ ಖರ್ಚು ಮಾಡಿದ ಹಣವು ಅವರ ಕುಟುಂಬದಲ್ಲಿ ಆರ್ಥಿಕ ಸಮಸ್ಯೆಗೆ ಕಾರಣವಾಯಿತು. ಇದರ ಬೆನ್ನಲ್ಲೇ ಯುವಕ ಮತ್ತೆ ತಂತ್ರಿಗಳನ್ನು ಸಂಪರ್ಕಿಸಿ ಹೆಚ್ಚಿನ ಹಣ ಗಳಿಸುವ ಆಸೆ ವ್ಯಕ್ತಪಡಿಸಿದ್ದಾನೆ.

ಅದಕ್ಕೆ ಈ ತಾಂತ್ರಿಕರು ಕೂಡ ಒಪ್ಪಿದ್ದರು, ಬೆರಳನ್ನು ಕತ್ತರಿಸಿಕೊಳ್ಳುವಂತೆ ಮನವೊಲಿಸಿದ್ದರು, ನಂತರ ತಮ್ಮೊಂದಿಗೆ ಗ್ರಾಮವೊಂದಕ್ಕೆ ಕರೆದೊಯ್ದರು, ಅಲ್ಲಿ ನರಬಲಿ ಕೊಡಲು ಎಲ್ಲಾ ಯೋಜನೆ ರೂಪಿಸಿದ್ದರು. ಬಲಗೈನ ಮಧ್ಯದ ಬೆಳನ್ನು ಕತ್ತರಿಸುವಂತೆ ಹೇಳಿದ್ದರು, ಬಳಿಕ ಅಂಕಿತ್​ಗೆ ನಿದ್ರೆ ಮಾತ್ರೆ ನೀಡಿ, ಹತ್ಯೆ ಮಾಡಿದ್ದಾರೆ, ಈಗ ತಂತ್ರಿಗಳನ್ನು ಜೈಲಿಗೆ ಕಳುಹಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್