AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋಪಾಲ್: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 3 ಬಾರಿ ಅತ್ಯಾಚಾರ

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. 40 ಕಿ.ಮೀ ಅಂತರದಲ್ಲಿ ಮೂರು ಬಾರಿ ಅತ್ಯಾಚಾರವೆಸಗಲಾಗಿದೆ, ಆದರೂ ಆತನಿಂದ ತಪ್ಪಿಸಿಕೊಳ್ಳುವಲ್ಲಿ ಮಹಿಳೆ ಯಶಸ್ವಿಯಾಗಿದ್ದಾರೆ.  ಮಹಿಳೆ ತನ್ನ ಬೋಗಿಯಿಂದ ಎಸಿ ಕೋಚ್​ನಲ್ಲಿರುವ ವಾಶ್​ರೂಂಗೆ ಹೋಗಿದ್ದರು, ಆಕೆ ವಾಪಸಾಗುವ ವೇಳೆ ಆಕೆಗೆ ಬಲವಾದ ಆಯುಧದಿಂದ ವ್ಯಕ್ತಿಯೊಬ್ಬ ಹೊಡೆದಿದ್ದಾನೆ.

ಭೋಪಾಲ್: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 3 ಬಾರಿ ಅತ್ಯಾಚಾರ
ಅತ್ಯಾಚಾರ-ಸಾಂದರ್ಭಿಕ ಚಿತ್ರImage Credit source: India Today
ನಯನಾ ರಾಜೀವ್
|

Updated on: Dec 12, 2023 | 2:39 PM

Share

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. 40 ಕಿ.ಮೀ ಅಂತರದಲ್ಲಿ ಮೂರು ಬಾರಿ ಅತ್ಯಾಚಾರವೆಸಗಲಾಗಿದೆ, ಆದರೂ ಆತನಿಂದ ತಪ್ಪಿಸಿಕೊಳ್ಳುವಲ್ಲಿ ಮಹಿಳೆ ಯಶಸ್ವಿಯಾಗಿದ್ದಾರೆ.  ಮಹಿಳೆ ತನ್ನ ಬೋಗಿಯಿಂದ ಎಸಿ ಕೋಚ್​ನಲ್ಲಿರುವ ವಾಶ್​ರೂಂಗೆ ಹೋಗಿದ್ದರು, ಆಕೆ ವಾಪಸಾಗುವ ವೇಳೆ ಆಕೆಗೆ ಬಲವಾದ ಆಯುಧದಿಂದ ವ್ಯಕ್ತಿಯೊಬ್ಬ ಹೊಡೆದಿದ್ದಾನೆ.

ಅವರು ನೆಲಕ್ಕೆ ಬಿದ್ದ ಬಳಿಕ ಎತ್ತಿಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಅಂದು ಕೋಚ್​ನಲ್ಲಿ ಯಾರೂ ಇರಲಿಲ್ಲ. ಪಕಾರಿಯಾದಿಂದ ಮೈಹಾರ್ ರೈಲು ನಿಲ್ದಾಣಗಳ ನಡುವೆ ಮೂರು ಬಾರಿ ಅತ್ಯಾಚಾರವೆಸಗಿದ್ದಾನೆ. ಆಕೆ ಅತ್ಯಾಚಾರವನ್ನು ವಿರೋಧಿಸಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ರೈಲು ಒಂದು ನಿಲ್ದಾಣದಲ್ಲಿ ನಿಂತಾದ ತನಗೆ ಬಾಯಾರಿಕೆಯಾಗುತ್ತಿದೆ ನೀರು ಕೊಡಿ ಎಂದಿದ್ದಾರೆ ಆಗ ಆತ ನೀರು ತರಲು ಹೋದಾಗ ಬಿಚ್ಚಿ ಹೋದ ಸೀರೆಯನ್ನು ಕಟ್ಟಿಕೊಳ್ಳುತ್ತಾ, ಬರಿಗಾಲಿನಲ್ಲಿ ಸಹಾಯಕ್ಕಾಗಿ ಓಡಿದ್ದಾರೆ.

ಮತ್ತಷ್ಟು ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಮಹಿಳೆ ಸತ್ನಾ ನಿಲ್ದಾಣದ ಆರ್​ಪಿಎಫ್​ ಕಾನ್​ಸ್ಟೆಬಲ್​ ಬಳಿ ಓಡಿಹೋಗಿದ್ದಾರೆ, ನಡೆದಿದ್ದೆಲ್ಲವನ್ನೂ ವಿವರಿಸಿದ್ದಾರೆ. ಬಳಿಕ ಪೊಲೀಸರು ರೈಲಿನ ಬಳಿ ತೆರಳಿದಾಗ ಆತ ಕೋಚ್​ನ ಬಾಗಿಲನ್ನು ಹಾಕಿಕೊಂಡಿದ್ದ, ಏನೇ ಮಾಡಿದರೂ ಬಾಗಿಲು ತೆರೆಸಲು ಸಾಧ್ಯವಾಗಲಿಲ್ಲ. ಕೆಲವು ಪೊಲೀಸರು ಹಾಗೂ ರೈಲ್ವೆ ಅಧಿಕಾರಿಗಳ ಆ ಕೋಚ್​ ಬಳಿಯೇ ಇದ್ದರು.

ರೈಲನ್ನು ಕೈಮಾ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಯಿತು, ಆಗ ರೈಲ್ವೆ ಮೆಕ್ಯಾನಿಕಲ್ ತಂಡವು ಬಾಗಿಲನ್ನು ತೆಗೆಯುವಲ್ಲಿ ಯಶಸ್ವಿಯಾಯಿತು. ಆರೋಪಿಯನ್ನು ಸೆರೆಹಿಡಿಯಲಾಯಿತು. ಒಂದೊಮ್ಮೆ ಆರ್​ಪಿಎಫ್​ ಕಾನ್​ಸ್ಟೆಬಲ್​ ರೈಲು ಹತ್ತದಿದ್ದರೆ ಆರೋಪಿ ಸುಲಭವಾಗಿ ತಪ್ಪಿಸಿಕೊಂಡುಬಿಡುತ್ತಿದ್ದ. ಇದೀಗ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ, ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್