AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೋಪಾಲ್: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 3 ಬಾರಿ ಅತ್ಯಾಚಾರ

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. 40 ಕಿ.ಮೀ ಅಂತರದಲ್ಲಿ ಮೂರು ಬಾರಿ ಅತ್ಯಾಚಾರವೆಸಗಲಾಗಿದೆ, ಆದರೂ ಆತನಿಂದ ತಪ್ಪಿಸಿಕೊಳ್ಳುವಲ್ಲಿ ಮಹಿಳೆ ಯಶಸ್ವಿಯಾಗಿದ್ದಾರೆ.  ಮಹಿಳೆ ತನ್ನ ಬೋಗಿಯಿಂದ ಎಸಿ ಕೋಚ್​ನಲ್ಲಿರುವ ವಾಶ್​ರೂಂಗೆ ಹೋಗಿದ್ದರು, ಆಕೆ ವಾಪಸಾಗುವ ವೇಳೆ ಆಕೆಗೆ ಬಲವಾದ ಆಯುಧದಿಂದ ವ್ಯಕ್ತಿಯೊಬ್ಬ ಹೊಡೆದಿದ್ದಾನೆ.

ಭೋಪಾಲ್: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ 3 ಬಾರಿ ಅತ್ಯಾಚಾರ
ಅತ್ಯಾಚಾರ-ಸಾಂದರ್ಭಿಕ ಚಿತ್ರImage Credit source: India Today
ನಯನಾ ರಾಜೀವ್
|

Updated on: Dec 12, 2023 | 2:39 PM

Share

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ಭೋಪಾಲ್​ನಲ್ಲಿ ನಡೆದಿದೆ. 40 ಕಿ.ಮೀ ಅಂತರದಲ್ಲಿ ಮೂರು ಬಾರಿ ಅತ್ಯಾಚಾರವೆಸಗಲಾಗಿದೆ, ಆದರೂ ಆತನಿಂದ ತಪ್ಪಿಸಿಕೊಳ್ಳುವಲ್ಲಿ ಮಹಿಳೆ ಯಶಸ್ವಿಯಾಗಿದ್ದಾರೆ.  ಮಹಿಳೆ ತನ್ನ ಬೋಗಿಯಿಂದ ಎಸಿ ಕೋಚ್​ನಲ್ಲಿರುವ ವಾಶ್​ರೂಂಗೆ ಹೋಗಿದ್ದರು, ಆಕೆ ವಾಪಸಾಗುವ ವೇಳೆ ಆಕೆಗೆ ಬಲವಾದ ಆಯುಧದಿಂದ ವ್ಯಕ್ತಿಯೊಬ್ಬ ಹೊಡೆದಿದ್ದಾನೆ.

ಅವರು ನೆಲಕ್ಕೆ ಬಿದ್ದ ಬಳಿಕ ಎತ್ತಿಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಅಂದು ಕೋಚ್​ನಲ್ಲಿ ಯಾರೂ ಇರಲಿಲ್ಲ. ಪಕಾರಿಯಾದಿಂದ ಮೈಹಾರ್ ರೈಲು ನಿಲ್ದಾಣಗಳ ನಡುವೆ ಮೂರು ಬಾರಿ ಅತ್ಯಾಚಾರವೆಸಗಿದ್ದಾನೆ. ಆಕೆ ಅತ್ಯಾಚಾರವನ್ನು ವಿರೋಧಿಸಿದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ರೈಲು ಒಂದು ನಿಲ್ದಾಣದಲ್ಲಿ ನಿಂತಾದ ತನಗೆ ಬಾಯಾರಿಕೆಯಾಗುತ್ತಿದೆ ನೀರು ಕೊಡಿ ಎಂದಿದ್ದಾರೆ ಆಗ ಆತ ನೀರು ತರಲು ಹೋದಾಗ ಬಿಚ್ಚಿ ಹೋದ ಸೀರೆಯನ್ನು ಕಟ್ಟಿಕೊಳ್ಳುತ್ತಾ, ಬರಿಗಾಲಿನಲ್ಲಿ ಸಹಾಯಕ್ಕಾಗಿ ಓಡಿದ್ದಾರೆ.

ಮತ್ತಷ್ಟು ಓದಿ: ಕೊಪ್ಪಳದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ವಿಡಿಯೋ ವೈರಲ್, 16 ಜನರ ವಿರುದ್ಧ ಎಫ್​ಐಆರ್

ಮಹಿಳೆ ಸತ್ನಾ ನಿಲ್ದಾಣದ ಆರ್​ಪಿಎಫ್​ ಕಾನ್​ಸ್ಟೆಬಲ್​ ಬಳಿ ಓಡಿಹೋಗಿದ್ದಾರೆ, ನಡೆದಿದ್ದೆಲ್ಲವನ್ನೂ ವಿವರಿಸಿದ್ದಾರೆ. ಬಳಿಕ ಪೊಲೀಸರು ರೈಲಿನ ಬಳಿ ತೆರಳಿದಾಗ ಆತ ಕೋಚ್​ನ ಬಾಗಿಲನ್ನು ಹಾಕಿಕೊಂಡಿದ್ದ, ಏನೇ ಮಾಡಿದರೂ ಬಾಗಿಲು ತೆರೆಸಲು ಸಾಧ್ಯವಾಗಲಿಲ್ಲ. ಕೆಲವು ಪೊಲೀಸರು ಹಾಗೂ ರೈಲ್ವೆ ಅಧಿಕಾರಿಗಳ ಆ ಕೋಚ್​ ಬಳಿಯೇ ಇದ್ದರು.

ರೈಲನ್ನು ಕೈಮಾ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಯಿತು, ಆಗ ರೈಲ್ವೆ ಮೆಕ್ಯಾನಿಕಲ್ ತಂಡವು ಬಾಗಿಲನ್ನು ತೆಗೆಯುವಲ್ಲಿ ಯಶಸ್ವಿಯಾಯಿತು. ಆರೋಪಿಯನ್ನು ಸೆರೆಹಿಡಿಯಲಾಯಿತು. ಒಂದೊಮ್ಮೆ ಆರ್​ಪಿಎಫ್​ ಕಾನ್​ಸ್ಟೆಬಲ್​ ರೈಲು ಹತ್ತದಿದ್ದರೆ ಆರೋಪಿ ಸುಲಭವಾಗಿ ತಪ್ಪಿಸಿಕೊಂಡುಬಿಡುತ್ತಿದ್ದ. ಇದೀಗ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ, ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು