ಮಧ್ಯಪ್ರದೇಶ: ಮೊದಲು ಬೆರಳು ಕತ್ತರಿಸಿ ಬಳಿಕ ವ್ಯಕ್ತಿಯನ್ನೇ ಕೊಂದ ತಾಂತ್ರಿಕರು

ಹೆಚ್ಚು ಹಣ ಗಳಿಸಲು ಸಹಾಯ ಮಾಡುತ್ತೇನೆ ಎಂದು ನಂಬಿಸಿ ಇಬ್ಬರು ತಂತ್ರಿಗಳು ವ್ಯಕ್ತಿಯ ಪ್ರಾಣವನ್ನೇ ತೆಗೆದಿದ್ದಾರೆ. ಮಧ್ಯಪ್ರದೇಶದ ನರಸಿಂಗ್​ಪುರದಲ್ಲಿ ಈ ಘಟನೆ ನಡೆದಿದೆ. ಹೆಚ್ಚು ಹಣಗಳಿಸಲು ಸಹಾಯ ಮಾಡುತ್ತೇವೆ ಎಂದು ನಂಬಿಸಿ ಕರೆಸಿಕೊಂಡು, ಮೊದಲು ಬೆರಳು ಕತ್ತರಿಸಲು ಮನವೊಲಿಸಿದ್ದಾರೆ, ಕೊನೆಗೆ ಕೊರಳನ್ನೇ ಕತ್ತರಿಸಿದ್ದಾರೆ.

ಮಧ್ಯಪ್ರದೇಶ: ಮೊದಲು ಬೆರಳು ಕತ್ತರಿಸಿ ಬಳಿಕ ವ್ಯಕ್ತಿಯನ್ನೇ ಕೊಂದ ತಾಂತ್ರಿಕರು
ಸಾವು
Image Credit source: The Economic Times

Updated on: Nov 10, 2023 | 8:31 AM

ಹೆಚ್ಚು ಹಣ ಗಳಿಸಲು ಸಹಾಯ ಮಾಡುತ್ತೇನೆ ಎಂದು ನಂಬಿಸಿ ಇಬ್ಬರು ತಂತ್ರಿಗಳು ವ್ಯಕ್ತಿಯ ಪ್ರಾಣವನ್ನೇ ತೆಗೆದಿದ್ದಾರೆ. ಮಧ್ಯಪ್ರದೇಶದ ನರಸಿಂಗ್​ಪುರದಲ್ಲಿ ಈ ಘಟನೆ ನಡೆದಿದೆ. ಹೆಚ್ಚು ಹಣಗಳಿಸಲು ಸಹಾಯ ಮಾಡುತ್ತೇವೆ ಎಂದು ನಂಬಿಸಿ ಕರೆಸಿಕೊಂಡು, ಮೊದಲು ಬೆರಳು ಕತ್ತರಿಸಲು ಮನವೊಲಿಸಿದ್ದಾರೆ, ಕೊನೆಗೆ ಕೊರಳನ್ನೇ ಕತ್ತರಿಸಿದ್ದಾರೆ.

ನವೆಂಬರ್ 4 ರಂದು 22 ವರ್ಷದ ವ್ಯಕ್ತಿಯ ದೇಹವು ಹೊಲದಲ್ಲಿ ಪತ್ತೆಯಾಗಿತ್ತು, ಕುತ್ತಿಗೆಯನ್ನು ಮೊನಚಾದ ಆಯುಧದಿಂದ ಕತ್ತರಿಸಲಾಗಿತ್ತು.
ಆರೋಪಿ ಅಂಕಿತ್ ಕೌರವ್ ಎಂಬಾತನಿಗೆ ಬಲಗೈಯ ಮಧ್ಯದ ಬೆರಳನ್ನು ಕತ್ತರಿಸುವಂತೆ ಮನವರಿಕೆ ಮಾಡಲಾಗಿತ್ತು, ಆತನು ಶ್ರೀಮಂತನಾಗಲು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದರು.

