AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿದ 16 ವರ್ಷದ ಬಾಲಕ

16 ವರ್ಷದ ಬಾಲಕನೊಬ್ಬ 58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಹನುಮಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30ರ ರಾತ್ರಿ ಘಟನೆ ನಡೆದಿದೆ.

58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿದ 16 ವರ್ಷದ ಬಾಲಕ
ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on: Feb 05, 2023 | 3:47 PM

Share

16 ವರ್ಷದ ಬಾಲಕನೊಬ್ಬ 58 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕುಡುಗೋಲಿನಿಂದ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಹನುಮಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೈಲಾಸಪುರಿ ಗ್ರಾಮದಲ್ಲಿ ಜನವರಿ 30ರ ರಾತ್ರಿ ಘಟನೆ ನಡೆದಿದೆ. ಆರೋಪಿಯು ಮಹಿಳೆಯ ಬಾಯಿಗೆ ಪ್ಲಾಸ್ಟಿಕ್ ಚೀಲ ಹಾಗೂ ಬಟ್ಟೆಯನ್ನು ತುಂಬಿ, ಆಕೆ ವಾಸಿಸುತ್ತಿದ್ದ ಕಟ್ಟಡದ ನಿರ್ಮಾಣ ಹಂತದ ಭಾಗಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಲಕ ಮಹಿಳೆಯ ತಲೆ ಮತ್ತು ದೇಹದ ಇತರೆ ಭಾಗಗಳ ಮೇಲೆ ಕುಡುಗೋಲಿನಿಂದ ಹೊಡೆದಿದ್ದಾನೆ ಮತ್ತು ಆಕೆಯ ಖಾಸಗಿ ಭಾಗಗಳನ್ನು ಗಾಯಗೊಳಿಸಿದ್ದಾನೆ.

ಫೆಬ್ರವರಿ 1 ರಂದು ಮಹಿಳೆಯ ಶವವು ನಿರ್ಮಾಣ ಹಂತದಲ್ಲಿರುವ ಕಟ್ಟಡದ ಬಳಿ ಪತ್ತೆಯಾಗಿತ್ತು. ಪೊಲೀಸರು ಹಾಗೂ ಫೊರೆನ್ಸಿಕ್ ತಂಡವು ಸ್ಥಳಕ್ಕೆ ಆಗಮಿಸಿತ್ತು, ಸಂತ್ರಸ್ತೆಯ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಆರೋಪಿ ಕೃತ್ಯ ಎಸಗಿದ್ದಾನೆ ಎಂಬುದು ತಿಳಿದುಬಂದಿದೆ. ಎರಡು ವರ್ಷಗಳ ಹಿಂದೆ ಟಿವಿ ನೋಡಲು ಮನೆಗೆ ಬರುತ್ತಿದ್ದ ಬಾಲಕನ ಮೇಲೆ ಮೊಬೈಲ್ ಕಳ್ಳತನದ ಆರೋಪ ಮಾಡಿದ್ದರು.

ಮತ್ತಷ್ಟು ಓದಿ: Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!

ಜನವರಿ 30 ರಂದು ಸಂತ್ರಸ್ತೆಯ ಮಗ ಹಾಗೂ ಪತಿ ಹೊರಗೆ ಹೋಗಿದ್ದಾಗ ಹುಡುಗ ಆಕೆಯ ಮನೆಗೆ ನುಗ್ಗಿದ್ದಾನೆ. ಮಂಚದ ಮೇಲೆ ಮಲಗಿದ್ದ ಮಹಿಳೆಯ ಮೇಲೆ ಆರೋಪಿ ಬಲವಂತವಾಗಿ ಹಲ್ಲೆ ನಡೆಸಿದ್ದಾನೆ, ಮೊದಲು ಬಾಯಿ ಕಟ್ಟಿ ನಂತರ ಹಗ್ಗ ಮತ್ತು ತಂತಿಯ ಸಹಾಯದಿಂದ ಮಹಿಳೆಯ ಮುಖದ ಮೇಲೆ ಪ್ಲಾಸ್ಟಿಕ್ ಚೀಲ ಕಟ್ಟಿ ಕರೆದೊಯ್ದಿದ್ದಾನೆ.

ಬಾಲಕ ಮಹಿಳೆಯನ್ನು ಪದೇ ಪದೇ ಥಳಿಸಿದ್ದ ಮತ್ತು ಪ್ರಜ್ಞೆ ತಪ್ಪಿದಾಗ ಆಕೆಯ ಮೇಲೆ ಅತ್ಯಾಚಾರ ವೆಸಗಿದ್ದಾನೆ. ಆರೋಪಿಗಳು ಸಂತ್ರಸ್ತೆಯ ತಲೆ, ಕೈಗಳು, ಕುತ್ತಿಗೆ ಮತ್ತು ಎದೆಯ ಮೇಲೆ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಬಳಿಕ ಮಹಿಳೆಯ ಮನೆಯಲ್ಲಿಟ್ಟಿದ್ದ 1 ಸಾವಿರ ರೂ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಬಾಲಕ ಪರಾರಿಯಾಗಿದ್ದ, ಇದೀಗ ಪೊಲೀಸರ ಮುಂದೆ ಬಾಲಕ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಬಾಲಕನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