ತಂತ್ರಿಗಳನ್ನು 40 ವರ್ಷದ ಸುರೇಂದ್ರ ಕಚಿ ಮತ್ತು 45 ವರ್ಷದ ರಾಮು ಕಚ್ಚಿ ಎಂದು ಗುರುತಿಸಲಾಗಿದೆ. ಎಸ್ಪಿ ಅಮಿತ್ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಇಬ್ಬರನ್ನೂ ಬಂಧಿಸಲಾಗಿದೆ.

ಘಟನೆ ನಡೆದ ರಾತ್ರಿ ಯುವಕ ಆರೋಪಿಯೊಂದಿಗೆ ಬೈಕ್‌ನಲ್ಲಿ ಹೋಗುತ್ತಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ನಾಲ್ಕು ತಿಂಗಳ ಹಿಂದೆಯೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾಗ ಮಾಂತ್ರಿಕರನ್ನು ಸಂಪರ್ಕಿಸಿದ್ದರು.

ಮತ್ತಷ್ಟು ಓದಿ: ಪಂಜಾಬ್: ಮದ್ಯಪಾನ ಮಾಡಬೇಡ ಎಂದಿದ್ದಕ್ಕೆ ಹೆತ್ತವರನ್ನೇ ಕೊಚ್ಚಿ ಕೊಂದ ಮಗ

ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ್ದರು ಆದರೆ ತಾಂತ್ರಿಕರು ಸಹಾಯ ಮಾಡಿದ ನಂತರವೇ ಆತ ಗುಣಮುಖನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಅನುಭವದಿಂದಾಗಿ ಯುವಕ ಆ ತಂತ್ರಿಗಳನ್ನು ನಂಬಲು ಶುರು ಮಾಡಿದ್ದ, ಸುಮಾರು 15 ದಿನಗಳ ಹಿಂದೆ, ಸಂತ್ರಸ್ತೆಯ ಸೋದರ ಮಾವ ಅನಾರೋಗ್ಯಕ್ಕೆ ಒಳಗಾದಾಗ, ಚಿಕಿತ್ಸೆಗೆ ಖರ್ಚು ಮಾಡಿದ ಹಣವು ಅವರ ಕುಟುಂಬದಲ್ಲಿ ಆರ್ಥಿಕ ಸಮಸ್ಯೆಗೆ ಕಾರಣವಾಯಿತು.
ಇದರ ಬೆನ್ನಲ್ಲೇ ಯುವಕ ಮತ್ತೆ ತಂತ್ರಿಗಳನ್ನು ಸಂಪರ್ಕಿಸಿ ಹೆಚ್ಚಿನ ಹಣ ಗಳಿಸುವ ಆಸೆ ವ್ಯಕ್ತಪಡಿಸಿದ್ದಾನೆ.

ಅದಕ್ಕೆ ಈ ತಾಂತ್ರಿಕರು ಕೂಡ ಒಪ್ಪಿದ್ದರು, ಬೆರಳನ್ನು ಕತ್ತರಿಸಿಕೊಳ್ಳುವಂತೆ ಮನವೊಲಿಸಿದ್ದರು, ನಂತರ ತಮ್ಮೊಂದಿಗೆ ಗ್ರಾಮವೊಂದಕ್ಕೆ ಕರೆದೊಯ್ದರು, ಅಲ್ಲಿ ನರಬಲಿ ಕೊಡಲು ಎಲ್ಲಾ ಯೋಜನೆ ರೂಪಿಸಿದ್ದರು. ಬಲಗೈನ ಮಧ್ಯದ ಬೆಳನ್ನು ಕತ್ತರಿಸುವಂತೆ ಹೇಳಿದ್ದರು, ಬಳಿಕ ಅಂಕಿತ್​ಗೆ ನಿದ್ರೆ ಮಾತ್ರೆ ನೀಡಿ, ಹತ್ಯೆ ಮಾಡಿದ್ದಾರೆ, ಈಗ ತಂತ್ರಿಗಳನ್ನು ಜೈಲಿಗೆ ಕಳುಹಿಸಲಾಗಿದೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us